AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmers Protest: ದೇಶವ್ಯಾಪಿ ರೈತ ಹೋರಾಟ, 40 ಲಕ್ಷ ಟ್ರ್ಯಾಕ್ಟರ್​ಗಳ ಚಳುವಳಿ: ರಾಕೇಶ್ ಟಿಕಾಯತ್

Farmers Protest: ನರೇಂದ್ರ ಮೋದಿ ಯಾವ ಚಳುವಳಿಯಲ್ಲೂ ಭಾಗವಹಿಸಿಲ್ಲ. ಅವರಿಗೆ ಆಂದೋಲನ ಜೀವಿಗಳ ಬಗ್ಗೆ ಏನು ತಿಳಿದಿರಬೇಕು ಎಂದು ರಾಕೇಶ್ ಟಿಕಾಯತ್ ಪ್ರಶ್ನಿಸಿದ್ದಾರೆ.

Farmers Protest: ದೇಶವ್ಯಾಪಿ ರೈತ ಹೋರಾಟ, 40 ಲಕ್ಷ ಟ್ರ್ಯಾಕ್ಟರ್​ಗಳ ಚಳುವಳಿ: ರಾಕೇಶ್ ಟಿಕಾಯತ್
ಭಾರತೀಯ ಕಿಸಾನ್ ಯೂನಿಯನ್​ ಮುಖಂಡ ರಾಕೇಶ್ ಟಿಕಾಯತ್
Follow us
TV9 Web
| Updated By: ganapathi bhat

Updated on:Apr 06, 2022 | 8:04 PM

ದೆಹಲಿ: ರೈತ ಚಳುವಳಿಯು ಹೀಗೆಯೇ ಯಶಸ್ವಿಯಾಗಿ ಮುಂದುವರಿಯುತ್ತದೆ ಮತ್ತು ದೇಶದ ಇತರೆಡೆಗಳಿಗೂ ವ್ಯಾಪಿಸಿ ಬೆಳೆಯುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್ (BKU) ನಾಯಕ ರಾಕೇಶ್ ಟಿಕಾಯತ್ ತಿಳಿಸಿದರು. ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯ ಪೆಹೊವಾದಲ್ಲಿ ನಡೆದ ‘ಕಿಸಾನ್ ಮಹಾಪಂಚಾಯತ್’ನಲ್ಲಿ ಇಂದು (ಫೆ.9) ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಉಲ್ಲೇಖಿಸಿದ ‘ಆಂದೋಲನ್ ಜೀವಿ’ ಎಂಬ ಪದಕ್ಕೆ ಸಂಬಂಧಿಸಿ ರಾಕೇಶ್ ಟಿಕಾಯತ್ ಇಂದು ಪ್ರತಿಕ್ರಿಯೆ ನೀಡಿದರು.

ನರೇಂದ್ರ ಮೋದಿ ತಮ್ಮ ಜೀವನದಲ್ಲಿ ಯಾವೊಂದು ಚಳುವಳಿಯಲ್ಲೂ ಭಾಗವಹಿಸಿಲ್ಲ. ದೇಶ ಒಡೆಯುವ ಕೆಲಸವನ್ನೇ ಮಾಡಿದ್ದಾರೆ. ಅವರಿಗೆ ಆಂದೋಲನ ಜೀವಿಗಳ ಬಗ್ಗೆ ಏನು ತಿಳಿದಿರಬೇಕು ಎಂದು ಪ್ರಶ್ನಿಸಿದ್ದಾರೆ. ಭಗತ್ ಸಿಂಗ್ ಹಾಗೂ ಲಾಲ್​ಕೃಷ್ಣ ಅಡ್ವಾಣಿ ಕೂಡ ಆಂದೋಲನದ ಭಾಗವಾಗಿದ್ದವರೇ. ಸರ್ಕಾರ ರೈತ ಅಹವಾಲುಗಳಿಗೆ ಮನ್ನಣೆ ನೀಡದೇ ಹೋದರೆ, ನಾಲ್ಕು ಲಕ್ಷ ಟ್ರ್ಯಾಕ್ಟರ್​ಗಳಲ್ಲ, 40 ಲಕ್ಷ ಟ್ರ್ಯಾಕ್ಟರ್​ಗಳ ಚಳುವಳಿ ನಡೆಸುತ್ತೇವೆ ಎಂದು ಗುಡುಗಿದರು.

ಕೇಂದ್ರದ ನೂತನ ಕೃಷಿ ತಿದ್ದುಪಡಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯು ಅಕ್ಟೋಬರ್ 2ರ ವರೆಗೂ ಮುಂದುವರಿಯುತ್ತದೆ. ಅಂದರೆ, ಆ ಬಳಿಕ ಹೋರಾಟ ನಿಲ್ಲುತ್ತದೆ ಎಂದಲ್ಲ. ಬೇಡಿಕೆ ಈಡೇರದಿದ್ದರೆ ಆ ನಂತರವೂ ಚಳುವಳಿ ನಡೆಸುತ್ತೇವೆ. ಪ್ರತಿಭಟನಾ ಸ್ಥಳಕ್ಕೆ ರೈತರು ತಂಡ ತಂಡವಾಗಿ ಬರುತ್ತೇವೆ ಎಂದು ತಿಳಿಸಿದರು.

ಬಾನುವಾರ, ರಾಜಸ್ಥಾನದ ಭವಾನಿ ಜಿಲ್ಲೆಯಲ್ಲಿ ನಡೆದ ಕಿಸಾನ್ ಮಹಾಪಂಚಾಯತ್​ನಲ್ಲಿ ರಾಕೇಶ್ ಟಿಕಾಯತ್ ಭಾಗವಹಿಸಿದ್ದರು. ಹರ್ಯಾಣದ ಜಿಂದ್ ಜಿಲ್ಲೆಯಲ್ಲೂ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ಟಿಕಾಯತ್ ಮಾತನಾಡಿದ್ದರು.

ಸರ್ಕಾರ ಪ್ರತಿಭಟನಾ ನಿರತ ರೈತರನ್ನು ಹರ್ಯಾಣ ಮತ್ತು ಪಂಜಾಬ್ ಎಂಬ ನೆಲೆಯಲ್ಲಿ ಒಡೆಯಲು ಪ್ರಯತ್ನಿಸಿದೆ. ನಾವು ಇಂತಹ ಕ್ರಮಗಳ ವಿರುದ್ಧ ದೃಢ ನಿರ್ಧಾರ ಕೈಗೊಳ್ಳಬೇಕು. ಇಬ್ಬರು ಸರ್ಕಾರಿ ಅಧಿಕಾರಿಗಳು ನಿನ್ನೆ ನನ್ನನ್ನು ಭೇಟಿಯಾಗಲು ಬಂದರು. ಆದರೆ, ಪ್ರತಿ ಸಭೆ ಕೂಡ ಕಿಸಾನ್ ಮೋರ್ಚಾದ 40 ಸದಸ್ಯರ ಸಮ್ಮುಖದಲ್ಲಿ ನಡೆಯಬೇಕು. ಹಾಗಾಗಿ, ನನ್ನೊಬ್ಬನ ಜೊತೆಯ ಮಾತುಕತೆಗೆ ನಾನು ಒಪ್ಪಲಿಲ್ಲ ಎಂದು BKU ನಾಯಕ ರಾಕೇಶ್ ಟಿಕಾಯತ್ ಹೇಳಿದರು.

ರೈತ ಸಮುದಾಯದ 40 ಸಂಘಟನೆಗಳ ಪೈಕಿ, ಭಾರತೀಯ ಕಿಸಾನ್ ಯೂನಿಯನ್​ನ ರಾಕೇಶ್ ಟಿಕಾಯತ್ ರೈತ ಹೋರಾಟದ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ ಈವೆರೆಗೆ ನಡೆದಿರುವ 11 ಸುತ್ತಿನ ಮಾತುಕತೆಗಳಲ್ಲೂ ಟಿಕಾಯತ್ ಭಾಗವಹಿಸಿದ್ದಾರೆ.

Farmers Protest: ರೈತ ಹೋರಾಟ ಸಂಘಟನೆಗೆ ಹರ್ಯಾಣದಲ್ಲಿ ‘ಮಹಾಪಂಚಾಯತ್’; ಸಹಸ್ರಾರು ರೈತರು ಭಾಗಿ

Published On - 8:52 pm, Tue, 9 February 21

ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?