AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನೆ ಸ್ಥಳ ಬದಲಿಸಿದರೆ ಮಾತುಕತೆ ಎಂಬ ಅಮಿತ್​ ಶಾ ಷರತ್ತಿಗೆ ರೈತರ ತಿರಸ್ಕಾರ

ಸರ್ಕಾರದೊಂದಿಗೆ ಮಾತುಕತೆ ನಡೆಸಲು ರೈತರು ಸಿದ್ಧರಿದ್ದಾರೆ. ಆದರೆ ಮಾತುಕತೆಗೆ ಬರುವಾಗ ಸರ್ಕಾರವು ತೆರೆದ ಹೃದಯದಿಂದ ಬರಬೇಕೆ ವಿನಃ ಷರತ್ತುಗಳೊಂದಿಗೆ ಅಲ್ಲ ಎಂದು ಪ್ರತಿಭಟನಾನಿರತರು ಹೇಳಿದ್ದಾರೆ.

ಪ್ರತಿಭಟನೆ ಸ್ಥಳ ಬದಲಿಸಿದರೆ ಮಾತುಕತೆ ಎಂಬ ಅಮಿತ್​ ಶಾ ಷರತ್ತಿಗೆ ರೈತರ ತಿರಸ್ಕಾರ
ದೆಹಲಿ-ನೋಯ್ಡಾ ಗಡಿಯಲ್ಲಿ ರೈತರು.
Ghanashyam D M | ಡಿ.ಎಂ.ಘನಶ್ಯಾಮ
|

Updated on:Nov 29, 2020 | 7:04 PM

Share

ದೆಹಲಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್ ರೈತರು, ಪ್ರತಿಭಟನೆಯ ಸ್ಥಳ ಬದಲಿಸಿದರೆ ಮಾತುಕತೆ ಎಂಬ ಕೇಂದ್ರ ಗೃಹ ಸಚಿವ ಅಮಿತ್​ ಶಾ ಷರತ್ತನ್ನು ತಿರಸ್ಕರಿಸಿದ್ದಾರೆ.

ಸರ್ಕಾರದೊಂದಿಗೆ ಮಾತುಕತೆ ನಡೆಸಲು ರೈತರು ಸಿದ್ಧರಿದ್ದಾರೆ. ಆದರೆ ಮಾತುಕತೆಗೆ ಬರುವಾಗ ಸರ್ಕಾರವು ತೆರೆದ ಹೃದಯದಿಂದ ಬರಬೇಕೆ ವಿನಃ ಷರತ್ತುಗಳೊಂದಿಗೆ ಅಲ್ಲ ಎಂದು ಹೇಳಿದ್ದಾರೆ.

ಅಮಿತ್ ಶಾ ಮುಂದಿಟ್ಟ ಮಾತುಕತೆ ಪ್ರಸ್ತಾವ ಕುರಿತು ಇಂದು (ನ.29) ಮುಂಜಾನೆ ನಡೆದ ರೈತ ನಾಯಕರ ಸಭೆಯಲ್ಲಿ ಚರ್ಚೆ ನಡೆಯಿತು. ಅಮಿತ್​ ಶಾ ಪ್ರಸ್ತಾವ ತಿರಸ್ಕರಿಸುವ ಬಗ್ಗೆ ರೈತ ನಾಯಕರು ತೀರ್ಮಾನ ತೆಗೆದುಕೊಂಡರು.

ಅವಶ್ಯಕತೆ ಬಿದ್ದರೆ ಕ್ರೀಡಾಂಗಣಗಳನ್ನು ಜೈಲುಗಳನ್ನಾಗಿ ಬದಲಿಸಬಹುದು ಎಂಬ ದೆಹಲಿ ಪೊಲೀಸರ ಸಲಹೆ ರೈತರಲ್ಲಿ ಆತಂಕ ಮೂಡಿಸಿದಂತಿದೆ. ಆದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಸಲಹೆಯನ್ನು ಸಾರಾಸಗಟಾಗಿ ತಳ್ಳಿ ಹಾಕಿದ್ದರು. ಪ್ರತಿಭಟನಾಕಾರರು ದೆಹಲಿಯ ಅತಿಥಿಗಳು ಎಂದು ಭರವಸೆ ತುಂಬಲು ಯತ್ನಿಸಿದ್ದರು. ಆದರೂ, ದೆಹಲಿಯ ಗಡಿಯಲ್ಲಿಯೇ ಕುಳಿತುಕೊಳ್ಳುತ್ತೇವೆ ಎಂದು ರೈತರು ಇದೀಗ ಪಟ್ಟು ಹಿಡಿದಿದ್ದಾರೆ.

ನಿನ್ನೆ (ನ.28) ರೈತ ಸಂಘಟನೆಗಳ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ್ದ ಅಮಿತ್ ಶಾ, ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ರೈತರ ಎಲ್ಲ ಪ್ರಶ್ನೆಗಳನ್ನು ಆಲಿಸಲು ಮತ್ತು ಬೇಡಿಕೆಗಳನ್ನು ಪರಿಗಣಿಸಲು ಸರ್ಕಾರ ಸಿದ್ಧವಿದೆ. ಆದಕ್ಕೆ ಅದಕ್ಕೂ ಮೊದಲು ರೈತರು ನಿಗದಿತ ಸ್ಥಳಕ್ಕೆ ತೆರಳಬೇಕು ಎಂಬ ಷರತ್ತು ವಿಧಿಸಿದ್ದರು.

ನರೇಲಾದ ದೆಹಲಿ-ಹರ್ಯಾಣ ಗಡಿಯಲ್ಲಿ ಪೊಲೀಸರ ಭದ್ರತಾ ಕೋಟೆ ಭೇದಿಸುವಲ್ಲಿ ರೈತರು ಯಶಸ್ವಿಯಾದರು. ಬ್ಯಾರಿಕೇಡ್​ಗಳನ್ನು ಬದಿಗೆ ಸರಿಸಿ ಮುನ್ನುಗ್ಗಿದ್ದರು.

ಈ ನಡುವೆ, ಇಂದಿನ ಮನ್​ ಕಿ ಬಾತ್ ರೇಡಿಯೊ ಭಾಷಣದಲ್ಲಿ ಕೃಷಿ ಕಾನೂನುಗಳ ಬಗ್ಗೆ ಪ್ರಸ್ತಾಪಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಕೃಷಿ ಕಾನೂನುಗಳು ರೈತರಿಗೆ ಬಲ ತುಂಬುತ್ತವೆ ಎಂದು ಹೇಳಿದ್ದರು.

ಅಮಿತ್ ಶಾ ಸ್ಪಷ್ಟನೆ

ಹೈದರಾಬಾದ್ ವರದಿ: GHMC ಚುನಾವಣಾ ಪ್ರಚಾರದ ನಂತರ ಸಿಕಂದರಾಬಾದ್​ನಲ್ಲಿ ಗೃಹ ಸಚಿವ ಅಮಿತ್ ಶಾ ಪತ್ರಿಕಾಗೋಷ್ಠಿ ನಡೆಸಿದರು. ಪಂಜಾಬ್ ರೈತರ ದೆಹಲಿ ಚಲೋ ಪ್ರತಿಭಟನೆ ರಾಜಕೀಯ ಪ್ರೇರಿತವೆಂದು ತಾವು ಎಲ್ಲೂ ಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಮಿತ್ ಶಾ, ತಾವು ಎಂದೂ ಪಂಜಾಬ್ ರೈತರ ಪ್ರತಿಭಟನೆಯನ್ನು ಕಡೆಗಣಿಸಿಲ್ಲ. ರೈತರ ಪ್ರತಿಯೊಂದು ಸಮಸ್ಯೆಗಳಗಳನ್ನು ಆಲಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದರು.

ಇನ್ನಷ್ಟು…

ಏನೇ ಆಗ್ಲಿ, ದೆಹಲಿ ತಲುಪೇ ತಲುಪುತ್ತೇವೆ -6 ತಿಂಗಳ ದಿನಸಿ ಹೊತ್ತು ದೆಹಲಿಯತ್ತ ಸಾಗಿದ ರೈತನ ಆಕ್ರೋಶ Delhi Chalo: ಪ್ರತಿಭಟನೆ ಕೊನೆಗೊಳಿಸುವಂತೆ ರೈತರಿಗೆ ಕೇಂದ್ರ ಕೃಷಿ ಸಚಿವ ತೋಮರ್ ಮನವಿ! ರೈತರ ಉಗ್ರ ಹೋರಾಟದ ನಡುವೆ ಕೃಷಿ ಕಾಯ್ದೆಯನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ

Published On - 6:56 pm, Sun, 29 November 20

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!