AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Bandh: ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ಶುರು; ಹೆದ್ದಾರಿಗಳೆಲ್ಲ ಬಂದ್​

ನಿನ್ನೆ ಈ ಬಗ್ಗೆ ಹೇಳಿಕೆ ನೀಡಿದ್ದ ಭಾರತೀಯ ಕಿಸಾನ್​ ಯೂನಿಯನ್​ (BKU) ಮುಖಂಡ, ಸೆಪ್ಟೆಂಬರ್​ 26ರಂದು ನಾವು ನಡೆಸಲಿರುವ ಭಾರತ್​ ಬಂದ್​ ಐತಿಹಾಸಿಕವಾಗಿರಲಿದೆ ಎಂದಿದ್ದರು.

Bharat Bandh: ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ಶುರು; ಹೆದ್ದಾರಿಗಳೆಲ್ಲ ಬಂದ್​
ಗಾಜಿಯಾಬಾದ್​​ನ ಹೈವೇ ನಲ್ಲಿ ಪ್ರತಿಭಟನೆ ಶುರು ಮಾಡಿರುವ ರೈತರು
TV9 Web
| Edited By: |

Updated on:Sep 27, 2021 | 8:46 AM

Share

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಜಾರಿ ಮಾಡಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್​ ಮೋರ್ಚಾ (SKM) ಇಂದು ಭಾರತ್​ ಬಂದ್(Bharat Bandh)​ಗೆ ಕರೆನೀಡಿದೆ. ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಭಾರತ್​ ಬಂದ್​ ನಡೆಸುತ್ತಿದ್ದಾರೆ. ಈಗಾಗಲೇ ದೆಹಲಿಯ ಗಡಿ ಭಾಗಗಳಲ್ಲಿ ರೈತರ ಪ್ರತಿಭಟನೆ (Farmers Protest) ತೀವ್ರಗೊಂಡಿದ್ದು, ಪಂಜಾಬ್​-ಹರ್ಯಾಣ ಗಡಿ (ಸಂಭು ಗಡಿ) ಮತ್ತು ಹರ್ಯಾಣದ ಶಹಬಾದ್​​​ನಲ್ಲಿರುವ ದೆಹಲಿ-ಅಮೃತ್​ಸರ್​ ಹೆದ್ದಾರಿಯನ್ನು ರೈತರು ಬಂದ್​ ಮಾಡಿದ್ದಾರೆ. ದೆಹಲಿ-ಉತ್ತರಪ್ರದೇಶ ಹೆದ್ದಾರಿಗಳೂ ಬಂದ್​ ಆಗಿವೆ.  2020ರ ಸೆಪ್ಟೆಂಬರ್​ 27ರಂದು ಮೂರು ಕೃಷಿ ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್​ ಅವರು ಸಹಿ ಹಾಕುವ ಮೂಲಕ ಅದು ಕಾಯ್ದೆಗಳಾಗಿ ಜಾರಿಗೆ ಬಂದಿತ್ತು. ಇಂದು ಬೆಳಗ್ಗೆ 6 ಗಂಟೆಯಿಂದಲೇ ಬಂದ್​ ಶುರುವಾಗಿದ್ದು, ಸಂಜೆ 4ಗಂಟೆವರೆಗೆ ಮುಂದುವರಿಯಲಿದೆ.  

ಭಾರತ್​ ಬಂದ್​ಗೆ ಎಲ್ಲರೂ ಸಹಕಾರ ಕೊಡಬೇಕು. ಮಾಲೀಕರು ತಮ್ಮ ಅಂಗಡಿಗಳನ್ನು ಮುಚ್ಚಿ ಸಹಕಾರ ನೀಡಬೇಕು ಎಂದು ಒತ್ತಾಯಿಸಿರುವ ರೈತ ಸಂಘಟನೆಗಳು, ಶಾಂತಿಯುತ ಪ್ರತಿಭಟನೆ ಸಂಬಂಧ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದ್ದಾರೆ.  ಕಳೆದ 11 ತಿಂಗಳಿಂದಲೂ ದೆಹಲಿಯ ಗಡಿ ಭಾಗಗಳಲ್ಲಿ ನೂರಾರು ರೈತರು ಹೋರಾಟ ನಡೆಸುತ್ತಲೇ ಇದ್ದಾರೆ. ಪಂಜಾಬ್​​ನ ಬರ್ನಾಲಾ ರೈಲ್ವೆ ಸ್ಟೇಶನ್​​ನಲ್ಲಿ ಪ್ರತಿಭಟನೆ ಶುರುವಾಗಿದೆ. ರೈತರು ಬಹುತೇಕ ಹೆದ್ದಾರಿ ಮತ್ತು ರೈಲ್ವೆ ಹಳಿಗಳಲ್ಲೇ ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ನಿನ್ನೆ ಈ ಬಗ್ಗೆ ಹೇಳಿಕೆ ನೀಡಿದ್ದ ಭಾರತೀಯ ಕಿಸಾನ್​ ಯೂನಿಯನ್​ (BKU) ಮುಖಂಡ, ಸೆಪ್ಟೆಂಬರ್​ 26ರಂದು ನಾವು ನಡೆಸಲಿರುವ ಭಾರತ್​ ಬಂದ್​ ಐತಿಹಾಸಿಕವಾಗಿರಲಿದೆ. ಎಲ್ಲ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನೂ ಬಂದ್​ ಮಾಡುತ್ತೇವೆ. ದೆಹಲಿಯ ದಾಸ್ನಾ, ಮೋದಿನಗರ್​, ಗರ್ಮುಕ್ಟೇಶ್ವರ್,​ ದುಹಾಯ್​, ಸಿಂಘು ಗಡಿಗಳು ಬ್ಲಾಕ್​ ಆಗಲಿವೆ ಎಂದು ತಿಳಿಸಿದ್ದರು.

ಇದನ್ನೂ ಓದಿ: Virat Kohli: ಹ್ಯಾಟ್ರಿಕ್ ಸೋಲಿನಿಂದ ಪಾರಾಗಿ ರೋಚಕ ಗೆಲುವಿನ ಬಗ್ಗೆ ಇಂಚಿಂಚು ಮಾಹಿತಿ ತೆರೆದಿಟ್ಟ ವಿರಾಟ್ ಕೊಹ್ಲಿ

ಕೃಷಿ ಕಾಯ್ದೆ- ಬೆಲೆ ಏರಿಕೆ ವಿರೋಧಿಸಿ ಭಾರತ್ ಬಂದ್: ಬೆಂಗಳೂರಿನಲ್ಲಿ ಬಂದ್ ಠುಸ್ ಪಟಾಕಿ 

Published On - 8:42 am, Mon, 27 September 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್