AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೆಹಲಿ ಚಲೋ’ ಪ್ರತಿಭಟನಾಕಾರರ ರೌದ್ರಾವತಾರ; ಪೊಲೀಸರತ್ತ ಇಟ್ಟಿಗೆ ಎಸೆದ ರೈತರು

ಕೈಯಲ್ಲಿ ಖಡ್ಗ, ಕೋಲುಗಳನ್ನು ಹಿಡಿದು ಮೆರವಣಿಗೆ ಹೊರಟಿರುವ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದು, ಗಡಿಭಾಗಗಳನ್ನು ಮುಚ್ಚಲಾಗಿದೆ. ಹೆಚ್ಚಿನ ಪೊಲೀಸ್​ ಭದ್ರತೆ ನಿಯೋಜಿಸಲಾಗಿದೆ.

‘ದೆಹಲಿ ಚಲೋ' ಪ್ರತಿಭಟನಾಕಾರರ ರೌದ್ರಾವತಾರ; ಪೊಲೀಸರತ್ತ ಇಟ್ಟಿಗೆ ಎಸೆದ ರೈತರು
‘ದೆಹಲಿ ಚಲೋ‘ ಚಳವಳಿಗೆಂದು ಧಾವಿಸುತ್ತಿರುವ ರೈತರು
Lakshmi Hegde
| Edited By: |

Updated on:Nov 26, 2020 | 1:12 PM

Share

ದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಪಂಜಾಬ್​ ಮತ್ತು ಹರ್ಯಾಣದ ರೈತರು ದೆಹಲಿ ಚಲೋ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಫತೇಹಾಬಾದ್​​ನಿಂದ ಪ್ರತಿಭಟನಾ ಮೆರವಣಿಗೆ ಶುರು ಮಾಡಿದ್ದು, ಟ್ರ್ಯಾಕ್ಟರ್​ ಸೇರಿ ಹಲವು ವಾಹನಗಳಲ್ಲಿ ರಾಷ್ಟ್ರ ರಾಜಧಾನಿಯತ್ತ ದಂಡುದಂಡಾಗಿ ಸಾಗುತ್ತಿದ್ದಾರೆ.

ಕೈಯಲ್ಲಿ ಖಡ್ಗ, ಕೋಲುಗಳನ್ನು ಹಿಡಿದು ಮೆರವಣಿಗೆ ಹೊರಟಿರುವ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದು, ಗಡಿಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಹೆಚ್ಚಿನ ಪೊಲೀಸ್​ ಭದ್ರತೆ ನಿಯೋಜಿಸಲಾಗಿದೆ.

ಈ ಮಧ್ಯ ಪ್ರತಿಭಟನಾಕಾರರು ಪುಂಡಾಟ ಮೆರೆದಿದ್ದು, ಅಂಬಾಲಾದ ಶಂಭು ಗಡಿ ಸಮೀಪ ಸೇತುವೆ ಬಳಿ ಹಾಕಲಾದ ಬ್ಯಾರಿಕೇಡ್​ಗಳನ್ನು ಕಿತ್ತು ನದಿಗೆ ಎಸೆದಿದ್ದಾರೆ. ಅಷ್ಟೇ ಅಲ್ಲ ಪೊಲೀಸರ ಕಡೆಗೆ ಇಟ್ಟಿಗೆ, ಕಲ್ಲುಗಳನ್ನೂ ಎಸೆದಿದ್ದಾರೆ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಅಶ್ರುವಾಯು, ಜಲಫಿರಂಗಿಗಳನ್ನು ಪ್ರಯೋಗ ಮಾಡಿದ್ದಾರೆ. ಸೇತುವೆ ಮೇಲೆ ಸುಮಾರು ಎರಡು ತಾಸು, ಪ್ರತಿಭಟನಾಕಾರರು-ಪೊಲೀಸರ ನಡುವೆ ಘರ್ಷಣೆ ನಡೆದಿದೆ.

ಗಡಿ ಬಂದ್ ಮಾಡಿದ್ರೂ ಜಗ್ಗಲಿಲ್ಲ ಹರ್ಯಾಣ ಬಿಜೆಪಿ ಸರ್ಕಾರ ಪ್ರತಿಭಟನಾಕಾರರು ತಡೆಯಲು ತುಂಬ ಪ್ರಯತ್ನ ಮಾಡಿತ್ತು. ಗಡಿ ಬಂದ್ ಮಾಡಿ, ಪೊಲೀಸರ ಭದ್ರತೆ ಹೆಚ್ಚಿಸಿದ್ದರೂ ಜಗ್ಗದ ರೈತರು ಹರ್ಯಾಣ ಪ್ರವೇಶಿಸಿದ್ದಾರೆ. ಪಂಜಾಬ್​ನ ಪಟಿಯಾಲಾದಲ್ಲಿ ಬಸ್​ಸ್ಟ್ಯಾಂಡ್​ಗಳನ್ನು ಕ್ಲೋಸ್ ಮಾಡಲಾಗಿದೆ. ಸಾರ್ವಜನಿಕ ವಾಹನ ಸಂಚಾರ ಇಂದು ಮತ್ತು ನಾಳೆ ಸ್ಥಗಿತಗೊಳ್ಳಲಿದೆ.

ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ತರುವುದಕ್ಕೂ ಮೊದಲೇ ಶುರುವಾದ ಪ್ರತಿಭಟನೆ ಇನ್ನೂ ಮುಂದುವರಿಯುತ್ತಲೇ ಇದೆ. ಇದೀಗ ಉತ್ತರ ಪ್ರದೇಶ, ಹರ್ಯಾಣ, ಉತ್ತರಾಖಂಡ, ರಾಜಸ್ಥಾನ, ಕೇರಳ, ಪಂಜಾಬ್​ಗಳ ಸಾವಿರಕ್ಕೂ ಹೆಚ್ಚು ರೈತರು ದೆಹಲಿ ಚಲೋ ಚಳವಳಿಯಲ್ಲಿ ಪಾಲ್ಗೊಂಡಿದ್ದಾರೆ.

Published On - 1:09 pm, Thu, 26 November 20

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ