Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೆಹಲಿ ಚಲೋ’ ಪ್ರತಿಭಟನಾಕಾರರ ರೌದ್ರಾವತಾರ; ಪೊಲೀಸರತ್ತ ಇಟ್ಟಿಗೆ ಎಸೆದ ರೈತರು

ಕೈಯಲ್ಲಿ ಖಡ್ಗ, ಕೋಲುಗಳನ್ನು ಹಿಡಿದು ಮೆರವಣಿಗೆ ಹೊರಟಿರುವ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದು, ಗಡಿಭಾಗಗಳನ್ನು ಮುಚ್ಚಲಾಗಿದೆ. ಹೆಚ್ಚಿನ ಪೊಲೀಸ್​ ಭದ್ರತೆ ನಿಯೋಜಿಸಲಾಗಿದೆ.

‘ದೆಹಲಿ ಚಲೋ' ಪ್ರತಿಭಟನಾಕಾರರ ರೌದ್ರಾವತಾರ; ಪೊಲೀಸರತ್ತ ಇಟ್ಟಿಗೆ ಎಸೆದ ರೈತರು
‘ದೆಹಲಿ ಚಲೋ‘ ಚಳವಳಿಗೆಂದು ಧಾವಿಸುತ್ತಿರುವ ರೈತರು
Follow us
Lakshmi Hegde
| Updated By: ganapathi bhat

Updated on:Nov 26, 2020 | 1:12 PM

ದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಪಂಜಾಬ್​ ಮತ್ತು ಹರ್ಯಾಣದ ರೈತರು ದೆಹಲಿ ಚಲೋ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಫತೇಹಾಬಾದ್​​ನಿಂದ ಪ್ರತಿಭಟನಾ ಮೆರವಣಿಗೆ ಶುರು ಮಾಡಿದ್ದು, ಟ್ರ್ಯಾಕ್ಟರ್​ ಸೇರಿ ಹಲವು ವಾಹನಗಳಲ್ಲಿ ರಾಷ್ಟ್ರ ರಾಜಧಾನಿಯತ್ತ ದಂಡುದಂಡಾಗಿ ಸಾಗುತ್ತಿದ್ದಾರೆ.

ಕೈಯಲ್ಲಿ ಖಡ್ಗ, ಕೋಲುಗಳನ್ನು ಹಿಡಿದು ಮೆರವಣಿಗೆ ಹೊರಟಿರುವ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದು, ಗಡಿಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಹೆಚ್ಚಿನ ಪೊಲೀಸ್​ ಭದ್ರತೆ ನಿಯೋಜಿಸಲಾಗಿದೆ.

ಈ ಮಧ್ಯ ಪ್ರತಿಭಟನಾಕಾರರು ಪುಂಡಾಟ ಮೆರೆದಿದ್ದು, ಅಂಬಾಲಾದ ಶಂಭು ಗಡಿ ಸಮೀಪ ಸೇತುವೆ ಬಳಿ ಹಾಕಲಾದ ಬ್ಯಾರಿಕೇಡ್​ಗಳನ್ನು ಕಿತ್ತು ನದಿಗೆ ಎಸೆದಿದ್ದಾರೆ. ಅಷ್ಟೇ ಅಲ್ಲ ಪೊಲೀಸರ ಕಡೆಗೆ ಇಟ್ಟಿಗೆ, ಕಲ್ಲುಗಳನ್ನೂ ಎಸೆದಿದ್ದಾರೆ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಅಶ್ರುವಾಯು, ಜಲಫಿರಂಗಿಗಳನ್ನು ಪ್ರಯೋಗ ಮಾಡಿದ್ದಾರೆ. ಸೇತುವೆ ಮೇಲೆ ಸುಮಾರು ಎರಡು ತಾಸು, ಪ್ರತಿಭಟನಾಕಾರರು-ಪೊಲೀಸರ ನಡುವೆ ಘರ್ಷಣೆ ನಡೆದಿದೆ.

ಗಡಿ ಬಂದ್ ಮಾಡಿದ್ರೂ ಜಗ್ಗಲಿಲ್ಲ ಹರ್ಯಾಣ ಬಿಜೆಪಿ ಸರ್ಕಾರ ಪ್ರತಿಭಟನಾಕಾರರು ತಡೆಯಲು ತುಂಬ ಪ್ರಯತ್ನ ಮಾಡಿತ್ತು. ಗಡಿ ಬಂದ್ ಮಾಡಿ, ಪೊಲೀಸರ ಭದ್ರತೆ ಹೆಚ್ಚಿಸಿದ್ದರೂ ಜಗ್ಗದ ರೈತರು ಹರ್ಯಾಣ ಪ್ರವೇಶಿಸಿದ್ದಾರೆ. ಪಂಜಾಬ್​ನ ಪಟಿಯಾಲಾದಲ್ಲಿ ಬಸ್​ಸ್ಟ್ಯಾಂಡ್​ಗಳನ್ನು ಕ್ಲೋಸ್ ಮಾಡಲಾಗಿದೆ. ಸಾರ್ವಜನಿಕ ವಾಹನ ಸಂಚಾರ ಇಂದು ಮತ್ತು ನಾಳೆ ಸ್ಥಗಿತಗೊಳ್ಳಲಿದೆ.

ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ತರುವುದಕ್ಕೂ ಮೊದಲೇ ಶುರುವಾದ ಪ್ರತಿಭಟನೆ ಇನ್ನೂ ಮುಂದುವರಿಯುತ್ತಲೇ ಇದೆ. ಇದೀಗ ಉತ್ತರ ಪ್ರದೇಶ, ಹರ್ಯಾಣ, ಉತ್ತರಾಖಂಡ, ರಾಜಸ್ಥಾನ, ಕೇರಳ, ಪಂಜಾಬ್​ಗಳ ಸಾವಿರಕ್ಕೂ ಹೆಚ್ಚು ರೈತರು ದೆಹಲಿ ಚಲೋ ಚಳವಳಿಯಲ್ಲಿ ಪಾಲ್ಗೊಂಡಿದ್ದಾರೆ.

Published On - 1:09 pm, Thu, 26 November 20

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ