AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೆಹಲಿ ಚಲೋ’ ಪ್ರತಿಭಟನಾಕಾರರ ರೌದ್ರಾವತಾರ; ಪೊಲೀಸರತ್ತ ಇಟ್ಟಿಗೆ ಎಸೆದ ರೈತರು

ಕೈಯಲ್ಲಿ ಖಡ್ಗ, ಕೋಲುಗಳನ್ನು ಹಿಡಿದು ಮೆರವಣಿಗೆ ಹೊರಟಿರುವ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದು, ಗಡಿಭಾಗಗಳನ್ನು ಮುಚ್ಚಲಾಗಿದೆ. ಹೆಚ್ಚಿನ ಪೊಲೀಸ್​ ಭದ್ರತೆ ನಿಯೋಜಿಸಲಾಗಿದೆ.

‘ದೆಹಲಿ ಚಲೋ' ಪ್ರತಿಭಟನಾಕಾರರ ರೌದ್ರಾವತಾರ; ಪೊಲೀಸರತ್ತ ಇಟ್ಟಿಗೆ ಎಸೆದ ರೈತರು
‘ದೆಹಲಿ ಚಲೋ‘ ಚಳವಳಿಗೆಂದು ಧಾವಿಸುತ್ತಿರುವ ರೈತರು
Lakshmi Hegde
| Edited By: |

Updated on:Nov 26, 2020 | 1:12 PM

Share

ದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಪಂಜಾಬ್​ ಮತ್ತು ಹರ್ಯಾಣದ ರೈತರು ದೆಹಲಿ ಚಲೋ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಫತೇಹಾಬಾದ್​​ನಿಂದ ಪ್ರತಿಭಟನಾ ಮೆರವಣಿಗೆ ಶುರು ಮಾಡಿದ್ದು, ಟ್ರ್ಯಾಕ್ಟರ್​ ಸೇರಿ ಹಲವು ವಾಹನಗಳಲ್ಲಿ ರಾಷ್ಟ್ರ ರಾಜಧಾನಿಯತ್ತ ದಂಡುದಂಡಾಗಿ ಸಾಗುತ್ತಿದ್ದಾರೆ.

ಕೈಯಲ್ಲಿ ಖಡ್ಗ, ಕೋಲುಗಳನ್ನು ಹಿಡಿದು ಮೆರವಣಿಗೆ ಹೊರಟಿರುವ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದು, ಗಡಿಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಹೆಚ್ಚಿನ ಪೊಲೀಸ್​ ಭದ್ರತೆ ನಿಯೋಜಿಸಲಾಗಿದೆ.

ಈ ಮಧ್ಯ ಪ್ರತಿಭಟನಾಕಾರರು ಪುಂಡಾಟ ಮೆರೆದಿದ್ದು, ಅಂಬಾಲಾದ ಶಂಭು ಗಡಿ ಸಮೀಪ ಸೇತುವೆ ಬಳಿ ಹಾಕಲಾದ ಬ್ಯಾರಿಕೇಡ್​ಗಳನ್ನು ಕಿತ್ತು ನದಿಗೆ ಎಸೆದಿದ್ದಾರೆ. ಅಷ್ಟೇ ಅಲ್ಲ ಪೊಲೀಸರ ಕಡೆಗೆ ಇಟ್ಟಿಗೆ, ಕಲ್ಲುಗಳನ್ನೂ ಎಸೆದಿದ್ದಾರೆ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಅಶ್ರುವಾಯು, ಜಲಫಿರಂಗಿಗಳನ್ನು ಪ್ರಯೋಗ ಮಾಡಿದ್ದಾರೆ. ಸೇತುವೆ ಮೇಲೆ ಸುಮಾರು ಎರಡು ತಾಸು, ಪ್ರತಿಭಟನಾಕಾರರು-ಪೊಲೀಸರ ನಡುವೆ ಘರ್ಷಣೆ ನಡೆದಿದೆ.

ಗಡಿ ಬಂದ್ ಮಾಡಿದ್ರೂ ಜಗ್ಗಲಿಲ್ಲ ಹರ್ಯಾಣ ಬಿಜೆಪಿ ಸರ್ಕಾರ ಪ್ರತಿಭಟನಾಕಾರರು ತಡೆಯಲು ತುಂಬ ಪ್ರಯತ್ನ ಮಾಡಿತ್ತು. ಗಡಿ ಬಂದ್ ಮಾಡಿ, ಪೊಲೀಸರ ಭದ್ರತೆ ಹೆಚ್ಚಿಸಿದ್ದರೂ ಜಗ್ಗದ ರೈತರು ಹರ್ಯಾಣ ಪ್ರವೇಶಿಸಿದ್ದಾರೆ. ಪಂಜಾಬ್​ನ ಪಟಿಯಾಲಾದಲ್ಲಿ ಬಸ್​ಸ್ಟ್ಯಾಂಡ್​ಗಳನ್ನು ಕ್ಲೋಸ್ ಮಾಡಲಾಗಿದೆ. ಸಾರ್ವಜನಿಕ ವಾಹನ ಸಂಚಾರ ಇಂದು ಮತ್ತು ನಾಳೆ ಸ್ಥಗಿತಗೊಳ್ಳಲಿದೆ.

ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ತರುವುದಕ್ಕೂ ಮೊದಲೇ ಶುರುವಾದ ಪ್ರತಿಭಟನೆ ಇನ್ನೂ ಮುಂದುವರಿಯುತ್ತಲೇ ಇದೆ. ಇದೀಗ ಉತ್ತರ ಪ್ರದೇಶ, ಹರ್ಯಾಣ, ಉತ್ತರಾಖಂಡ, ರಾಜಸ್ಥಾನ, ಕೇರಳ, ಪಂಜಾಬ್​ಗಳ ಸಾವಿರಕ್ಕೂ ಹೆಚ್ಚು ರೈತರು ದೆಹಲಿ ಚಲೋ ಚಳವಳಿಯಲ್ಲಿ ಪಾಲ್ಗೊಂಡಿದ್ದಾರೆ.

Published On - 1:09 pm, Thu, 26 November 20

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು