AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmers Protest: ಇಂದು ಸಂಜೆಯೊಳಗೆ ಗಡಿ ಬಿಟ್ಟು ಹೊರಡುವ ರೈತರು; ವಾಪಸ್​ ಆಗುವುದಕ್ಕೂ ಮೊದಲು ವಿಜಯ ದಿವಸ್​ ಆಚರಣೆ

ದೆಹಲಿ: ಮೂರು ಕೃಷಿ ಕಾಯ್ದೆಗಳ ವಿರುದ್ಧ ಒಂದು ವರ್ಷಕ್ಕೂ ಅಧಿಕ ಕಾಲದಿಂದ ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರೀಗ ಮನೆಗೆ ಹೋಗಲು ಸಿದ್ಧತೆ ನಡೆಸುತ್ತಿದ್ದಾರೆ. ಗಡಿಗಳಲ್ಲಿ ಹಾಕಿದ್ದ ಟೆಂಟ್​​ಗಳನ್ನು ತೆಗೆಯುತ್ತಿದ್ದಾರೆ. ರೈತರ ಎಲ್ಲ ಬೇಡಿಕೆಗಳನ್ನೂ ಈಡೇರಿಸುವುದಾಗಿ ಕೇಂದ್ರ ಸರ್ಕಾರದಿಂದ ಅಧಿಕೃತ ಪತ್ರ ನೀಡಲಾದ ಬೆನ್ನಲ್ಲೇ  ರೈತರು ತಮ್ಮ ಆಂದೋಲನವನ್ನು ಹಿಂಪಡೆದಿದ್ದಾರೆ.  ಹಾಗೆ ಇಂದು ಸಂಜೆಯ ಒಳಗೆ ಎಲ್ಲರೂ ಗಡಿಗಳಿಂದ ಸಂಪೂರ್ಣವಾಗಿ ವಾಪಸ್​ ಆಗಲಿದ್ದಾರೆ. ಆದರೆ ಹೀಗೆ ಹೋಗುವ ಮೊದಲು ದೆಹಲಿಯ ಗಡಿಯಲ್ಲಿ ರೈತರು ಇಂದು ವಿಜಯ್​ ದಿವಸ್​ […]

Farmers Protest: ಇಂದು ಸಂಜೆಯೊಳಗೆ ಗಡಿ ಬಿಟ್ಟು ಹೊರಡುವ ರೈತರು; ವಾಪಸ್​ ಆಗುವುದಕ್ಕೂ ಮೊದಲು ವಿಜಯ ದಿವಸ್​ ಆಚರಣೆ
ರೈತ ಪ್ರತಿಭಟನೆಯ ಚಿತ್ರ
TV9 Web
| Edited By: |

Updated on:Dec 11, 2021 | 8:53 AM

Share

ದೆಹಲಿ: ಮೂರು ಕೃಷಿ ಕಾಯ್ದೆಗಳ ವಿರುದ್ಧ ಒಂದು ವರ್ಷಕ್ಕೂ ಅಧಿಕ ಕಾಲದಿಂದ ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರೀಗ ಮನೆಗೆ ಹೋಗಲು ಸಿದ್ಧತೆ ನಡೆಸುತ್ತಿದ್ದಾರೆ. ಗಡಿಗಳಲ್ಲಿ ಹಾಕಿದ್ದ ಟೆಂಟ್​​ಗಳನ್ನು ತೆಗೆಯುತ್ತಿದ್ದಾರೆ. ರೈತರ ಎಲ್ಲ ಬೇಡಿಕೆಗಳನ್ನೂ ಈಡೇರಿಸುವುದಾಗಿ ಕೇಂದ್ರ ಸರ್ಕಾರದಿಂದ ಅಧಿಕೃತ ಪತ್ರ ನೀಡಲಾದ ಬೆನ್ನಲ್ಲೇ  ರೈತರು ತಮ್ಮ ಆಂದೋಲನವನ್ನು ಹಿಂಪಡೆದಿದ್ದಾರೆ.  ಹಾಗೆ ಇಂದು ಸಂಜೆಯ ಒಳಗೆ ಎಲ್ಲರೂ ಗಡಿಗಳಿಂದ ಸಂಪೂರ್ಣವಾಗಿ ವಾಪಸ್​ ಆಗಲಿದ್ದಾರೆ.

ಆದರೆ ಹೀಗೆ ಹೋಗುವ ಮೊದಲು ದೆಹಲಿಯ ಗಡಿಯಲ್ಲಿ ರೈತರು ಇಂದು ವಿಜಯ್​ ದಿವಸ್​ ಆಚರಣೆ ಮಾಡುವರು. ವಿವಾದಿತ ಕೃಷಿ ಕಾಯ್ದೆಗಳ ಆಂದೋಲನದಲ್ಲಿ ತಮಗೆ ಕೇಂದ್ರದ ವಿರುದ್ಧ ಜಯ ಸಿಕ್ಕಿರುವ ಹಿನ್ನೆಲೆಯಲ್ಲಿ ಅಂತಿಮವಾಗಿ ವಿಜಯ್​ ದಿವಸ್ ಆಚರಣೆ ಮಾಡಿ, ತಮ್ಮ ಊರಿಗೆ ಹೋಗಲಿದ್ದಾರೆ.  ಶನಿವಾರ ದೆಹಲಿ ಗಡಿಯಲ್ಲಿ, ಎಲ್ಲ ಟೋಲ್ ಪ್ಲಾಜಾಗಳಲ್ಲಿ ಮತ್ತು ಪ್ರತಿಭಟನಾ ಸ್ಥಳಗಳಲ್ಲಿ ರೈತರು ವಿಜಯ ಮೆರವಣಿಗೆ ನಡೆಸಲಿದ್ದಾರೆ ಎಂದು ಸಂಯುಕ್ತ ಕಿಸಾನ್​ ಮೋರ್ಚಾ ಹೇಳಿದೆ.

ರೈತ ಸಂಘಟನೆಗಳು ಡಿ.10ರಂದೇ ವಿಜಯ್​ ದಿವಸ್​ ಆಚರಣೆ ಮಾಡಲು ನಿರ್ಧರಿಸಿದ್ದರು. ಆದರೆ ನಿನ್ನೆ ಭಾರತದ ಪ್ರಥಮ ಸಿಡಿಎಸ್​​ ಜನರಲ್​ ಬಿಪಿನ್​ ರಾವತ್​ ಅಂತ್ಯಕ್ರಿಯೆ ಇದ್ದ ಕಾರಣ ಒಂದು ದಿನಕ್ಕೆ ಮುಂದೂಡಿದ್ದರು. ಸದ್ಯಕ್ಕಂತೂ ರಾಷ್ಟ್ರರಾಜಧಾನಿಯ ಸಿಂಘು ಮತ್ತು ಗಾಝಿಪುರ ಗಡಿಗಳಲ್ಲಿ ರೈತರ ಚಟುವಟಿಕೆಗಳು ಹೆಚ್ಚಿವೆ. ಅಲ್ಲೀಗ ಟೆಂಟ್​​ಗಳನ್ನು ತೆಗೆಯಲಾಗುತ್ತಿದೆ. ಅದನ್ನೆಲ್ಲ ಹೊತ್ತುಕೊಂಡು ಹೋಗಲು ಟ್ರ್ಯಾಕ್ಟರ್​​ಗಳು ಬಂದು ನಿಂತಿವೆ. ಇನ್ನೊಂದೆಡೆ ಉತ್ತರ ಪ್ರದೇಶದ ಗಡ

ಏತನ್ಮಧ್ಯೆ, ರಾಷ್ಟ್ರ ರಾಜಧಾನಿಯ ಸಿಂಘು ಮತ್ತು ಗಾಜಿಪುರ ಗಡಿ ಬಿಂದುಗಳು-ಕಳೆದ 14 ತಿಂಗಳುಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದ ಎರಡು ಸೈಟ್‌ಗಳಲ್ಲಿ ತೆರವು ಚಟುವಟಿಕೆಗಳು ಶುರುವಾಗಿವೆ. ರೈತರು ಟ್ರಕ್‌ಗಳು ಮತ್ತು ಟ್ರ್ಯಾಕ್ಟರ್‌ಗಳಲ್ಲಿ ತಮ್ಮ ಮನೆಗಳಿಗೆ ತೆರಳಲು ತಮ್ಮ ಸಿದ್ಧತೆಗಳನ್ನು ಪೂರ್ಣಗೊಳಿಸುವಲ್ಲಿ ನಿರತರಾಗಿದ್ದಾರೆ. ಟ್ರಾಲಿಗಳು. ಮತ್ತೊಂದೆಡೆ ಯುಪಿ ಗೇಟ್ ಪ್ರತಿಭಟನಾ ಸ್ಥಳವನ್ನು ಡಿಸೆಂಬರ್ 15 ರೊಳಗೆ ಸಂಪೂರ್ಣವಾಗಿ ತೆರವುಗೊಳಿಸಲಾಗುವುದು ಎಂದು ರೈತರು ಹೇಳಿದ್ದಾರೆ. ಇನ್ನು ಯುಪಿ ಗೇಟ್​​ ಬಳಿ ನಡೆಯುತ್ತಿರುವ ಪ್ರತಿಭಟನೆನ್ನು ಡಿ.15ರೊಳಗೆ ತೆರವುಗೊಳಿಸಲಾಗುವುದು ಎಂದು ರೈತರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಡ್​​ ರೂಮ್​ನಿಂದ ಗೃಹ ಕಚೇರಿಗೆ ತೆರಳುವಾಗ ಬಿದ್ದು ಗಾಯಗೊಂಡ ವ್ಯಕ್ತಿ; ಅದು ಕೆಲಸದ ಸ್ಥಳದಲ್ಲಿ ನಡೆದ ಘಟನೆ ಎಂದ ಕೋರ್ಟ್!

Published On - 8:38 am, Sat, 11 December 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ