AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಗಾರು ಬೆಳೆಗೆ ಬೆಂಬಲ ಬೆಲೆ ಘೋಷಣೆ, ಕೇಂದ್ರ ಸಚಿವ ಸಂಪುಟದ ಡೀಟೇಲ್ಸ್ ಇಲ್ಲಿದೆ

ದೆಹಲಿ: ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ಮೋದಿ ಘೋಷಿಸಿರುವ ಕೇಂದ್ರದ ವಿಶೇಷ ಆರ್ಥಿಕ ಪ್ಯಾಕೇಜ್‌ಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಎಂಎಸ್ಎಂಇ ಸಾಲಕ್ಕೆ ಸರ್ಕಾರವೇ ಗ್ಯಾರಂಟಿ ನೀಡಲಿದೆ. ರೈತರು, ಎಂಎಸ್ಎಂಇಗೆ ಸಹಾಯ ಆಗುವ ರೀತಿಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. MSMEಗಳ ವ್ಯಾಖ್ಯಾನ ಬದಲಾವಣೆಗೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಸಣ್ಣ, ಮಧ್ಯಮ ಕೈಗಾರಿಕೆಯಲ್ಲಿ ಹೂಡಿಕೆ ಮಿತಿಯನ್ನು 25ಲಕ್ಷ ರೂ.ನಿಂದ 1 ಕೋಟಿ ರೂ.ಗೆ ಏರಿಕೆ ಮಾಡಲಾಗಿದೆ. MSME ಕ್ಷೇತ್ರಗಳಿಗೆ 20 ಸಾವಿರ ಕೋಟಿ ರೂ. ನೆರವು ನೀಡಲಾಗುತ್ತೆ. […]

ಮುಂಗಾರು ಬೆಳೆಗೆ ಬೆಂಬಲ ಬೆಲೆ ಘೋಷಣೆ, ಕೇಂದ್ರ ಸಚಿವ ಸಂಪುಟದ ಡೀಟೇಲ್ಸ್ ಇಲ್ಲಿದೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Jun 01, 2020 | 5:54 PM

Share

ದೆಹಲಿ: ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ಮೋದಿ ಘೋಷಿಸಿರುವ ಕೇಂದ್ರದ ವಿಶೇಷ ಆರ್ಥಿಕ ಪ್ಯಾಕೇಜ್‌ಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಎಂಎಸ್ಎಂಇ ಸಾಲಕ್ಕೆ ಸರ್ಕಾರವೇ ಗ್ಯಾರಂಟಿ ನೀಡಲಿದೆ. ರೈತರು, ಎಂಎಸ್ಎಂಇಗೆ ಸಹಾಯ ಆಗುವ ರೀತಿಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. MSMEಗಳ ವ್ಯಾಖ್ಯಾನ ಬದಲಾವಣೆಗೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.

ಸಣ್ಣ, ಮಧ್ಯಮ ಕೈಗಾರಿಕೆಯಲ್ಲಿ ಹೂಡಿಕೆ ಮಿತಿಯನ್ನು 25ಲಕ್ಷ ರೂ.ನಿಂದ 1 ಕೋಟಿ ರೂ.ಗೆ ಏರಿಕೆ ಮಾಡಲಾಗಿದೆ. MSME ಕ್ಷೇತ್ರಗಳಿಗೆ 20 ಸಾವಿರ ಕೋಟಿ ರೂ. ನೆರವು ನೀಡಲಾಗುತ್ತೆ. ಆರ್ಥಿಕ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ನೆರವು ನೀಡಿದೆ. ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ 20 ಸಾವಿರ ಕೋಟಿ ರೂ. ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಮೈಕ್ರೋ ಯೂನಿಟ್‌ಗಳ‌ ಹೂಡಿಕೆಯ ಮಿತಿ 25 ಲಕ್ಷದಿಂದ 1 ಕೋಟಿ ರೂ.ಗೆ ಹೆಚ್ಚಳ ಮಾಡಲಾಗಿದೆ. ಸಣ್ಣ ಯೂನಿಟ್‌ಗಳ ವಹಿವಾಟು 50 ಕೋಟಿ ರೂ.ಗೆ ಏರಿಕೆ ಮಾಡಲಾಗಿದೆ. ರಸ್ತೆ ಬದಿ ವ್ಯಾಪಾರಿಗಳಿಗೆ ಸಾಲ ನೀಡಲು 10ಸಾವಿರ ಕೋಟಿ ಅನುದಾನ ನೀಡಲಾಗುತ್ತೆ. ಇದರಿಂದ 50 ಲಕ್ಷ ಬೀದಿಬದಿ ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ. ರಸ್ತೆ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂಪಾಯಿ ಸಾಲ ಕೊಡಲಾಗುತ್ತೆ.

ಮುಂಗಾರು ಬೆಳೆಗೆ ಬೆಂಬಲ ಬೆಲೆ ಘೋಷಣೆ: ರೈತರ ಅನುಕೂಲಕ್ಕಾಗಿ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರೈತರ ಸಣ್ಣ ಸಾಲ ಮರುಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡಲಾಗಿದ್ದು, ಸಾಲ ಮರುಪಾವತಿಗೆ ಆಗಸ್ಟ್ 31ರವರೆಗೂ ಕಾಲಾವಕಾಶ ಕೊಡಲಾಗಿದೆ. ಮುಂಗಾರು ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಲಾಗಿದ್ದು, ಹರ್ಬಲ್ ಕೃಷಿಗೆ 4ಸಾವಿರ ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ಇದರಿಂದ ರೈತ ಮಾಡಿದ ಖರ್ಚಿಗಿಂತ ಶೇ.50ರಿಂದ 83ರಷ್ಟು ಬೆಲೆ ಸಿಗುತ್ತೆ. ಮೀನುಗಾರಿಕೆಗೆ 20 ಸಾವಿರ ಕೋಟಿ ರೂ. ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಕೊಡಲಾಗಿದೆ.

ಬೆಳೆಗಳ ಬೆಂಬಲ ಬೆಲೆ ಏರಿಕೆ:  ಭತ್ತ, ಹತ್ತಿ, ಜೋಳದ ಬೆಳೆಗಳ ಬೆಂಬಲ ಬೆಲೆ ಏರಿಕೆ. ಹತ್ತಿಗೆ ಕನಿಷ್ಠ ಬೆಂಬಲ ಬೆಲೆ 260 ರೂಪಾಯಿ ಏರಿಕೆ. ರಾಗಿ, ಹುರುಳಿ, ಶೇಂಗಾ, ಸೋಯಾಬಿನ್‌ಗೆ ಬೆಂಬಲ ಬೆಲೆ. ಈ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಶೇಕಡಾ 50ರಷ್ಟು ಏರಿಕೆ ಮಾಡಲು ಕೇಂದ್ರ ಸಂಪುಟ ಸಭೆ ಅಸ್ತು.

Follow Us
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ