AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಗಾರು ಬೆಳೆಗೆ ಬೆಂಬಲ ಬೆಲೆ ಘೋಷಣೆ, ಕೇಂದ್ರ ಸಚಿವ ಸಂಪುಟದ ಡೀಟೇಲ್ಸ್ ಇಲ್ಲಿದೆ

ದೆಹಲಿ: ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ಮೋದಿ ಘೋಷಿಸಿರುವ ಕೇಂದ್ರದ ವಿಶೇಷ ಆರ್ಥಿಕ ಪ್ಯಾಕೇಜ್‌ಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಎಂಎಸ್ಎಂಇ ಸಾಲಕ್ಕೆ ಸರ್ಕಾರವೇ ಗ್ಯಾರಂಟಿ ನೀಡಲಿದೆ. ರೈತರು, ಎಂಎಸ್ಎಂಇಗೆ ಸಹಾಯ ಆಗುವ ರೀತಿಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. MSMEಗಳ ವ್ಯಾಖ್ಯಾನ ಬದಲಾವಣೆಗೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಸಣ್ಣ, ಮಧ್ಯಮ ಕೈಗಾರಿಕೆಯಲ್ಲಿ ಹೂಡಿಕೆ ಮಿತಿಯನ್ನು 25ಲಕ್ಷ ರೂ.ನಿಂದ 1 ಕೋಟಿ ರೂ.ಗೆ ಏರಿಕೆ ಮಾಡಲಾಗಿದೆ. MSME ಕ್ಷೇತ್ರಗಳಿಗೆ 20 ಸಾವಿರ ಕೋಟಿ ರೂ. ನೆರವು ನೀಡಲಾಗುತ್ತೆ. […]

ಮುಂಗಾರು ಬೆಳೆಗೆ ಬೆಂಬಲ ಬೆಲೆ ಘೋಷಣೆ, ಕೇಂದ್ರ ಸಚಿವ ಸಂಪುಟದ ಡೀಟೇಲ್ಸ್ ಇಲ್ಲಿದೆ
ಸಾಧು ಶ್ರೀನಾಥ್​
| Updated By: |

Updated on: Jun 01, 2020 | 5:54 PM

Share

ದೆಹಲಿ: ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ಮೋದಿ ಘೋಷಿಸಿರುವ ಕೇಂದ್ರದ ವಿಶೇಷ ಆರ್ಥಿಕ ಪ್ಯಾಕೇಜ್‌ಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಎಂಎಸ್ಎಂಇ ಸಾಲಕ್ಕೆ ಸರ್ಕಾರವೇ ಗ್ಯಾರಂಟಿ ನೀಡಲಿದೆ. ರೈತರು, ಎಂಎಸ್ಎಂಇಗೆ ಸಹಾಯ ಆಗುವ ರೀತಿಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. MSMEಗಳ ವ್ಯಾಖ್ಯಾನ ಬದಲಾವಣೆಗೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.

ಸಣ್ಣ, ಮಧ್ಯಮ ಕೈಗಾರಿಕೆಯಲ್ಲಿ ಹೂಡಿಕೆ ಮಿತಿಯನ್ನು 25ಲಕ್ಷ ರೂ.ನಿಂದ 1 ಕೋಟಿ ರೂ.ಗೆ ಏರಿಕೆ ಮಾಡಲಾಗಿದೆ. MSME ಕ್ಷೇತ್ರಗಳಿಗೆ 20 ಸಾವಿರ ಕೋಟಿ ರೂ. ನೆರವು ನೀಡಲಾಗುತ್ತೆ. ಆರ್ಥಿಕ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ನೆರವು ನೀಡಿದೆ. ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ 20 ಸಾವಿರ ಕೋಟಿ ರೂ. ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಮೈಕ್ರೋ ಯೂನಿಟ್‌ಗಳ‌ ಹೂಡಿಕೆಯ ಮಿತಿ 25 ಲಕ್ಷದಿಂದ 1 ಕೋಟಿ ರೂ.ಗೆ ಹೆಚ್ಚಳ ಮಾಡಲಾಗಿದೆ. ಸಣ್ಣ ಯೂನಿಟ್‌ಗಳ ವಹಿವಾಟು 50 ಕೋಟಿ ರೂ.ಗೆ ಏರಿಕೆ ಮಾಡಲಾಗಿದೆ. ರಸ್ತೆ ಬದಿ ವ್ಯಾಪಾರಿಗಳಿಗೆ ಸಾಲ ನೀಡಲು 10ಸಾವಿರ ಕೋಟಿ ಅನುದಾನ ನೀಡಲಾಗುತ್ತೆ. ಇದರಿಂದ 50 ಲಕ್ಷ ಬೀದಿಬದಿ ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ. ರಸ್ತೆ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂಪಾಯಿ ಸಾಲ ಕೊಡಲಾಗುತ್ತೆ.

ಮುಂಗಾರು ಬೆಳೆಗೆ ಬೆಂಬಲ ಬೆಲೆ ಘೋಷಣೆ: ರೈತರ ಅನುಕೂಲಕ್ಕಾಗಿ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರೈತರ ಸಣ್ಣ ಸಾಲ ಮರುಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡಲಾಗಿದ್ದು, ಸಾಲ ಮರುಪಾವತಿಗೆ ಆಗಸ್ಟ್ 31ರವರೆಗೂ ಕಾಲಾವಕಾಶ ಕೊಡಲಾಗಿದೆ. ಮುಂಗಾರು ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಲಾಗಿದ್ದು, ಹರ್ಬಲ್ ಕೃಷಿಗೆ 4ಸಾವಿರ ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ಇದರಿಂದ ರೈತ ಮಾಡಿದ ಖರ್ಚಿಗಿಂತ ಶೇ.50ರಿಂದ 83ರಷ್ಟು ಬೆಲೆ ಸಿಗುತ್ತೆ. ಮೀನುಗಾರಿಕೆಗೆ 20 ಸಾವಿರ ಕೋಟಿ ರೂ. ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಕೊಡಲಾಗಿದೆ.

ಬೆಳೆಗಳ ಬೆಂಬಲ ಬೆಲೆ ಏರಿಕೆ:  ಭತ್ತ, ಹತ್ತಿ, ಜೋಳದ ಬೆಳೆಗಳ ಬೆಂಬಲ ಬೆಲೆ ಏರಿಕೆ. ಹತ್ತಿಗೆ ಕನಿಷ್ಠ ಬೆಂಬಲ ಬೆಲೆ 260 ರೂಪಾಯಿ ಏರಿಕೆ. ರಾಗಿ, ಹುರುಳಿ, ಶೇಂಗಾ, ಸೋಯಾಬಿನ್‌ಗೆ ಬೆಂಬಲ ಬೆಲೆ. ಈ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಶೇಕಡಾ 50ರಷ್ಟು ಏರಿಕೆ ಮಾಡಲು ಕೇಂದ್ರ ಸಂಪುಟ ಸಭೆ ಅಸ್ತು.

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ