AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾರೂಕ್ ಅಬ್ದುಲ್ಲಾರನ್ನು ಕೊಲ್ಲಲು 20 ವರ್ಷಗಳಿಂದ ನಡೆದಿತ್ತು ಪ್ಲ್ಯಾನ್, ಆರೋಪಿ ಹೇಳಿದ್ದೇನು?

ಜಮ್ಮುವಿನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಬಂದೂಕುಧಾರಿಯೊಬ್ಬ ಹತ್ಯೆ ಯತ್ನ ನಡೆಸಿದ್ದಾನೆ. ಅದೃಷ್ಟವಶಾತ್ ಫಾರೂಕ್ ಅಬ್ದುಲ್ಲಾ ಪವಾಡಸದೃಶವಾಗಿ ಪಾರಾಗಿದ್ದಾರೆ. ಕಮಲ್ ಸಿಂಗ್ ಎಂದು ಗುರುತಿಸಲಾದ ಆರೋಪಿ, 20 ವರ್ಷಗಳಿಂದ ಫಾರೂಕ್ ಅವರನ್ನು ಕೊಲ್ಲಲು ಯೋಜಿಸುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ. ಘಟನೆ ವೇಳೆ ಆರೋಪಿ ಮದ್ಯದ ಅಮಲಿನಲ್ಲಿದ್ದನೆನ್ನಲಾಗಿದ್ದು, ಭದ್ರತಾ ಸಿಬ್ಬಂದಿಯ ವೈಫಲ್ಯದ ಬಗ್ಗೆ ಒಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

ಫಾರೂಕ್ ಅಬ್ದುಲ್ಲಾರನ್ನು ಕೊಲ್ಲಲು 20 ವರ್ಷಗಳಿಂದ ನಡೆದಿತ್ತು ಪ್ಲ್ಯಾನ್, ಆರೋಪಿ ಹೇಳಿದ್ದೇನು?
ಫಾರೂಕ್ ಅಬ್ದುಲ್ಲಾ
ನಯನಾ ರಾಜೀವ್
|

Updated on: Mar 12, 2026 | 7:53 AM

Share
ಶ್ರೀನಗರ, ಮಾರ್ಚ್​ 12: ಜಮ್ಮುವಿನಲ್ಲಿ ಮಾರ್ಚ್​ 11ರ ರಾತ್ರಿ ನಡೆದ ವಿವಾಹ ಸಮಾರಂಭದಲ್ಲಿ ಬಂದೂಕುಧಾರಿಯೊಬ್ಬ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ(Farooq Abdullah) ಅವರತ್ತ ಗುಂಡು ಹಾರಿಸಿದ್ದ. ಆದರೆ ಫಾರೂಕ್ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದರು. ಜಮ್ಮುವಿನ ಗ್ರೇಟರ್ ಕೈಲಾಶ್‌ನ ರಾಯಲ್ ಪಾರ್ಕ್‌ನಲ್ಲಿ ಅಬ್ದುಲ್ಲಾ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದಾಗ ಈ ಘಟನೆ ನಡೆದಿದೆ. ಕಮಲ್ ಸಿಂಗ್ ಎಂದು ಗುರುತಿಸಲಾದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಕಳೆದ ಎರಡು ದಶಕಗಳಿಂದ ಫಾರೂಕ್ ಅಬ್ದುಲ್ಲಾ ಅವರನ್ನು ಕೊಲ್ಲಲು ಯೋಜಿಸುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. 63 ವರ್ಷದ ಜಮ್ಮು ನಿವಾಸಿಯೊಬ್ಬ ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಎನ್‌ಸಿ ಮುಖ್ಯಸ್ಥರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.
ಕಳೆದ 20 ವರ್ಷಗಳಿಂದ ನಾನು ಫಾರೂಕ್ ಅಬ್ದುಲ್ಲಾ ಅವರನ್ನು ಕೊಲ್ಲಲು ಬಯಸಿದ್ದೆ ಎಂದಿದ್ದಾನೆ.
ಮೂಲಗಳ ಪ್ರಕಾರ, ಆರೋಪಿಯು ಜಮ್ಮುವಿನ ಹಳೆಯ ಭಾಗದಲ್ಲಿ ಕೆಲವು ಅಂಗಡಿಗಳನ್ನು ಹೊಂದಿದ್ದು, ತನ್ನ ಅಂಗಡಿಗಳಿಂದ ಬಾಡಿಗೆ ಪಡೆದು ಬದುಕು ಸಾಗಿಸುತ್ತಿದ್ದಾನೆ.
ಇಂದು ನನಗೆ ಸರಿಯಾದ ಅವಕಾಶ ಸಿಕ್ಕಿತ್ತು, ಆದರೆ ಅವರು (ಫಾರೂಕ್ ಅಬ್ದುಲ್ಲಾ) ಬದುಕುಳಿದಿರುವುದು ಅದೃಷ್ಟ ಎಂದು ಎನ್‌ಸಿ ಮುಖ್ಯಸ್ಥರ ಮೇಲಿನ ಹತ್ಯೆಯ ವಿಫಲ ಪ್ರಯತ್ನದ ನಂತರ ಅವರು ಪೊಲೀಸರಿಗೆ ತಿಳಿಸಿದ್ದಾನೆ.

ದಾಳಿಯ ಸಮಯದಲ್ಲಿ ಆರೋಪಿಯು ಮದ್ಯದ ಅಮಲಿನಲ್ಲಿದ್ದನೆಂದು ವರದಿಯಾಗಿದೆ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಯನ್ನು ಹತ್ಯೆ ಮಾಡಲು ಪ್ರಯತ್ನಿಸಿದ ನಂತರ ಭದ್ರತಾ ಸಿಬ್ಬಂದಿ ಅವರನ್ನು ಕೂಡಲೇ ವಶಕ್ಕೆ ಪಡೆದರು. ಘಟನೆ ನಡೆದಾಗ ಫಾರೂಕ್ ಅಬ್ದುಲ್ಲಾ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಕೂಡ ಸ್ಥಳದಲ್ಲಿದ್ದರು.
ಅಧಿಕಾರಿಗಳ ಪ್ರಕಾರ, ಫಾರೂಕ್ ಅಬ್ದುಲ್ಲಾ ಮತ್ತು ಚೌಧರಿ ಅವರು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಬಿಎಸ್ ಚೌಹಾಣ್ ಅವರ ಮಗಳ ಮದುವೆಗೆ  ಬಂದಿದ್ದರು ಮತ್ತು ಒಂದು ಗಂಟೆಗೂ ಹೆಚ್ಚು ಕಾಲ ಸ್ಥಳದಲ್ಲಿದ್ದರು.
ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮತ್ತು ಫಾರೂಕ್ ಅಬ್ದುಲ್ಲಾ ಅವರ ಪುತ್ರ ಒಮರ್ ಅಬ್ದುಲ್ಲಾ, ತನ್ನ ತಂದೆಯ ಜೀವವನ್ನು ಉಳಿಸಿದ್ದಕ್ಕಾಗಿ  ದೇವರಿಗೆ ಧನ್ಯವಾದ ಅರ್ಪಿಸಿದರು ಮತ್ತು ಲೋಡ್ ಮಾಡಿದ ಪಿಸ್ತೂಲ್ ಹಿಡಿದ ವ್ಯಕ್ತಿ ಪಾಯಿಂಟ್-ಬ್ಲಾಂಕ್ ರೇಂಜ್ ಒಳಗೆ ಹೋಗಿ ಎನ್‌ಸಿ ಮುಖ್ಯಸ್ಥರ ಮೇಲೆ ಗುಂಡು ಹಾರಿಸಲು ಹೇಗೆ ಸಾಧ್ಯವಾಯಿತು ಎಂದು ಭದ್ರತಾ ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು