AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಕೆಸಿಎ ಹಣ ದುರುಪಯೋಗ ಪ್ರಕರಣ: ಫರೂಕ್ ಅಬ್ದುಲ್ಲಾರ ರೂ. 11.86 ಕೋಟಿ ಮೌಲ್ಯದ ಆಸ್ತಿ ಜಪ್ತಿ

2006-2012ರವರೆಗೆ ಜೆಕೆಸಿಎಯ ಅಧ್ಯಕ್ಷರಾಗಿದ್ದ ಫರೂಕ್ ತಮ್ಮ ಹುದ್ದೆಯ ದುರ್ಲಾಭ ಪಡೆದು ಸುಮಾರು 45 ಕೋಟಿ ರೂಪಾಯಿಗಳ ಅವ್ಯವಹಾರ ಎಸಗಿರುವುದು ತಾನು ನಡೆಸಿರುವ ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಈಡಿ ಹೇಳಿದೆ.

ಜೆಕೆಸಿಎ ಹಣ ದುರುಪಯೋಗ ಪ್ರಕರಣ: ಫರೂಕ್ ಅಬ್ದುಲ್ಲಾರ ರೂ. 11.86 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಫರೂಕ್ ಅಬ್ದುಲ್ಲಾ
ಅರುಣ್​ ಕುಮಾರ್​ ಬೆಳ್ಳಿ
|

Updated on: Dec 19, 2020 | 9:27 PM

Share

ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಯ (ಜೆಕೆಸಿಎ) ಹಣ ದುರುಪಯೋಗಪಡಿಸಿಕೊಂಡಿರುವ ಆರೋಪ ಎದುರಿಸುತ್ತಿರುವ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಮತ್ತು ಸಂಸದ ಫರೂಕ್ ಅಬ್ದುಲ್ಲಾ ಅವರ ರೂ.11.86 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಈಡಿ) ಶನಿವಾರದಂದು ಜಪ್ತಿ ಮಾಡಿದೆ.

ಈ ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರೀಯ ತನಿಖಾ ದಳ (ಸಿಬಿಐ) ಜೆಕೆಸಿಎಯಲ್ಲಿ 2002 ಮತ್ತು 2011ರ ಮಧ್ಯೆದ ಅವಧಿಯಲ್ಲಿ ರೂ 43.69 ಕೋಟಿಗಳ ಅವ್ಯವಹಾರ ನಡೆದಿದೆಯೆಂದು ತಾನು ಸಲ್ಲಿಸಿದ ದೋಷಾರೋಪಣೆ ಪಟ್ಟಿಯಲ್ಲಿ ಇತರ ಮೂವರೊದಿಗೆ ಫರೂಕ್ ಅಬ್ದುಲ್ಲಾ ಅವರ ಹೆಸರನ್ನೂ ಉಲ್ಲೇಖಿಸಿತ್ತು.

2006-2012ರವರೆಗೆ ಜೆಕೆಸಿಎಯ ಅಧ್ಯಕ್ಷರಾಗಿದ್ದ ಫರೂಕ್ ತಮ್ಮ ಹುದ್ದೆಯ ದುರ್ಲಾಭ ಪಡೆದು ಸುಮಾರು 45 ಕೋಟಿ ರೂಪಾಯಿಗಳ ಅವ್ಯವಹಾರ ನಡೆಸಿರುವುದು ತಾನು ನಡೆಸಿರುವ ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಈಡಿ ಹೇಳಿದೆ.

ಜಾರಿ ನಿರ್ದೇಶನಾಲಯ

ಜೆಕೆಸಿಎ

ಹಣಕಾಸಿನ ಅವ್ಯವಹಾರಗನ್ನು ತನಿಖೆ ಮಾಡುವ ಈಡಿ ಇಂದು ಮುಟ್ಟುಗೋಲು ಹಾಕಿಕೊಂಡಿರುವ ಫರೂಕ್ ಆಸ್ತಿಗಳಲ್ಲಿ 3 ಗೃಹ ನಿವೇಶನಗಳು, ಒಂದು ವಾಣಿಜ್ಯ ನಿವೇಶನ ಮತ್ತು ನಾಲ್ಕು ಜಮೀನಿನ ಭಾಗಗಳು ಸೇರಿವೆ. ಈಡಿ ಮೂಲಗಳ ಪ್ರಕಾರ ಸದರಿ ಆಸ್ತಿಗಳ ಇಂದಿನ ಮಾರುಕಟ್ಟೆ ಮೌಲ್ಯ ಸುಮಾರು 60 ರಿಂದ 79 ಕೋಟಿ ರೂಪಾಯಿಗಳಷ್ಟಾಗುತ್ತದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಗರದಲ್ಲಿ ಅಕ್ಟೋಬರ್ ತಿಂಗಳು ಎರಡು ಬಾರಿ ಈಡಿ ಅಧಿಕಾರಿಗಳೆದರು ವಿಚಾರಣೆಗೆ ಹಾಜರಾಗಿದ್ದ ಫರೂಕ್ ಮತ್ತು ನ್ಯಾಶನಲ್ ಕಾನ್ಫರೆನ್ಸ್, ಜೆಕೆಸಿಎಯಲ್ಲಿನ ಹಣ ದುರುಪಯೋಗದ ಆರೋಪವನ್ನು ತಳ್ಳಿ ಹಾಕಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾವನ್ನು ವಾಪಸ್ಸು ಪಡೆಯಲು ತಾವು ರಾಜ್ಯದ ವಿರೋಧ ಪಕ್ಷಗಳನ್ನು ಒಂದುಗೂಡಿಸಲು ಪ್ರಯತ್ನಿಸುವುದರಿಂದ ತಮ್ಮನ್ನು ಆರೋಪಿಯ ಸ್ಥಾನದಲ್ಲಿ ನಿಲ್ಲಿಸಲಾಗುತ್ತಿದೆ ಎಂದು ಫರೂಕ್ ಹೇಳಿದ್ದಾರೆ.

ಏತನ್ಮಧ್ಯೆ, ಫರೂಕ್ ಅವರ ಪುತ್ರ ಒಮರ್ ಅಬ್ದುಲ್ಲಾ ಅವರು ಟ್ವೀಟ್ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳು ಪಿತ್ರಾರ್ಜಿತ ಎಂದು ಹೇಳಿದ್ದಾರೆ.

‘‘1970ರಷ್ಟು ಹಿಂದಿನಿಂದ ನಾವು ಹೊಂದಿರುವ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ, ಅವುಗಳಲ್ಲಿ ಒಂದು ಇತ್ತೀಚಿಗೆ ಅಂದರೆ 2003ರಲ್ಲಿ ನಿರ್ಮಿಸಿರುವ ಕಟ್ಟಡವಾಗಿದೆ. ಆಸ್ತಿಗಳನ್ನು ಜಪ್ರಿ ಮಾಡುವುದಕ್ಕೆ ಅವರಲ್ಲಿ ಯಾವುದೇ ಸಮರ್ಥನೆ ಇಲ್ಲ ಯಾಕೆಂದರೆ, ಅವರು ತನಿಖೆ ಮಾಡುತ್ತಿರುವ ‘ಅಪರಾಧ’ದ ಹಣದಿಂದ ಖರೀದಿಸಿದ್ದು

ಒಮರ್ ಅಬ್ದುಲ್ಲಾ

ಎನ್ನುವ ಪ್ರಾಥಮಿಕ ಪರೀಕ್ಷಣೆಯೇ ಇಲ್ಲಿ ವಿಫಲವಾಗಿದೆ,’’ ಎಂದು ಒಮರ್ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಮೊದಲು ಮಾಧ್ಯಮಗಳೊಂದಿಗೆ ಮಾತಾಡಿದ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಬಾತ್ಮೀದಾರೊಬ್ಬರು, ‘‘ಗುಪ್ಕರ್ ಘೋಷಣೆಯ ನಂತರ ಈಡಿಯಿಂದ ಪತ್ರ ಬಂದಿದೆ. ಕಾಶ್ಮೀರ್​ನಲ್ಲಿ ಪೀಪಲ್ಸ್ ಅಲಯನ್ಸ್ ರೂಪಿಸಿದ ಹಿನ್ನೆಲೆಯಲ್ಲಿ ಇದೊಂದು ರಾಜಕೀಯ ಷಡ್ಯಂತ್ರ ಎನ್ನುವುದು ಇದರಿಂದ ಸಾಬೀತಾಗುತ್ತದೆ,’’ ಎಂದರು.

ಕಳೆದ ವರ್ಷ ಜುಲೈ ತಿಂಗಳಲ್ಲಿ ಅಂದರೆ, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸುವ ಕೆಲವೇ ದಿನ ಮೊದಲು ಫರೂಕ್ ಅವರನ್ನು ಈಡಿ ವಿಚಾರಣೆಗೆ ಕರೆಸಿತ್ತು.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!