Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಇಂಡಿಯಾ ಒಕ್ಕೂಟಕ್ಕೆ ಮತ್ತೊಂದು ಶಾಕ್, ಫಾರೂಕ್ ಅಬ್ದುಲ್ಲಾರ ಪಕ್ಷ ಜಮ್ಮು ಕಾಶ್ಮೀರದಿಂದ ಸ್ವತಂತ್ರ ಸ್ಪರ್ಧೆ

ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ, ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸುವ ಉದ್ದೇಶದಿಂದ ಕಟ್ಟಿಕೊಂಡಿರುವ ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾದ ರೆಕ್ಕೆಗಳು ಒಂದೊಂದಾಗಿಯೇ ಕಳಚಲು ಶುರುವಾಗಿದೆ. ಜಮ್ಮು ಮತ್ತು ಕಾಶ್ಮೀರದಿಂದ ಫಾರೂಕ್ ಅಬ್ದುಲ್ಲಾ ಸ್ವತಂತ್ರವಾಗಿ ಸ್ಪರ್ಧಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

Lok Sabha Election: ಇಂಡಿಯಾ ಒಕ್ಕೂಟಕ್ಕೆ ಮತ್ತೊಂದು ಶಾಕ್, ಫಾರೂಕ್ ಅಬ್ದುಲ್ಲಾರ ಪಕ್ಷ ಜಮ್ಮು ಕಾಶ್ಮೀರದಿಂದ ಸ್ವತಂತ್ರ ಸ್ಪರ್ಧೆ
ಫಾರೂಕ್ ಅಬ್ದುಲ್ಲಾ
Follow us
ನಯನಾ ರಾಜೀವ್
|

Updated on: Feb 15, 2024 | 3:32 PM

ಮುಂಬರುವ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ  ಜಮ್ಮು ಮತ್ತು ಕಾಶ್ಮೀರದಿಂದ ಫಾರೂಕ್​ ಅಬ್ದುಲ್ಲಾ(Farooq Abdullah)ರ ನ್ಯಾಷನಲ್ ಕಾನ್ಫರೆನ್ಸ್​ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ನಿರ್ಧಾರವು ಇಂಡಿಯಾ ಮೈತ್ರಿಕೂಟ(I.N.D.I.A)ಕ್ಕೆ ದೊಡ್ಡ ಹೊಡೆತ ಎಂದೇ ಹೇಳಬಹುದು. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಕೂಡ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದರು. ಹಾಗೆಯೇ ಪಂಜಾಬ್​ನಲ್ಲಿ ಭಗವಂತ್ ಮಾನ್ ಕೂಡ ಪಂಜಾಬ್​ನಲ್ಲಿ ಆಮ್​ ಆದ್ಮಿ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿತ್ತು. ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ 7 ಲೋಕಸಭಾ ಸ್ಥಾನಗಳಲ್ಲಿ ಒಂದನ್ನು ಕಾಂಗ್ರೆಸ್​ಗೆ ಅರ್ಹತೆ ಇಲ್ಲದಿದ್ದರೂ ನೀಡುತ್ತೇವೆ ಎಂದಿದ್ದಾರೆ.

ಇದರ ನಡುವೆ ಜಮ್ಮು ಕಾಶ್ಮೀರದಿಂದ ಫಾರೂಕ್ ಅಬ್ದುಲ್ಲಾ ಇಂಡಿಯಾ ಜತೆ ಕೈಜೋಡಿಸದೆ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದಾರೆ. ಉತ್ತರ ಪ್ರದೇಶದಲ್ಲಿಯೂ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಮಾತುಕತೆ ನಡೆಯುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಫಾರೂಕ್ ಅಬ್ದುಲ್ಲಾ ಅವರ ಈ ನಿರ್ಧಾರ ಭಾರತದ ಮೈತ್ರಿಯನ್ನು ಮತ್ತಷ್ಟು ದುರ್ಬಲಗೊಳಿಸಲಿದೆ.

ಇತ್ತೀಚೆಗೆ ಆಮ್ ಆದ್ಮಿ ಪಕ್ಷ ಅಸ್ಸಾಂನ 3 ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ 80 ಸ್ಥಾನಗಳ ಪೈಕಿ ಕಾಂಗ್ರೆಸ್ ಗೆ ಕೇವಲ 11 ಸ್ಥಾನಗಳನ್ನು ನೀಡುವ ಬಗ್ಗೆ ಮಾತನಾಡುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿಯೂ ಮಮತಾ ಬ್ಯಾನರ್ಜಿ ಏಕಾಂಗಿಯಾಗಿ ಚುನಾವಣೆ ಎದುರಿಸುವ ಬಗ್ಗೆ ಮಾತನಾಡಿದ್ದಾರೆ. ಈಗ ಇಂಡಿಯಾ ಒಕ್ಕೂಟ ಎಷ್ಟು ಕಾಲ ಉಳಿಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ನಿತೀಶ್​ ಕುಮಾರ್ ಕೂಡ ಇಂಡಿಯಾ ಒಕ್ಕೂಟದಿಂದ ಹೊರ ಬಂದು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ಮತ್ತೆ ಮುಖ್ಯಮಂತ್ರಿಯಾಗಿದ್ದಾರೆ.

ಮತ್ತಷ್ಟು ಓದಿ: Sonia Gandhi: ರಾಯ್​ ಬರೇಲಿ ಜನತೆಗೆ ಭಾವುಕ ಪತ್ರ ಬರೆದ ಸೋನಿಯಾ ಗಾಂಧಿ

ಪತ್ರಕರ್ತರು ಅಬ್ದುಲ್ಲಾ ಅವರಿಗೆ ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಕುರಿತು ಪ್ರಶ್ನೆ ಕೇಳಿದಾಗ ನ್ಯಾಷನಲ್ ಕಾನ್ಫರೆನ್ಸ್​ ತನ್ನ ಸ್ವಂತ ಬಲದ ಮೇಲೆ ಚುನಾವಣೆಗಳನ್ನು ಎದುರಿಸಲಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್ ಬಿಜೆಪಿ ಜತೆ ಸೇರಿದಾಗಿನಿಂದ ಇಂಡಿಯಾ ಒಕ್ಕೂಟದ ಭವಿಷ್ಯದ ಬಗ್ಗೆ ಪ್ರಶ್ನೆಗಳು ಏಳುತ್ತಿವೆ.

ಜೆಡಿಯು ನಂತರ ಆರ್​ಎಲ್​ಡಿ ಕೂಡ ಮೈತ್ರಿ ಸಂಬಂಧವನ್ನು ಮುರಿದು ಎನ್​ಡಿಎ ಸೇರಿದೆ. ಮತ್ತೊಂದೆಡೆ ಮಮತಾ ಬ್ಯಾನರ್ಜಿ ಕೂಡ ಏಕಲಾ ಚಲೋ ಮಾರ್ಗವನ್ನು ಸನುಸರಿಸುತ್ತಿದ್ದು, ಆಮ್ ಆದ್ಮಿ ಪಕ್ಷವೂ ಸೀಟು ಹಂಚಿಕೆ ವಿಚಾರದಲ್ಲಿ ಕಟ್ಟುನಿಟ್ಟಿನ ನಿಲುವು ತಳೆದಿದೆ.

80 ಲೋಕಸಭಾ ಸ್ಥಾನಗಳಿರುವ ದೇಶದ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿಯೂ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿಯನ್ನು ಗಟ್ಟಿ ಮಾಡಿಕೊಳ್ಳಲು ಕಾಂಗ್ರೆಸ್​ಗೆ ಸಾಧ್ಯವಾಗಿಲ್ಲ.ಎಸ್​ಪಿ ಏಕಪಕ್ಷೀಯವಾಗಿ 11 ಸ್ಥಾನಗಳನ್ನು ಕಾಂಗ್ರೆಸ್​ಗೆ ಬಿಟ್ಟುಕೊಟ್ಟಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್