AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದಾಜು GDP ಮೈನಸ್​ ಶೇಕಡಾ 7.5ಕ್ಕೆ ಏರಿಕೆ ಮಾಡಿದ ಆರ್​ಬಿಐ

ಈ ಬಗ್ಗೆ ಇಂದು ಮಾತನಾಡಿರುವ ಆರ್​ಬಿಐ ಗವರ್ನರ್​ ಶಕ್ತಿಕಾಂತ್​ ದಾ​ಸ್​, 2020 ನಮಗೆ ಒಂದು ಸವಾಲಿನ ವರ್ಷವಾಗಿತ್ತು. ಆದರೆ, ಭಾರತದ ಆರ್ಥಿಕ ಚಟುವಟಿಕೆ ನಾವು ಅಂದುಕೊಂಡಿದ್ದಕ್ಕಿಂತಲೂ ಉತ್ತಮವಾಗಿ ಚೇತರಿಕೆ ಕಾಣುತ್ತಿದೆ ಎಂದರು.

ಅಂದಾಜು GDP ಮೈನಸ್​ ಶೇಕಡಾ 7.5ಕ್ಕೆ ಏರಿಕೆ ಮಾಡಿದ ಆರ್​ಬಿಐ
ಶಕ್ತಿಕಾಂತ್​ ದಾಸ್
preethi shettigar
|

Updated on: Dec 04, 2020 | 12:51 PM

Share

ಮುಂಬೈ: 2020-21ನೇ ಹಣಕಾಸು ವರ್ಷದ ಒಟ್ಟು ದೇಶಿಯ ಉತ್ಪಾದನೆ (ಜಿಡಿಪಿ) ಅಂದಾಜನ್ನು ಕೇಂದ್ರ ಹಣಕಾಸು ಸಂಸ್ಥೆ (ಆರ್​ಬಿಐ) ಶೇ. ಮೈನಸ್ 9.5 ಇಂದ ಶೇ. 7.5ಕ್ಕೆ ಏರಿಕೆ ಮಾಡಿದೆ. ಆರ್ಥಿಕ ಚಟುವಟಿಕೆಯಲ್ಲಿ ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಬೆಳವಣಿಗೆ ಕಾಣುತ್ತಿರುವುದರಿಂದ ಆರ್​ಬಿಐ ಈ ಘೋಷಣೆ ಮಾಡಿದೆ.

ಈ ಬಗ್ಗೆ ಇಂದು ಮಾತನಾಡಿರುವ ಆರ್​ಬಿಐ ಗವರ್ನರ್​ ಶಕ್ತಿಕಾಂತ್​ ದಾ​ಸ್​, “2020 ನಮಗೆ ಒಂದು ಸವಾಲಿನ ವರ್ಷವಾಗಿತ್ತು. ಇದರಿಂದ ಹೊರಬರುವುದು ನಮ್ಮ ಮುಂದಿರುವ ದೊಡ್ಡ ಚಾಲೆಂಜ್​. ಆದರೆ, ಭಾರತದ ಆರ್ಥಿಕ ಚಟುವಟಿಕೆ ನಾವು ಅಂದುಕೊಂಡಿದ್ದಕ್ಕಿಂತಲೂ ಉತ್ತಮವಾಗಿ ಚೇತರಿಕೆ ಕಾಣುತ್ತಿದೆ. ಹೀಗಾಗಿ ಈ ಮೊದಲು ನಿಗದಿ ಮಾಡಿದ್ದ ಜಿಡಿಪಿ ಅಂದಾಜನ್ನು ಶೇ -9.5 ಇಂದ -7.5ಕ್ಕೆ ಏರಿಕೆ ಮಾಡುತ್ತಿದ್ದೇವೆ,” ಎಂದು ಅವರು ತಿಳಿಸಿದರು. ಅಕ್ಟೋಬರ್​ ತಿಂಗಳಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಆರ್​ಬಿಐ, 2020-21ರ ಅಂದಾಜು ಜಿಡಿಪಿಯನ್ನು -9.5 ಎಂದು ನಿಗದಿ ಮಾಡಿತ್ತು.

ರೆಪೊ ದರದಲ್ಲಿ ಇಲ್ಲ ಬದಲಾವಣೆ:

ನಾಲ್ಕನೇ ತ್ರೈಮಾಸಿಕದ ಆರಂಭದಲ್ಲಿ ಆರ್​ಬಿಐ ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದೆ. ಹೀಗಾಗಿ ರೆಪೊ ದರ ಯಾವುದೇ ಬದಲಾವಣೆ ಕಾಣದೆ ಶೇ.4 ಇದೆ. ಇನ್ನು ಹಿಮ್ಮುಖ ರೆಪೊ ದರ ಕೂಡ ಯಾವುದೆ ಬದಲಾವಣೆ ಕಾಣದೆ ಶೇ. 3.35ರಲ್ಲೇ ಉಳಿದುಕೊಂಡಿದೆ.

ಪಾತಾಳಕ್ಕೆ ಕುಸಿದಿರುವ ಜಿಡಿಪಿ:

ಕೊರೋನಾ ವೈರಸ್​ ಕಾಣಿಸಿಕೊಂಡ ನಂತರ ಕೇಂದ್ರ ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿತ್ತು. ಇದರಿಂದ ಎಲ್ಲಾ ಆರ್ಥಿಕ ಚಟುವಟಿಕೆಗಳು ನಿಂತಿದ್ದವು. ಇದು ಆರ್ಥಿಕತೆಗೆ ಭಾರೀ ಹೊಡೆತ ನೀಡಿತ್ತು. ಪರಿಣಾಮ 2019-20ರ ಜಿಡಿಪಿ ದರ ಪಾತಾಳಕ್ಕೆ ಕುಸಿದಿದೆ. ಭಾರತದ ಜಿಡಿಪಿ ದರ ಕಳೆದ ಆರ್ಥಿಕ ವರ್ಷದಲ್ಲಿ ಶೇ. -23.ಕ್ಕೆ ಆಗಿತ್ತು.

ಏರಿಕೆ ಕಂಡ ಸೆನ್ಸೆಕ್ಸ್​:

ಆರ್​ಬಿಐ ಮಹತ್ವದ ಘೋಷಣೆ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡಿದೆ. ಬೆಳಗ್ಗೆ 11 ಗಂಟೆಗೆ ಸೆನ್ಸೆಕ್ಸ್​ 300ಕ್ಕೂ ಅಂಕ ಏರಿಕೆ ಕಾಣುವ ಮೂಲಕ ಇದೇ ಮೊದಲ ಬಾರಿಗೆ 45 ಸಾವಿರದ ಅಂಕ ದಾಟಿತ್ತು. ಇನ್ನು ನಿಫ್ಟಿ 73 ಅಂಕ ಏರಿಕೆ ಕಂಡು 13,207 ಗಡಿ ತಲುಪಿದೆ.

ಭಾರತದ ಜಿಡಿಪಿ ಭಾರೀ ಕುಸಿತ, ಆತಂಕ ಮೂಡಿಸಿದ ವಿಶ್ವ ಬ್ಯಾಂಕ್ ವರದಿ

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್