AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದಾಜು GDP ಮೈನಸ್​ ಶೇಕಡಾ 7.5ಕ್ಕೆ ಏರಿಕೆ ಮಾಡಿದ ಆರ್​ಬಿಐ

ಈ ಬಗ್ಗೆ ಇಂದು ಮಾತನಾಡಿರುವ ಆರ್​ಬಿಐ ಗವರ್ನರ್​ ಶಕ್ತಿಕಾಂತ್​ ದಾ​ಸ್​, 2020 ನಮಗೆ ಒಂದು ಸವಾಲಿನ ವರ್ಷವಾಗಿತ್ತು. ಆದರೆ, ಭಾರತದ ಆರ್ಥಿಕ ಚಟುವಟಿಕೆ ನಾವು ಅಂದುಕೊಂಡಿದ್ದಕ್ಕಿಂತಲೂ ಉತ್ತಮವಾಗಿ ಚೇತರಿಕೆ ಕಾಣುತ್ತಿದೆ ಎಂದರು.

ಅಂದಾಜು GDP ಮೈನಸ್​ ಶೇಕಡಾ 7.5ಕ್ಕೆ ಏರಿಕೆ ಮಾಡಿದ ಆರ್​ಬಿಐ
ಶಕ್ತಿಕಾಂತ್​ ದಾಸ್
Follow us
preethi shettigar
|

Updated on: Dec 04, 2020 | 12:51 PM

ಮುಂಬೈ: 2020-21ನೇ ಹಣಕಾಸು ವರ್ಷದ ಒಟ್ಟು ದೇಶಿಯ ಉತ್ಪಾದನೆ (ಜಿಡಿಪಿ) ಅಂದಾಜನ್ನು ಕೇಂದ್ರ ಹಣಕಾಸು ಸಂಸ್ಥೆ (ಆರ್​ಬಿಐ) ಶೇ. ಮೈನಸ್ 9.5 ಇಂದ ಶೇ. 7.5ಕ್ಕೆ ಏರಿಕೆ ಮಾಡಿದೆ. ಆರ್ಥಿಕ ಚಟುವಟಿಕೆಯಲ್ಲಿ ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಬೆಳವಣಿಗೆ ಕಾಣುತ್ತಿರುವುದರಿಂದ ಆರ್​ಬಿಐ ಈ ಘೋಷಣೆ ಮಾಡಿದೆ.

ಈ ಬಗ್ಗೆ ಇಂದು ಮಾತನಾಡಿರುವ ಆರ್​ಬಿಐ ಗವರ್ನರ್​ ಶಕ್ತಿಕಾಂತ್​ ದಾ​ಸ್​, “2020 ನಮಗೆ ಒಂದು ಸವಾಲಿನ ವರ್ಷವಾಗಿತ್ತು. ಇದರಿಂದ ಹೊರಬರುವುದು ನಮ್ಮ ಮುಂದಿರುವ ದೊಡ್ಡ ಚಾಲೆಂಜ್​. ಆದರೆ, ಭಾರತದ ಆರ್ಥಿಕ ಚಟುವಟಿಕೆ ನಾವು ಅಂದುಕೊಂಡಿದ್ದಕ್ಕಿಂತಲೂ ಉತ್ತಮವಾಗಿ ಚೇತರಿಕೆ ಕಾಣುತ್ತಿದೆ. ಹೀಗಾಗಿ ಈ ಮೊದಲು ನಿಗದಿ ಮಾಡಿದ್ದ ಜಿಡಿಪಿ ಅಂದಾಜನ್ನು ಶೇ -9.5 ಇಂದ -7.5ಕ್ಕೆ ಏರಿಕೆ ಮಾಡುತ್ತಿದ್ದೇವೆ,” ಎಂದು ಅವರು ತಿಳಿಸಿದರು. ಅಕ್ಟೋಬರ್​ ತಿಂಗಳಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಆರ್​ಬಿಐ, 2020-21ರ ಅಂದಾಜು ಜಿಡಿಪಿಯನ್ನು -9.5 ಎಂದು ನಿಗದಿ ಮಾಡಿತ್ತು.

ರೆಪೊ ದರದಲ್ಲಿ ಇಲ್ಲ ಬದಲಾವಣೆ:

ನಾಲ್ಕನೇ ತ್ರೈಮಾಸಿಕದ ಆರಂಭದಲ್ಲಿ ಆರ್​ಬಿಐ ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದೆ. ಹೀಗಾಗಿ ರೆಪೊ ದರ ಯಾವುದೇ ಬದಲಾವಣೆ ಕಾಣದೆ ಶೇ.4 ಇದೆ. ಇನ್ನು ಹಿಮ್ಮುಖ ರೆಪೊ ದರ ಕೂಡ ಯಾವುದೆ ಬದಲಾವಣೆ ಕಾಣದೆ ಶೇ. 3.35ರಲ್ಲೇ ಉಳಿದುಕೊಂಡಿದೆ.

ಪಾತಾಳಕ್ಕೆ ಕುಸಿದಿರುವ ಜಿಡಿಪಿ:

ಕೊರೋನಾ ವೈರಸ್​ ಕಾಣಿಸಿಕೊಂಡ ನಂತರ ಕೇಂದ್ರ ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿತ್ತು. ಇದರಿಂದ ಎಲ್ಲಾ ಆರ್ಥಿಕ ಚಟುವಟಿಕೆಗಳು ನಿಂತಿದ್ದವು. ಇದು ಆರ್ಥಿಕತೆಗೆ ಭಾರೀ ಹೊಡೆತ ನೀಡಿತ್ತು. ಪರಿಣಾಮ 2019-20ರ ಜಿಡಿಪಿ ದರ ಪಾತಾಳಕ್ಕೆ ಕುಸಿದಿದೆ. ಭಾರತದ ಜಿಡಿಪಿ ದರ ಕಳೆದ ಆರ್ಥಿಕ ವರ್ಷದಲ್ಲಿ ಶೇ. -23.ಕ್ಕೆ ಆಗಿತ್ತು.

ಏರಿಕೆ ಕಂಡ ಸೆನ್ಸೆಕ್ಸ್​:

ಆರ್​ಬಿಐ ಮಹತ್ವದ ಘೋಷಣೆ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡಿದೆ. ಬೆಳಗ್ಗೆ 11 ಗಂಟೆಗೆ ಸೆನ್ಸೆಕ್ಸ್​ 300ಕ್ಕೂ ಅಂಕ ಏರಿಕೆ ಕಾಣುವ ಮೂಲಕ ಇದೇ ಮೊದಲ ಬಾರಿಗೆ 45 ಸಾವಿರದ ಅಂಕ ದಾಟಿತ್ತು. ಇನ್ನು ನಿಫ್ಟಿ 73 ಅಂಕ ಏರಿಕೆ ಕಂಡು 13,207 ಗಡಿ ತಲುಪಿದೆ.

ಭಾರತದ ಜಿಡಿಪಿ ಭಾರೀ ಕುಸಿತ, ಆತಂಕ ಮೂಡಿಸಿದ ವಿಶ್ವ ಬ್ಯಾಂಕ್ ವರದಿ

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?