AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ-ಡೆಹ್ರಾಡೂನ್ ನಡುವಿನ ಪ್ರಯಾಣದ ಸಮಯ ಈಗ ಕೇವಲ ಎರಡೂವರೆ ಗಂಟೆ, ಆರ್ಥಿಕ ಕಾರಿಡಾರ್ ಉದ್ಘಾಟಿಸಿದ ಪ್ರಧಾನಿ ಮೋದಿ

ದೇಶದ ಮೂಲಸೌಕರ್ಯ ಇತಿಹಾಸದಲ್ಲಿ ಇಂದು ಮತ್ತೊಂದು ಸುವರ್ಣ ಅಧ್ಯಾಯ ಬರೆಯಲಾಗಿದೆ. ಬಹುನಿರೀಕ್ಷಿತ 213 ಕಿ.ಮೀ. ಉದ್ದದ ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್‌ ಅನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ(Narendra Modi) ಉದ್ಘಾಟಿಸಿದ್ದಾರೆ. ಈ ಕಾರಿಡಾರ್ ಕೇವಲ ರಸ್ತೆಯಲ್ಲ, ಇದು ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಅಭಿವೃದ್ಧಿಯ ವೇಗಕ್ಕೆ ಹೊಸ ಶಕ್ತಿ ನೀಡಲಿರುವ 'ವೇಗದ ಪಥ' ಎಂದರು. ಈ ಮೊದಲು ದೆಹಲಿಯಿಂದ ಡೆಹ್ರಾಡೂನ್ ತಲುಪಲು ಕನಿಷ್ಠ 6 ಗಂಟೆಗಳ ಕಾಲ ಬೇಕಾಗುತ್ತಿತ್ತು.

ದೆಹಲಿ-ಡೆಹ್ರಾಡೂನ್ ನಡುವಿನ ಪ್ರಯಾಣದ ಸಮಯ ಈಗ ಕೇವಲ ಎರಡೂವರೆ ಗಂಟೆ, ಆರ್ಥಿಕ ಕಾರಿಡಾರ್ ಉದ್ಘಾಟಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Apr 14, 2026 | 2:58 PM

Share

ಡೆಹ್ರಾಡೂನ್, ಏಪ್ರಿಲ್ 14: ದೇಶದ ಮೂಲಸೌಕರ್ಯ ಇತಿಹಾಸದಲ್ಲಿ ಇಂದು ಮತ್ತೊಂದು ಸುವರ್ಣ ಅಧ್ಯಾಯ ಬರೆಯಲಾಗಿದೆ. ಬಹುನಿರೀಕ್ಷಿತ 213 ಕಿ.ಮೀ. ಉದ್ದದ ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್‌ ಅನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ(Narendra Modi) ಉದ್ಘಾಟಿಸಿದ್ದಾರೆ. ಈ ಕಾರಿಡಾರ್ ಕೇವಲ ರಸ್ತೆಯಲ್ಲ, ಇದು ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಅಭಿವೃದ್ಧಿಯ ವೇಗಕ್ಕೆ ಹೊಸ ಶಕ್ತಿ ನೀಡಲಿರುವ ‘ವೇಗದ ಪಥ’ ಎಂದರು.

ಈ ಮೊದಲು ದೆಹಲಿಯಿಂದ ಡೆಹ್ರಾಡೂನ್ ತಲುಪಲು ಕನಿಷ್ಠ 6 ಗಂಟೆಗಳ ಕಾಲ ಬೇಕಾಗುತ್ತಿತ್ತು. ಆದರೆ, ಈ ಪ್ರವೇಶ-ನಿಯಂತ್ರಿತ (Access-controlled) ಹೆದ್ದಾರಿಯಿಂದಾಗಿ ಈಗ ಪ್ರಯಾಣದ ಸಮಯ ಕೇವಲ 2.5 ಗಂಟೆಗೆ (150 ನಿಮಿಷ) ಇಳಿಕೆಯಾಗಲಿದೆ. ಇದು ಪ್ರವಾಸಿಗರಿಗೆ ಮತ್ತು ನಿತ್ಯ ಪ್ರಯಾಣಿಕರಿಗೆ ವರದಾನವಾಗಲಿದೆ.

ಪರಿಸರ ಮತ್ತು ಅಭಿವೃದ್ಧಿಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಈ ಯೋಜನೆಯಲ್ಲಿ ವಿಶೇಷ ಗಮನ ಹರಿಸಲಾಗಿದೆ. ಏಷ್ಯಾದಲ್ಲೇ ಅತಿ ಉದ್ದವಾದ 12 ಕಿ.ಮೀ. ಎತ್ತರದ (Elevated) ವನ್ಯಜೀವಿ ಕಾರಿಡಾರ್ ಅನ್ನು ಇಲ್ಲಿ ನಿರ್ಮಿಸಲಾಗಿದೆ. ಆನೆಗಳು ಸೇರಿದಂತೆ ಕಾಡು ಪ್ರಾಣಿಗಳು ರಸ್ತೆಯ ಅಡೆತಡೆಯಿಲ್ಲದೆ ಸಂಚರಿಸಲು ಮೀಸಲಾದ ಅಂಡರ್‌ಪಾಸ್‌ಗಳು ಮತ್ತು ಸುರಂಗಗಳನ್ನು ನಿರ್ಮಿಸಲಾಗಿದೆ. ಇದು ಮಾನವ-ಪ್ರಾಣಿ ಸಂಘರ್ಷವನ್ನು ತಡೆಯಲು ಸಹಕಾರಿ. ಸುಧಾರಿತ ಸಂಚಾರ ನಿರ್ವಹಣಾ ವ್ಯವಸ್ಥೆಯು ಸಂಚಾರದ ಹರಿವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತದೆ.

ಈ ಕಾರಿಡಾರ್ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಮತ್ತು ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಗಳೊಂದಿಗೆ ಸಂಪರ್ಕ ಸಾಧಿಸುವುದರಿಂದ ಸುಗಮ ಸಂಚಾರಕ್ಕೆ ದಾರಿ ಮಾಡಿಕೊಡುತ್ತದೆ. 100ಕ್ಕೂ ಹೆಚ್ಚು ಅಂಡರ್‌ಪಾಸ್‌ಗಳು, ಸೇತುವೆಗಳು ಮತ್ತು ವಿಶ್ವದರ್ಜೆಯ ಮಾರ್ಗ ಬದಿಯ ಸೌಲಭ್ಯಗಳನ್ನು ಇದು ಹೊಂದಿದೆ.

ಮತ್ತಷ್ಟು ಓದಿ: ಪ್ರಧಾನಿ ಮೋದಿಗಾಗಿ ಸಿದ್ಧವಾದ ನಾಲ್ವಡಿ ಒಡೆಯರ್ ಮಾದರಿ ಪೇಟದ ವಿಶೇಷಗಳೇನು ಗೊತ್ತಾ? ಇಲ್ಲಿದೆ ನೋಡಿ

ಸುಮಾರು 11,800 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಆರು ಪಥಗಳ ಹೆದ್ದಾರಿಯು ಪ್ರಾದೇಶಿಕ ವ್ಯಾಪಾರ ಮತ್ತು ಪ್ರವಾಸೋದ್ಯಮಕ್ಕೆ ದೊಡ್ಡ ಮಟ್ಟದ ಉತ್ತೇಜನ ನೀಡಲಿದೆ. ಟೋಲ್ ದರಗಳು ಸ್ವಲ್ಪ ಹೆಚ್ಚಿದ್ದರೂ, ಇಂಧನ ಉಳಿತಾಯ ಮತ್ತು ಸಮಯದ ಲಾಭವು ಪ್ರಯಾಣಿಕರಿಗೆ ಆರ್ಥಿಕವಾಗಿ ಲಾಭದಾಯಕವಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಒಟ್ಟಾರೆಯಾಗಿ, ದೆಹಲಿ-ಡೆಹ್ರಾಡೂನ್ ಕಾರಿಡಾರ್ ಭಾರತದ ರಸ್ತೆ ಸಾರಿಗೆ ವ್ಯವಸ್ಥೆಯು ಜಾಗತಿಕ ಮಟ್ಟಕ್ಕೆ ಏರುತ್ತಿರುವುದಕ್ಕೆ ಸಾಕ್ಷಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್