AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಲ್ವಾನ್ ಕಣಿವೆ ಘರ್ಷಣೆಯಲ್ಲಿ ಹುತಾತ್ಮನಾದ ಮಗನಿಗೆ ಸ್ಮಾರಕ ನಿರ್ಮಿಸಿದ್ದಕ್ಕೆ ಯೋಧನ ಅಪ್ಪನಿಗೆ ಥಳಿಸಿ ಬಂಧಿಸಿದ ಪೊಲೀಸ್

ಬಿಹಾರದ ವೈಶಾಲಿಯಲ್ಲಿರುವ ಸರ್ಕಾರಿ ಭೂಮಿಯಲ್ಲಿ ತನ್ನ ಮಗನಿಗೆ ಸ್ಮಾರಕ ನಿರ್ಮಿಸಿದ್ದಕ್ಕಾಗಿ ಯೋಧ ಜೈ ಕಿಶೋರ್ ಸಿಂಗ್ ಅವರ ಅಪ್ಪನಿಗೆ ಥಳಿಸಲಾಗಿದೆ ಎಂದು ಯೋಧನ ಕುಟುಂಬ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ

ಗಾಲ್ವಾನ್ ಕಣಿವೆ ಘರ್ಷಣೆಯಲ್ಲಿ ಹುತಾತ್ಮನಾದ ಮಗನಿಗೆ ಸ್ಮಾರಕ ನಿರ್ಮಿಸಿದ್ದಕ್ಕೆ ಯೋಧನ ಅಪ್ಪನಿಗೆ ಥಳಿಸಿ ಬಂಧಿಸಿದ ಪೊಲೀಸ್
ಜೈ ಕಿಶೋರ್ ಸಿಂಗ್ ಅವರ ಪ್ರತಿಮೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 28, 2023 | 4:36 PM

Share

2020 ರ ಗಾಲ್ವಾನ್ ಕಣಿವೆ ಘರ್ಷಣೆಯಲ್ಲಿ (Galwan clash) ಹುತಾತ್ಮನಾದ ಯೋಧನ ತಂದೆಯನ್ನು ಬಿಹಾರದಲ್ಲಿ (Bihar) ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಪೊಲೀಸರು ಥಳಿಸಿ ನಂತರ ಬಂಧಿಸಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಬಿಹಾರದ ವೈಶಾಲಿಯಲ್ಲಿರುವ ಸರ್ಕಾರಿ ಭೂಮಿಯಲ್ಲಿ ತನ್ನ ಮಗನಿಗೆ ಸ್ಮಾರಕ ನಿರ್ಮಿಸಿದ್ದಕ್ಕಾಗಿ ಯೋಧ ಜೈ ಕಿಶೋರ್ ಸಿಂಗ್ ಅವರ ಅಪ್ಪನಿಗೆ ಥಳಿಸಲಾಗಿದೆ ಎಂದು ಯೋಧನ ಕುಟುಂಬ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.ಎಎನ್‌ಐ ಜೊತೆ ಮಾತನಾಡಿದ ಸಿಂಗ್ ಅವರ ಸಹೋದರ, “ಡಿಎಸ್‌ಪಿ ಮೇಡಮ್ ಭೇಟಿ ನೀಡಿ 15 ದಿನಗಳಲ್ಲಿ ಪ್ರತಿಮೆಯನ್ನು ತೆಗೆದುಹಾಕುವಂತೆ ನಮಗೆ ತಿಳಿಸಿದ್ದರು. ನಂತರ ಪೊಲೀಸ್ ಠಾಣೆಯ ಉಸ್ತುವಾರಿ ನಮ್ಮ ಮನೆಗೆ ಬಂದು ಅಪ್ಪನನ್ನು ಬಂಧಿಸಿ ಥಳಿಸಿದ್ದಾರೆ ಎಂದಿದ್ದಾರೆ.

ಈ ಪ್ರಕರಣವು ವೈಶಾಲಿಯ ಜಂಡಹಾದಲ್ಲಿ ನಡೆದ ವಿವಾದಕ್ಕೆ ಸಂಬಂಧಿಸಿದೆ. ಅಲ್ಲಿ ಜನವರಿಯಲ್ಲಿ, ಹರಿನಾಥ ರಾಮನ ಭೂಮಿಯಲ್ಲಿ ಮತ್ತು ಜಿಲ್ಲೆಯ ಸರ್ಕಾರಿ ಭೂಮಿಯಲ್ಲಿ ಪ್ರತಿಮೆಯನ್ನು ಸ್ಥಾಪಿಸುವ ಬಗ್ಗೆ ಎಸ್‌ಸಿ / ಎಸ್‌ಟಿ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಯಿತು. ನಂತರ, ಪ್ರತಿಮೆಯ ಸುತ್ತ ಗೋಡೆಗಳನ್ನು ನಿರ್ಮಿಸಲಾಗಿದೆ. ಈ ವಿಷಯದಲ್ಲಿ ಅಕ್ರಮ ಒತ್ತುವರಿಯಿಂದಾಗಿ ಭೂಮಾಲೀಕರ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಮಹುವಾ ಹೇಳಿದ್ದಾರೆ.

ಇದನ್ನೂ ಓದಿ: ಗ್ರೇಟರ್ ನೋಯ್ಡಾ ರಸ್ತೆ ಮಧ್ಯೆ ಪಟಾಕಿ ತುಂಬಿದ್ದ ಇ ರಿಕ್ಷಾಗೆ ತಗುಲಿದ ಬೆಂಕಿ; ಓರ್ವ ವ್ಯಕ್ತಿ ಸಾವು

ಜೂನ್ 15, 2020 ರಂದು ಪೂರ್ವ ಲಡಾಖ್‌ನಲ್ಲಿ ವಾಸ್ತವ ನಿಯಂತ್ರಣ ರೇಖೆಯ ಬಳಿ ಚೀನಾದ ಸೈನಿಕರ ವಿರುದ್ಧ ಹೋರಾಡಿ ಗಾಲ್ವಾನ್ ಕಣಿವೆಯ ಸಂಘರ್ಷದಲ್ಲಿ ಭಾರತೀಯ ಸೇನೆಯ 20 ಯೋಧರು ಹುತಾತ್ಮರಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ