AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್​ಫೋನ್ ಕೊಡಿಸದಿದ್ದಕ್ಕೆ ಮಗ ಆತ್ಮಹತ್ಯೆ, ಅದೇ ಹಗ್ಗದಿಂದ ಬಡ ತಂದೆಯೂ ಸಾವು

ಸ್ಮಾರ್ಟ್​ಫೋನ್​ ಕೊಡಿಸಲಿಲ್ಲ ಎನ್ನುವ ಕಾರಣಕ್ಕೆ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ನಾಂದೇಡ್​ನಲ್ಲಿ ಬಡ ರೈತನ ಮಗ ತಂದೆ ಬಳಿ ಸ್ಮಾರ್ಟ್​ಫೋಷನ್ ಕೊಡಿಸು ಎಂದು ಬೇಡಿಕೆ ಇಟ್ಟಿದ್ದ, ಆ ಬಾಲಕ ಇನ್ನೂ 10ನೇ ತರಗತಿ ಓದುತ್ತಿದ್ದ.ಓಂಕಾರ್ ಎಂಬ ಬಾಲಕ ಮೂವರು ಸಹೋದರರ ಪೈಕಿ ಕಿರಿಯವನಾಗಿದ್ದ.

ಸ್ಮಾರ್ಟ್​ಫೋನ್ ಕೊಡಿಸದಿದ್ದಕ್ಕೆ ಮಗ ಆತ್ಮಹತ್ಯೆ, ಅದೇ ಹಗ್ಗದಿಂದ ಬಡ ತಂದೆಯೂ ಸಾವು
ಸ್ಮಾರ್ಟ್​ಫೋನ್
ನಯನಾ ರಾಜೀವ್
|

Updated on: Jan 12, 2025 | 12:25 PM

Share

ಅಪ್ಪ-ಮಗ ಒಂದೇ ಹಗ್ಗದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಸದಾ ತಂದೆ-ತಾಯಿ ತಮ್ಮ ಯಾವುದೇ ಕಷ್ಟಗಳು ತಿಳಿಯದಂತೆ ಬೆಳೆಸಿರುತ್ತಾರೆ, ಹಾಗಾಗಿ ಮಕ್ಕಳಿಗೆ ಪೋಷಕರು ಪಡುತ್ತಿರುವ ಕಷ್ಟದ ಅರಿವೇ ಇರುವುದಿಲ್ಲ.

ಹತ್ತಾರು ಜೊತೆ ಚಪ್ಪಲಿ, ಬೈಕ್, ಸ್ಮಾರ್ಟ್​ಫೋನ್, ಪೆಟ್ರೋಲ್​ಗೆ ದುಡ್ಡು, ಫೋನ್​ಗೆ ಕರೆನ್ಸಿ ಹೀಗೆ ಮಕ್ಕಳ ಅಗತ್ಯವನ್ನು ಪೂರೈಸುವುದರಲ್ಲಿಯೇ ಬಡ ತಂದೆ ತಾಯಿ ತಮ್ಮ ಜೀವನ ಕಳೆದುಬಿಡುತ್ತಾರೆ. ತುಂಬಾ ಕಷ್ಟವಾದಾಗ ಈಗ ನೀ ಕೇಳಿದ್ದನ್ನು ತೆಗೆಸಿಕೊಡಲು ಸಾಧ್ಯವಿಲ್ಲ ಸ್ವಲ್ಪ ದಿನ ಕಾಯಿ ಎಂದರೆ ಸಾಕು ಕೋಪಕ್ಕೆ ತಪ್ಪು ನಿರ್ಧಾರ ತೆಗೆದುಕೊಂಡುಬಿಡುತ್ತಾರೆ ಅದಕ್ಕೆ ಈ ಘಟನೆಯೇ ಸಾಕ್ಷಿ.

ಮಹಾರಾಷ್ಟ್ರದ ನಾಂದೇಡ್​ನಲ್ಲಿ ಬಡ ರೈತನ ಮಗ ತಂದೆ ಬಳಿ ಸ್ಮಾರ್ಟ್​ಫೋಷನ್ ಕೊಡಿಸು ಎಂದು ಬೇಡಿಕೆ ಇಟ್ಟಿದ್ದ, ಆ ಬಾಲಕ ಇನ್ನೂ 10ನೇ ತರಗತಿ ಓದುತ್ತಿದ್ದ. ಆದರೆ ಅದು ಸಾಧ್ಯವಾಗದಿದ್ದಾಗ ಮಗ ಕೋಪದಲ್ಲಿ ನೇಣಿಗೆ ಶರಣಾಗಿದ್ದಾನೆ, ಮಗನ ಸಾವನ್ನು ನೋಡಿ ನೊಂದ ತಂದೆ ಕೂಡ ಮಗ ಮೃತಪಟ್ಟ ಹಗ್ಗದಲ್ಲೇ ನೇಣುಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಎಲ್ಲರಲ್ಲೂ ನೋವು ಮೂಡಿಸಿದೆ.

ಮತ್ತಷ್ಟು ಓದಿ: ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದ ಮಹಿಳೆ ಮೇಲೆ ಅನುಮಾನ: ಸಂತೆಯಿಂದ ಮಚ್ಚು ತಂದು ಸಿನಿಮೀಯವಾಗಿ ಮೂವರ ಹತ್ಯೆ ಮಾಡಿದ ವ್ಯಕ್ತಿ

ಓಂಕಾರ್ ಎಂಬ ಬಾಲಕ ಮೂವರು ಸಹೋದರರ ಪೈಕಿ ಕಿರಿಯವನಾಗಿದ್ದ, ಆತ ಹಾಸ್ಟೆಲ್​ನಲ್ಲಿ ವಾಸವಾಗಿದ್ದ, ಈಗಾಗಲೇ ಸಾಲದ ಸುಳಿಯಲ್ಲಿ ಸಿಲುಕಿದ್ದ ತಂದೆಗೆ ಇದು ಸಾಧ್ಯವಾಗಲಿಲ್ಲ. ಹೊಲದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ ಸಾವನ್ನಪ್ಪಿದ್ದ, ಮಗನ ಅವಸ್ಥೆ ನೋಡಿ ನೊಂದ ತಂದೆ ಕೂಡ ಅದೇ ಹಗ್ಗ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಕಸ್ಮಿಕ ಸಾವು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ, ಓಂಕಾರ್ ಮತ್ತು ಅವರ ತಂದೆಯ ಅಂತ್ಯಕ್ರಿಯೆಯನ್ನು ಗುರುವಾರ ಸಂಜೆ ನೆರವೇರಿಸಲಾಯಿತು. ಈ ಆಧುನಿಕ ಜಗತ್ತಿನಲ್ಲಿ ಜೀವನದಲ್ಲಿ ಹೆಚ್ಚುತ್ತಿರುವ ನಿರೀಕ್ಷೆಗಳಿಂದಾಗಿ ಉಂಟಾಗುವ ಸಾಮಾಜಿಕ ಒತ್ತಡವನ್ನು ಸಹ ಇದು ಒತ್ತಿ ಹೇಳುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ