Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೊಸ ರೂಪಾಂತರ ಭೀತಿ; ಕೇಂದ್ರದಿಂದ ಉನ್ನತ ಮಟ್ಟದ ಸಭೆ, ರಾಜ್ಯಗಳಿಗೆ ಮಹತ್ವದ ಸೂಚನೆ

New variant of Coronavirus; ಕೊರೋನಾದ ಹೊಸ ರೂಪಾಂತರದ ಕಟ್ಟುನಿಟ್ಟಾದ ಮೇಲ್ವಿಚಾರಣೆಯೊಂದಿಗೆ ಜಿನೋಮ್ ಸೀಕ್ವೆನ್ಸಿಂಗ್​ಗೆ ಅಧಿಕಾರಿಗಳೊಂದಿಗಿನ ಉನ್ನತ ಮಟ್ಟದ ಸಭೆಯಲ್ಲಿ ಪಿಕೆ ಮಿಶ್ರಾ ಸೂಚನೆಗಳನ್ನು ನೀಡಿದ್ದಾರೆ. ದೇಶದ ಕೋವಿಡ್ ಪರಿಸ್ಥಿತಿ ಸ್ಥಿರವಾಗಿದೆ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯು ಸಿದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಕೊರೊನಾ ಹೊಸ ರೂಪಾಂತರ ಭೀತಿ; ಕೇಂದ್ರದಿಂದ ಉನ್ನತ ಮಟ್ಟದ ಸಭೆ, ರಾಜ್ಯಗಳಿಗೆ ಮಹತ್ವದ ಸೂಚನೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Aug 21, 2023 | 10:47 PM

ನವದೆಹಲಿ, ಆಗಸ್ಟ್ 21: ಕೊರೊನಾ ವೈರಸ್​​ನ (Coronavirus) ಹೊಸ ರೂಪಾಂತರ ಜಾಗತಿಕವಾಗಿ ಹರಡುತ್ತಿರುವ ಭೀತಿ ಎದುರಾಗಿರುವ ಬೆನ್ನಲ್ಲೇ ಕೋವಿಡ್-19(Covid-19) ಪರಿಸ್ಥಿತಿ ಮತ್ತು ಸನ್ನದ್ಧತೆಯನ್ನು ಪರಿಶೀಲಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿ ಡಾ. ಪಿಕೆ ಮಿಶ್ರಾ ನೇತೃತ್ವದಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಆರೋಗ್ಯ ಕಾರ್ಯದರ್ಶಿಯವರು ಕೋವಿಡ್​​ನ ಜಾಗತಿಕ ಪರಿಸ್ಥಿತಿಯ ಬಗ್ಗೆ ವಿವರಿಸಿದರು. ಜಾಗತಿಕವಾಗಿ ಹರಡುತ್ತಿದೆ ಎಂದು ವರದಿಯಾದ ಬಿಎ.2.86 (Pirola) ಮತ್ತು ಇಜಿ.5 (Aris) ನಂತಹ ಕೊರೊನಾ ವೈರಸ್​ನ (SARS-CoV-2) ಕೆಲವು ಹೊಸ ರೂಪಾಂತರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ವಿಶ್ವ ಆರೋಗ್ಯ ಸಂಸ್ಥೆಯ (WHO) ಪ್ರಕಾರ ಪ್ರಕಾರ, ಕೊರೋನಾ ರೂಪಾಂತರವು 50 ಕ್ಕೂ ಹೆಚ್ಚು ದೇಶಗಳಲ್ಲಿ ಹರಡಿದೆ. ಆದರೆ ಬಿಎ.2.86 (ಪಿರೋಲಾ) ರೂಪಾಂತರವು ನಾಲ್ಕು ದೇಶಗಳಲ್ಲಿದೆ ಎಂದು ಆರೋಗ್ಯ ಕಾರ್ಯದರ್ಶಿ ಸಭೆಗೆ ತಿಳಿಸಿದರು. ಕಳೆದ 7 ದಿನಗಳಲ್ಲಿ ಜಾಗತಿಕವಾಗಿ ಒಟ್ಟು 2,96,219 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಭಾರತದಲ್ಲಿ 223 ಪ್ರಕರಣಗಳು ಪತ್ತೆಯಾಗಿವೆ ಎಂದು ಸಭೆಯಲ್ಲಿ ಅವರು ತಿಳಿಸಿದರು. ಕೋವಿಡ್ ಪ್ರಕರಣಗಳ ದೈನಂದಿನ ಸರಾಸರಿ 50 ಕ್ಕಿಂತ ಕಡಿಮೆ ಇದೆ. ಆದರೆ ವಾರದ ಪಾಸಿಟಿವಿಟಿ ದರವು 0.2 ಶೇಕಡಾಕ್ಕಿಂತ ಕಡಿಮೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕೊರೋನಾದ ಹೊಸ ರೂಪಾಂತರದ ಕಟ್ಟುನಿಟ್ಟಾದ ಮೇಲ್ವಿಚಾರಣೆಯೊಂದಿಗೆ ಜಿನೋಮ್ ಸೀಕ್ವೆನ್ಸಿಂಗ್​ಗೆ ಅಧಿಕಾರಿಗಳೊಂದಿಗಿನ ಉನ್ನತ ಮಟ್ಟದ ಸಭೆಯಲ್ಲಿ ಪಿಕೆ ಮಿಶ್ರಾ ಸೂಚನೆಗಳನ್ನು ನೀಡಿದ್ದಾರೆ. ದೇಶದ ಕೋವಿಡ್ ಪರಿಸ್ಥಿತಿ ಸ್ಥಿರವಾಗಿದೆ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯು ಸಿದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ ರಾಜ್ಯಗಳು ಇನ್​ಫ್ಲುಯೆಂಝಾ ಮಾದರಿಯ ಸೋಂಕುಗಳು ಮತ್ತು ತೀವ್ರ ತೀವ್ರವಾದ ಉಸಿರಾಟದ ಸೋಂಕು ಪ್ರಕರಣಗಳ ಮೇಲೆ ನಿಗಾ ಇಡಬೇಕು ಎಂದು ಸಲಹೆ ನೀಡಲಾಗಿದೆ.

ಇದನ್ನೂ ಓದಿ: 101 ವರ್ಷದ ನ್ಯೂರೋಲಜಿಸ್ಟ್​ನ ಯಶೋಗಾಥೆ; ಸಾಕ್ಷ್ಯಚಿತ್ರ ತೆಗೆಯಲು ಮುಂದಾದ ಮೊಮ್ಮಗ ಹೇಳೋದೇನು ನೋಡಿ

ಇತ್ತೀಚೆಗೆ, ಡಬ್ಲ್ಯುಎಚ್​​ಒ ಪ್ರಧಾನ ನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಕೂಡ ಕೊರೊನಾ ವೈರಸ್​​ನ ಹೊಸ ರೂಪಾಂತರದ ಬಗ್ಗೆ ಎಚ್ಚರಿಸಿದ್ದರು. ಕೋವಿಡ್ -19 ಇನ್ನು ಮುಂದೆ ಜಗತ್ತಿಗೆ ಆರೋಗ್ಯ ತುರ್ತುಸ್ಥಿತಿಯಲ್ಲ, ಆದರೆ ಅದು ಇನ್ನೂ ‘ಜಾಗತಿಕ ಆರೋಗ್ಯ ಬೆದರಿಕೆ’ಯಾಗಿ ಉಳಿದಿದೆ ಎಂದು ಅವರು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:46 pm, Mon, 21 August 23

ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ