AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನ ಲೈಂಗಿಕ ಕಿರುಕುಳದಿಂದ ಬೇಸತ್ತು ಆತನ ಗುಪ್ತಾಂಗ ಕತ್ತರಿಸಿದ ಮಗಳು!

ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮಲತಂದೆಯಿಂದ ಬೇಸತ್ತ 24 ವರ್ಷದ ಯುವತಿಯೊಬ್ಬಳು ಆತನ ಗುಪ್ತಾಂಗಗಳನ್ನು ಕತ್ತರಿಸಿ, ಆತನ ಕುತ್ತಿಗೆ ಮತ್ತು ಮುಖವನ್ನು ಗಾಯಗೊಳಿಸಿದ್ದಾಳೆ. ತನ್ನ ಮೇಲೆ ನಡೆದ ದೌರ್ಜನ್ಯವನ್ನು ವಿವರಿಸುವ ಯುವತಿಯ ವಿಡಿಯೋ ಇಂಟರ್ನೆಟ್‌ಗೆ ಹರಿದಾಡುತ್ತಿದ್ದು, ಈ ವಿಡಿಯೋದಲ್ಲಿ ಆ ಹುಡುಗಿಯ ಕೈಯಲ್ಲಿ ಚಾಕು ಕಾಣಿಸಿಕೊಂಡಿದ್ದು, ಆಕೆಯ ತಂದೆ ಮನೆಯೊಳಗೆ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಬಹುದು.

ಅಪ್ಪನ ಲೈಂಗಿಕ ಕಿರುಕುಳದಿಂದ ಬೇಸತ್ತು ಆತನ ಗುಪ್ತಾಂಗ ಕತ್ತರಿಸಿದ ಮಗಳು!
Sexual Harassment
ಸುಷ್ಮಾ ಚಕ್ರೆ
|

Updated on: Mar 27, 2025 | 9:14 PM

Share

ಪಾಲ್ಘರ್, ಮಾರ್ಚ್ 27: ತನ್ನ ಮಲತಂದೆ 2 ವರ್ಷಗಳಿಗೂ ಹೆಚ್ಚು ಕಾಲ ತನ್ನ ಮೇಲೆ ನಡೆಸಿದ ಲೈಂಗಿಕ ಶೋಷಣೆಯಿಂದ ಬೇಸತ್ತಿದ್ದ ಮಹಾರಾಷ್ಟ್ರದ ನಲಸೋಪರದ 24 ವರ್ಷದ ಯುವತಿ ತನ್ನ ಮಲತಂದೆಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಅವರ ಜನನಾಂಗಗಳನ್ನು ಕತ್ತರಿಸಿದ್ದಾಳೆ. ಈ ಘಟನೆ ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಲಸೋಪರ ಪೂರ್ವದ ಚಾಲ್‌ನಲ್ಲಿ ನಡೆದಿದೆ. ಈ ಹಲ್ಲೆಯಲ್ಲಿ ಯುವತಿಯ ಮಲತಂದೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಾಂಡಿವಲಿಯ ಶತಾಬ್ದಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಸೋಮವಾರ ತನ್ನ ಮೇಲೆ ಬಲವಂತವಾಗಿ ಹಲ್ಲೆ ನಡೆಸಲು ಪ್ರಯತ್ನಿಸಿದ 56 ವರ್ಷದ ಮಲತಂದೆಯ ಮೇಲೆ ಆ ಯುವತಿ ಹಲ್ಲೆ ನಡೆಸಿದ್ದಾಳೆ. ಆತನನ್ನು ಕಣ್ಣುಮುಚ್ಚುವಂತೆ ಮನವೊಲಿಸಿ, ಆತನ ಕಣ್ಣಿಗೆ ಬಟ್ಟೆ ಕಟ್ಟಿ ಚಾಕುವಿನಿಂದ ಹಲ್ಲೆ ಮಾಡಿ, ಆತನ ಜನನಾಂಗಗಳನ್ನು ಕತ್ತರಿಸಿದ್ದಾಳೆ. ನೋವಿನಿಂದ ಕಿರುಚುತ್ತಾ, ಆ ವ್ಯಕ್ತಿ ಬಟ್ಟೆಯ ಮೇಲೆಲ್ಲ ರಕ್ತದ ಕಲೆಗಳೊಂದಿಗೆ ಮನೆಯಿಂದ ಹೊರಗೆ ಓಡಿಹೋಗಿದ್ದಾನೆ. ಆದರೂ ಬಿಡದ ಆಕೆ ಅವನನ್ನು ಬೆನ್ನಟ್ಟಿ ರಸ್ತೆಯ ಮೇಲೆ ಮತ್ತೆ ಇರಿದಿದ್ದಾಳೆ. ಆಶ್ಚರ್ಯಚಕಿತರಾದ ಸ್ಥಳಿಯರು ಆಕೆ ಕೈಯಲ್ಲಿ ಚಾಕುವಿನಿಂದ ಓಡಾಡುತ್ತಿರುವ ವೀಡಿಯೊಗಳನ್ನು ಚಿತ್ರೀಕರಿಸಲು ಪ್ರಾರಂಭಿಸಿದರು. ಅವರಲ್ಲಿ ಒಬ್ಬರು ಪೊಲೀಸ್ ತುರ್ತು ಸಂಖ್ಯೆಗೆ ಕರೆ ಮಾಡಿದರು, ನಂತರ ಪೊಲೀಸರು ಸ್ಥಳಕ್ಕೆ ಬಂದು ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದರು.

ಇದನ್ನೂ ಓದಿ: ಅಪ್ರಾಪ್ತ ಬಾಲಕಿಯ ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

ಇದೀಗ ತುಲಿಂಜ್ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾದ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಮಲತಂದೆಯ ವಿರುದ್ಧ ಅತ್ಯಾಚಾರ ಪ್ರಕರಣ ಮತ್ತು ಮಹಿಳೆಯ ವಿರುದ್ಧ ಕೊಲೆಯತ್ನದ ಅಪರಾಧವನ್ನು ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. “ನಾವು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ. ಶೀಘ್ರದಲ್ಲೇ ಆಕೆಯ ಹೇಳಿಕೆಯನ್ನು ದಾಖಲಿಸುತ್ತೇವೆ” ಎಂದು ತುಲಿಂಜ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಹೈದರಾಬಾದ್: ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ರೈಲಿನಿಂದ ಹಾರಿದ ಯುವತಿ

ತನ್ನ ಮಲತಂದೆ ರಮೇಶ್ ಭಾರ್ತಿ ಕಳೆದ 2 ವರ್ಷಗಳಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾನೆ ಎಂದು ಆಕೆ ಹೇಳಿದ್ದಾಳೆ. ಕೋಪದ ಭರದಲ್ಲಿ, ಅದನ್ನು ಸಹಿಸಲಾಗದೆ ಚಾಕುವಿನಿಂದ ಅಪ್ಪನ ಮೇಲೆ ಹಲ್ಲೆ ನಡೆಸಿದ್ದಾಳೆ. ಹುಡುಗಿಯ ನಿಜವಾದ ತಂದೆ ನಿಧನರಾದ ನಂತರ ಆಕೆಯ ತಾಯಿ ರಮೇಶ್ ಅವರನ್ನು ವಿವಾಹವಾಗಿದ್ದರು.

ರಮೇಶ್ ತನ್ನ ಹೆಂಡತಿಯ ಮೇಲಿನ ಆಸಕ್ತಿಯನ್ನು ಕಳೆದುಕೊಂಡ ನಂತರ, ತನ್ನ ಮಲಮಗಳ ಜೊತೆ ಅಸಭ್ಯವಾಗಿ ವರ್ತಿಸಲು ಪ್ರಾರಂಭಿಸಿದನು. ರಮೇಶ್ ಆಕೆಯನ್ನು ಅನುಚಿತವಾಗಿ ಮುಟ್ಟುತ್ತಿದ್ದ ಮತ್ತು ಅವಳನ್ನು ಲೈಂಗಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದ ಎಂದು ವರದಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್