AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಮಾ ಪ್ರಕರಣ: ಫೆ.19ರಂದು ವಿಚಾರಣೆಗೆ ಹಾಜರಾಗಲು ಟಿಎಂಸಿ ನಾಯಕಿ ಮಹುವಾ ಮೊಯಿತ್ರಾಗೆ ಇಡಿ ಸಮನ್ಸ್

ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರಿಗೆ ಇಡಿ ಸಮನ್ಸ್ ನೀಡಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಪ್ರಕರಣದಲ್ಲಿ ವಿಚಾರಣೆಗಾಗಿ ಫೆಬ್ರವರಿ 19 ರಂದು ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಹೇಳಿದೆ

ಫೆಮಾ ಪ್ರಕರಣ: ಫೆ.19ರಂದು ವಿಚಾರಣೆಗೆ ಹಾಜರಾಗಲು ಟಿಎಂಸಿ ನಾಯಕಿ ಮಹುವಾ ಮೊಯಿತ್ರಾಗೆ ಇಡಿ ಸಮನ್ಸ್
ಮಹುವಾ ಮೊಯಿತ್ರಾ
ರಶ್ಮಿ ಕಲ್ಲಕಟ್ಟ
|

Updated on:Feb 15, 2024 | 7:11 PM

Share

ದೆಹಲಿ ಫೆಬ್ರುವರಿ 15: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆ ಪ್ರಕರಣದಲ್ಲಿ ವಿಚಾರಣೆಗಾಗಿ ಫೆಬ್ರವರಿ 19 ರಂದು ಏಜೆನ್ಸಿಯ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಗುರುವಾರ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ (Mahua moitra) ಅವರಿಗೆ ಸಮನ್ಸ್ ನೀಡಿದೆ. ಲೋಕಪಾಲ್ ಉಲ್ಲೇಖಿಸಿದ ಆರೋಪಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ಸಂಸ್ಥೆ (CBI) ಮೊಯಿತ್ರಾ ಅವರನ್ನೂ ತನಿಖೆಗೆ ಒಳಪಡಿಸಿದೆ. ಮೊಯಿತ್ರಾ ಅವರು ಲೋಕಸಭೆಯ ಪ್ರಶ್ನೆಗಳಲ್ಲಿ ಅದಾನಿ ಗ್ರೂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಆರೋಪಿಸಿದ್ದು, ಉಡುಗೊರೆಗಳ ವಿನಿಮಯಕ್ಕಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರ ಆಜ್ಞೆಯ ಮೇರೆಗೆ ಇದನ್ನು ಮಾಡಲಾಗಿದೆ.ಮೊಯಿತ್ರಾ ಅವರು ವಿತ್ತೀಯ ಲಾಭಕ್ಕಾಗಿ ರಾಷ್ಟ್ರೀಯ ಭದ್ರತೆಗೆ ರಾಜಿ ಮಾಡಿಕೊಳ್ಳುತ್ತಿದ್ದಾರೆ ಎಂದು ದುಬೆ ಆರೋಪಿಸಿದ್ದರು.

ಡಿಸೆಂಬರ್‌ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹುವಾ ಮೊಯಿತ್ರಾ ಅವರನ್ನು  ಲೋಕಸಭೆಯಿಂದ ಹೊರಹಾಕಲಾಯಿತು. ಅದಾನಿ ಗ್ರೂಪ್‌ನ ವ್ಯವಹಾರಗಳನ್ನು ಪ್ರಶ್ನಿಸಿದ್ದಕ್ಕಾಗಿ ತನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ಪ್ರತಿಪಾದಿಸಿದ ಮೊಯಿತ್ರಾ ಅವರು ಯಾವುದೇ ಈ ಆರೋಪವನ್ನು ನಿರಂತರವಾಗಿ ನಿರಾಕರಿಸಿದ್ದಾರೆ.

“ಲೋಕಪಾಲ್ ಕಾಯಿದೆಯ ಪ್ರಕಾರ ವೆಬ್‌ಸೈಟ್‌ನಲ್ಲಿ ಯಾವುದೇ ರೆಫರಲ್ ಆದೇಶವನ್ನು ಲೋಕಪಾಲ್ ಅಪ್‌ಲೋಡ್ ಮಾಡಿಲ್ಲ, ಅಥವಾ ಸಿಬಿಐ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ಮಾಧ್ಯಮ ಸರ್ಕಸ್‌ನಂತೆ ‘ಮೂಲಗಳು’ ಪತ್ರಕರ್ತರಿಗೆ ಹೇಳುತ್ತಿವೆ. ನನ್ನನ್ನು ಬೇಟೆಯಾಡುವ ಮುನ್ನ ₹ 13,000 ಕೋಟಿ ಅದಾನಿ ಕಲ್ಲಿದ್ದಲು ಹಗರಣದ ಬಗ್ಗೆ  ಸಿಬಿಐ ಪ್ರಾಥಮಿಕ ತನಿಖೆಗೆ  ನಡೆಸಬೇಕು ಎಂದು ಮೊಯಿತ್ರಾ ನವೆಂಬರ್‌ನಲ್ಲಿ ಹೇಳಿದ್ದರು.

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಸಿಬಿಐ ಪ್ರಶ್ನೆಗಳಿಗೆ ಮೊಯಿತ್ರಾ ಪ್ರತಿಕ್ರಿಯೆ ಸಲ್ಲಿಕೆ

ಗುರುವಾರ, ಮೊಯಿತ್ರಾ ಅವರು ತಮ್ಮ ಸಂಸದೀಯ ವಿಚಾರಣೆಯಲ್ಲಿ ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ ಪ್ರಶ್ನೆಗಳಿಗೆ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಬಿಐ ಪ್ರಸ್ತುತ ಆಕೆಯ ಪ್ರತಿಕ್ರಿಯೆಗಳನ್ನು ಪರಿಶೀಲಿಸುತ್ತಿದ್ದು ಇದಾದ ನಂತರ ಭ್ರಷ್ಟಾಚಾರ-ವಿರೋಧಿ ಒಂಬುಡ್ಸ್‌ಮನ್ ಲೋಕಪಾಲ್‌ಗೆ ವರದಿಯನ್ನು ಸಲ್ಲಿಸಲಿದೆ.

ಇದನ್ನೂ ಓದಿ: ಬಂಗಲೆ ತೆರವು ನೋಟಿಸ್ ಪ್ರಶ್ನಿಸಿ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್​

ಲೋಕಪಾಲ್ ಉಲ್ಲೇಖದ ಆಧಾರದ ಮೇಲೆ ಮೊಯಿತ್ರಾ ವಿರುದ್ಧದ ಆರೋಪಗಳ ಕುರಿತು ಸಿಬಿಐ ಪ್ರಾಥಮಿಕ ತನಿಖೆ ನಡೆಸುತ್ತಿದೆ. ತನಿಖೆಯ ಭಾಗವಾಗಿ, ಸಂಸ್ಥೆಯು ವಕೀಲ ಜೈ ದೇಹದ್ರಾಯ್ ಮತ್ತು ಉದ್ಯಮಿ ದರ್ಶನ್ ಹಿರಾನಂದಾನಿ ಅವರೊಂದಿಗೆ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:44 pm, Thu, 15 February 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು