AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Niranjan Hiranandani: 10 ಗಂಟೆಗಳ ಕಾಲ ಕೈಗಾರಿಕೋದ್ಯಮಿ ನಿರಂಜನ್ ಹೀರಾನಂದಾನಿ ವಿಚಾರಣೆ ನಡೆಸಿದ ಇಡಿ

ರಿಯಲ್ ಎಸ್ಟೇಟ್​ ಉದ್ಯಮಿ ನಿರಂಜನ್ ಹೀರಾನಂದಾನಿ ಅವರು ತಮ್ಮ ವಿರುದ್ಧ ಆರಂಭಿಸಲಾದ ಫೆಮಾ(ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ)ಉಲ್ಲಂಘನೆ ತನಿಖೆಗೆ ಸಂಬಂಧಿಸಿದಂತೆ ಸೋಮವಾರ ಮುಂಬೈನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.

Niranjan Hiranandani: 10 ಗಂಟೆಗಳ ಕಾಲ ಕೈಗಾರಿಕೋದ್ಯಮಿ ನಿರಂಜನ್ ಹೀರಾನಂದಾನಿ ವಿಚಾರಣೆ ನಡೆಸಿದ ಇಡಿ
ನಿರಂಜನ್ ಹೀರಾನಂದಾನಿ
ನಯನಾ ರಾಜೀವ್
|

Updated on: Mar 05, 2024 | 10:08 AM

Share

ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕೈಗಾರಿಕೋದ್ಯಮಿ ನಿರಂಜನ್ ಹೀರಾನಂದಾನಿ(Niranjan Hiranandani) ವಿರುದ್ಧ ಇಡಿ ತನಿಖೆ ನಡೆಸುತ್ತಿದೆ. ಇಡಿ ವಿಚಾರಣೆ 10 ಗಂಟೆಗೂ ಹೆಚ್ಚು ಕಾಲ ನಡೆಯಿತು. ಸೋಮವಾರ ಬೆಳಗ್ಗೆ 11.30ರಿಂದ ವಿಚಾರಣೆ ಆರಂಭಿಸಿದ್ದು,  ರಾತ್ರಿ 10.30ಕ್ಕೆ ವಿಚಾರಣೆ ಮುಕ್ತಾಯಗೊಂಡಿದೆ. FEMA (ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ) ಉಲ್ಲಂಘನೆಗಳ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆ ನಡೆದಿದೆ.

ನಾವು ತನಿಖೆಗೆ ಸಹಕರಿಸಿದ್ದೇವೆ ಮತ್ತು ಇಡಿ ಅಧಿಕಾರಿಗಳು ಕೇಳಿದ ಹಲವಾರು ಪ್ರಶ್ನೆಗಳಿಗೆ ನಾನು ಉತ್ತರಿಸಿದ್ದೇನೆ ಎಂದು ಹೀರಾನಂದಾನಿ ಪ್ರತಿಕ್ರಿಯಿಸಿದ್ದಾರೆ. ಕಳೆದ ತಿಂಗಳು ಇಡಿ ಅಧಿಕಾರಿಗಳು ನಿರಂಜನ್ ಹೀರಾನಂದಾನಿ ಮತ್ತು ದರ್ಶನ್ ಹಿರಾನಂದಾನಿ ಅವರ ಮುಂಬೈನ ಆವರಣದಲ್ಲಿ ಮತ್ತು ಇತರ ಕೆಲವು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಇದಾದ ಬಳಿಕ ಈ ಪ್ರಕರಣದಲ್ಲಿ ಹೇಳಿಕೆ ದಾಖಲಿಸಿಕೊಳ್ಳಲು ಇಡಿ ಅಧಿಕಾರಿಗಳ ಮುಂದೆ ಹಾಜರಾಗುವಂತೆ ಇಬ್ಬರಿಗೂ ಸಮನ್ಸ್ ನೀಡಲಾಗಿತ್ತು.

ಮಹಾರಾಷ್ಟ್ರ ಹಾಗೂ ತಮಿಳುನಾಡಿನಲ್ಲಿ ರಿಯಲ್​ ಎಸ್ಟೇಟ್​ ಯೋಜನೆಗಳನ್ನು ಹೊಂದಿರುವ ಹಿರಾನಂದನಿ ಸಮೂಹದ ಕಂಪನಿಗಳು ಎಫ್​ಡಿಐ 400 ಕೋಟಿ ರೂ. ಸರ್ಕಾರದ ಮಾರ್ಗಸೂಚಿ ಪ್ರಕಾರ ಈ ಮೊತ್ತ ಬಳಕೆಯಾಗಿಲ್ಲ ಎಂದು ಆರೋಪಿಸಲಾಗಿದೆ. ಎಫ್​ಡಿಐ ಪಡೆದ ಕಂಪನಿಯೊಂದು ಬ್ಯಾಂಕ್​ಗಳಿಂದ ಪಡೆದ ಸಾಲವನ್ನು ಮರುಪಾವತಿ ಮಾಡದೆ ಎನ್​ಪಿಎ ಎಂದು ಘೋಷಿಸಿತು.

ಮತ್ತಷ್ಟು ಓದಿ: ಹೀರಾನಂದಾನಿ ಗ್ರೂಪ್​ನ ನಾಲ್ಕು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದಿಂದ ದಾಳಿ; ಫೆಮಾ ನಿಯಮ ಉಲ್ಲಂಘನೆ ಆರೋಪ; ದಾಖಲೆಗಳ ಪರಿಶೀಲನೆ

ಡಿಆರ್​ಟಿ(ಸಾಲ ವಸೂಲಾತಿ ಮಂಡಳಿ)ಯ ವಿಚಾರಣೆ ಸಮಯದಲ್ಲಿ, ಅಪೂರ್ಣ ಯೋಜನೆಯನ್ನು ಹೀರಾನಂದಾನಿ ಗ್ರೂಪ್​ನ ಮತ್ತೊಂದು ಘಟಕವು ವಹಿಸಿಕೊಂಡಿದೆ ಎಂದು ತಿಳಿದುಬಂದಿದೆ. ಮಾರ್ಚ್​ 2022ರಲ್ಲಿ ಆದಾಯ ತೆರಿಗೆ ಇಲಾಖೆಯು ಮುಂಬೈ, ಬೆಂಗಳೂರು ಮತ್ತು ಚೆನ್ನೈ ಮೂರು ನಗರಗಳಲ್ಲಿ ಇರುವ ಹೀರಾನಂದಾನಿ ಗ್ರೂಪ್​ನ ಸುಮಾರು 25 ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಶೋಧದ ವೇಳೆ ಆದಾಯ ತೆರಿಗೆ ಅಧಿಕಾರಿಗಳು ಹಿರಾನಂದನಿ ಗ್ರೂಪ್​ನ ದಾಖಲೆ, ಹಣಕಾಸು ಇ-ದಾಖಲೆಗಳು ಮತ್ತು ಮಾರಾಟ ವಹಿವಾಟನ್ನು ಪರಿಶೀಲಿಸಿದ್ದರು.

ವಿಚಾರಣೆ ಮುಗಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಿರಂಜನ್, ತನಿಖೆಗೆ ಅಧಿಕಾರಿಗಳಿಗೆ ಸಹಕಾರ ನೀಡುವುದಾಗಿ ತಿಳಿಸಿದರು. 16 ವರ್ಷಗಳ ಹಿಂದೆಯೇ ಫೆಮಾ ಉಲ್ಲಂಘನೆಯ ಆರೋಪ ಮಾಡಲಾಗಿತ್ತು ಎಂದು ಹಿರಾನಂದಾನಿ ಹೇಳಿದ್ದಾರೆ.

ಈವರೆಗೆ 42 ಅಥವಾ 43 ಬಾರಿ ವಿಚಾರಣೆ ನಡೆಸಲಾಗಿದೆ. ಇಂತಹ ವಿಚಾರ ಪ್ರಸ್ತಾಪವಾದಾಗಲೆಲ್ಲ ಆ ಸಮಸ್ಯೆಯ ಪರಿಹರಿಸುವುದು ತನ್ನ ಕರ್ತವ್ಯವಾಗಿರುವುದರಿಂದ ಸಹಕರಿಸಲು ಸಂತೋಷಪಡುತ್ತೇನೆ ಎಂದರು. ಆದ್ದರಿಂದ, ಉತ್ತರಿಸಲು ನಮಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ.

ಕೆಲವು ವಿದೇಶಿ ವಹಿವಾಟುಗಳ ಹೊರತಾಗಿ, ಏಜೆನ್ಸಿಯುಹೀರಾನಂದಾನಿ ಗ್ರೂಪ್‌ನ ಪ್ರವರ್ತಕರೊಂದಿಗೆ ಸಂಬಂಧ ಹೊಂದಿರುವ ಬ್ರಿಟಿಷ್ ವರ್ಜಿನ್ ಐಲ್ಯಾಂಡ್ಸ್ ಮೂಲದ ಟ್ರಸ್ಟ್‌ನ ಫಲಾನುಭವಿಗಳ ಬಗ್ಗೆಯೂ ತನಿಖೆ ನಡೆಸುತ್ತಿದೆ ಎಂದು ವರದಿಯಾಗಿದೆ. ಈ FEMA ತನಿಖೆಯಲ್ಲಿ ED ಯೊಂದಿಗೆ ಸಹಕರಿಸುವುದಾಗಿ ಗ್ರೂಪ್​ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ