AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಿತ ‘ಕೊವ್ಯಾಕ್ಸಿನ್​’ ಲಸಿಕೆ ಸ್ವೀಕರಿಸಿದ ಪತ್ರಕರ್ತೆ.. ನೀವೂ ಲಸಿಕೆ ಸ್ವೀಕರಿಸಿ ಎಂದು ಜನಸಾಮಾನ್ಯರಿಗೆ ಕರೆ

ಭಾರತದಲ್ಲಿ ಲಸಿಕೆ ಪಡೆದ ಮೊದಲ ಪತ್ರಕರ್ತೆ ಎಂಬ ಹೆಗ್ಗಳಿಕೆಗೆ ಭಾಜನರಾಗಿರುವ ಪೂಜಾ ಮಕ್ಕರ್​ ಕೊರೊನಾ ಲಸಿಕೆ ಪಡೆದ ನಂತರ ಯಾವುದೇ ಸಮಸ್ಯೆಯಾಗಿಲ್ಲ. ವದಂತಿಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ವಿವಾದಿತ ‘ಕೊವ್ಯಾಕ್ಸಿನ್​’ ಲಸಿಕೆ ಸ್ವೀಕರಿಸಿದ ಪತ್ರಕರ್ತೆ.. ನೀವೂ ಲಸಿಕೆ ಸ್ವೀಕರಿಸಿ ಎಂದು ಜನಸಾಮಾನ್ಯರಿಗೆ ಕರೆ
ಕೊವ್ಯಾಕ್ಸಿನ್​ ಸ್ವೀಕರಿಸಿದ ಪೂಜಾ ಮಕ್ಕರ್
Skanda
| Edited By: |

Updated on: Jan 05, 2021 | 3:39 PM

Share

ದೆಹಲಿ: ಭಾರತದಲ್ಲಿ ಕೊರೊನಾ ಲಸಿಕೆ ಕುರಿತು ವಿವಾದಗಳು ಎದ್ದಿರುವ ಬೆನ್ನಲ್ಲೇ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತೆಯೊಬ್ಬರು ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದಾರೆ. ಭಾರತದಲ್ಲಿ ಲಸಿಕೆ ಪಡೆದ ಮೊದಲ ಪತ್ರಕರ್ತೆ ಎಂಬ ಹೆಗ್ಗಳಿಕೆಗೆ ಭಾಜನರಾಗಿರುವ ಪೂಜಾ ಮಕ್ಕರ್​ ಕೊರೊನಾ ಲಸಿಕೆ ಪಡೆದ ನಂತರ ಯಾವುದೇ ಸಮಸ್ಯೆಯಾಗಿಲ್ಲ. ವದಂತಿಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ಸಿಗುತ್ತಿರುವಂತೆಯೇ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆದರೆ, ಅದೆಲ್ಲವಕ್ಕೂ ಲಸಿಕೆ ಪಡೆಯುವ ಮೂಲಕ ಉತ್ತರ ನೀಡಿರುವ ಪೂಜಾ ಮಕ್ಕರ್, ಲಸಿಕೆ ತೆಗೆದುಕೊಂಡು 20 ಗಂಟೆಗಳಾದರೂ ಸಮಸ್ಯೆ ಉಂಟಾಗಿಲ್ಲ. ನಾನು ಸಂಪೂರ್ಣ ಕ್ಷೇಮವಾಗಿದ್ದೇನೆ. ಲಸಿಕೆ ಹಾಗೂ ಸರ್ಕಾರದ ಮೇಲೆ ಭರವಸೆ ಇಟ್ಟು ಮುಂದೆ ಬನ್ನಿ ಎಂದು ಕರೆ ನಿಡಿದ್ದಾರೆ.

ದೆಹಲಿಯ AIIMS ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆಯ ವೇಳೆಗೆ ಕೊರೊನಾ ಲಸಿಕೆ ಸ್ವೀಕರಿಸಿದ್ದ ಪೂಜಾ ಮಕ್ಕರ್ ಕೊವಿಡ್​ ಆರಂಭವಾದಾಗಿನಿಂದ ತನ್ನ ಸುದ್ದಿ ವಾಹಿನಿಗಾಗಿ ಕೊರೊನಾ ವೈರಾಣು ಕುರಿತು ನಿರಂತರ ವರದಿ ಮಾಡಿದ್ದರು. ಇದೀಗ ಹತ್ತು ಹಲವು ವದಂತಿಗಳ ನಡುವೆಯೂ ಕೊವ್ಯಾಕ್ಸಿನ್ ಲಸಿಕೆ ಸ್ವೀಕರಿಸಿರುವ ಪೂಜಾ, ಲಸಿಕೆ ಕುರಿತು ಸಂದೇಹ ಬೇಡ ಎಂದಿದ್ದಾರೆ.

ವುಹಾನ್​ನಿಂದ ಕೊರೊನಾ ಸ್ಥಿತಿಗತಿ ವರದಿ ಮಾಡಿದ್ದ ಚೀನಾ ಪತ್ರಕರ್ತೆಗೆ 4 ವರ್ಷ ಜೈಲು ಶಿಕ್ಷೆ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ