AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಿತ ‘ಕೊವ್ಯಾಕ್ಸಿನ್​’ ಲಸಿಕೆ ಸ್ವೀಕರಿಸಿದ ಪತ್ರಕರ್ತೆ.. ನೀವೂ ಲಸಿಕೆ ಸ್ವೀಕರಿಸಿ ಎಂದು ಜನಸಾಮಾನ್ಯರಿಗೆ ಕರೆ

ಭಾರತದಲ್ಲಿ ಲಸಿಕೆ ಪಡೆದ ಮೊದಲ ಪತ್ರಕರ್ತೆ ಎಂಬ ಹೆಗ್ಗಳಿಕೆಗೆ ಭಾಜನರಾಗಿರುವ ಪೂಜಾ ಮಕ್ಕರ್​ ಕೊರೊನಾ ಲಸಿಕೆ ಪಡೆದ ನಂತರ ಯಾವುದೇ ಸಮಸ್ಯೆಯಾಗಿಲ್ಲ. ವದಂತಿಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ವಿವಾದಿತ ‘ಕೊವ್ಯಾಕ್ಸಿನ್​’ ಲಸಿಕೆ ಸ್ವೀಕರಿಸಿದ ಪತ್ರಕರ್ತೆ.. ನೀವೂ ಲಸಿಕೆ ಸ್ವೀಕರಿಸಿ ಎಂದು ಜನಸಾಮಾನ್ಯರಿಗೆ ಕರೆ
ಕೊವ್ಯಾಕ್ಸಿನ್​ ಸ್ವೀಕರಿಸಿದ ಪೂಜಾ ಮಕ್ಕರ್
Skanda
| Edited By: |

Updated on: Jan 05, 2021 | 3:39 PM

Share

ದೆಹಲಿ: ಭಾರತದಲ್ಲಿ ಕೊರೊನಾ ಲಸಿಕೆ ಕುರಿತು ವಿವಾದಗಳು ಎದ್ದಿರುವ ಬೆನ್ನಲ್ಲೇ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತೆಯೊಬ್ಬರು ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದಾರೆ. ಭಾರತದಲ್ಲಿ ಲಸಿಕೆ ಪಡೆದ ಮೊದಲ ಪತ್ರಕರ್ತೆ ಎಂಬ ಹೆಗ್ಗಳಿಕೆಗೆ ಭಾಜನರಾಗಿರುವ ಪೂಜಾ ಮಕ್ಕರ್​ ಕೊರೊನಾ ಲಸಿಕೆ ಪಡೆದ ನಂತರ ಯಾವುದೇ ಸಮಸ್ಯೆಯಾಗಿಲ್ಲ. ವದಂತಿಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ಸಿಗುತ್ತಿರುವಂತೆಯೇ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆದರೆ, ಅದೆಲ್ಲವಕ್ಕೂ ಲಸಿಕೆ ಪಡೆಯುವ ಮೂಲಕ ಉತ್ತರ ನೀಡಿರುವ ಪೂಜಾ ಮಕ್ಕರ್, ಲಸಿಕೆ ತೆಗೆದುಕೊಂಡು 20 ಗಂಟೆಗಳಾದರೂ ಸಮಸ್ಯೆ ಉಂಟಾಗಿಲ್ಲ. ನಾನು ಸಂಪೂರ್ಣ ಕ್ಷೇಮವಾಗಿದ್ದೇನೆ. ಲಸಿಕೆ ಹಾಗೂ ಸರ್ಕಾರದ ಮೇಲೆ ಭರವಸೆ ಇಟ್ಟು ಮುಂದೆ ಬನ್ನಿ ಎಂದು ಕರೆ ನಿಡಿದ್ದಾರೆ.

ದೆಹಲಿಯ AIIMS ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆಯ ವೇಳೆಗೆ ಕೊರೊನಾ ಲಸಿಕೆ ಸ್ವೀಕರಿಸಿದ್ದ ಪೂಜಾ ಮಕ್ಕರ್ ಕೊವಿಡ್​ ಆರಂಭವಾದಾಗಿನಿಂದ ತನ್ನ ಸುದ್ದಿ ವಾಹಿನಿಗಾಗಿ ಕೊರೊನಾ ವೈರಾಣು ಕುರಿತು ನಿರಂತರ ವರದಿ ಮಾಡಿದ್ದರು. ಇದೀಗ ಹತ್ತು ಹಲವು ವದಂತಿಗಳ ನಡುವೆಯೂ ಕೊವ್ಯಾಕ್ಸಿನ್ ಲಸಿಕೆ ಸ್ವೀಕರಿಸಿರುವ ಪೂಜಾ, ಲಸಿಕೆ ಕುರಿತು ಸಂದೇಹ ಬೇಡ ಎಂದಿದ್ದಾರೆ.

ವುಹಾನ್​ನಿಂದ ಕೊರೊನಾ ಸ್ಥಿತಿಗತಿ ವರದಿ ಮಾಡಿದ್ದ ಚೀನಾ ಪತ್ರಕರ್ತೆಗೆ 4 ವರ್ಷ ಜೈಲು ಶಿಕ್ಷೆ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್