AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha: ಒಡಿಶಾದ ಜಾಜ್‌ಪುರ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲಿನಡಿ ಸಿಲುಕಿ 6 ಮಂದಿ ಕಾರ್ಮಿಕರು ಸಾವು

ಒಡಿಶಾದ ಜಾಜ್‌ಪುರ ರೈಲು ನಿಲ್ದಾಣದ ಬಳಿ ಬುಧವಾರ ಗೂಡ್ಸ್ ರೈಲಿನಡಿ ಸಿಲುಕಿ 6 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಒಬ್ಬ ಕಾರ್ಮಿಕ ಗಾಯಗೊಂಡಿದ್ದಾನೆ.

Odisha: ಒಡಿಶಾದ ಜಾಜ್‌ಪುರ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲಿನಡಿ ಸಿಲುಕಿ 6 ಮಂದಿ ಕಾರ್ಮಿಕರು ಸಾವು
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jun 07, 2023 | 9:27 PM

Share

ಭುವನೇಶ್ವರ: ಒಡಿಶಾದ ಬಾಲಸೋರ್​ ಭೀಕರ ರೈಲು ಅಪಘಾತ(Odisha Train Accident) ಕಹಿ ನೆನೆಪು ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಒಡಿಶಾದ ಜಾಜ್‌ಪುರ ರೈಲು ನಿಲ್ದಾಣದ ಬಳಿ ಬುಧವಾರ ಗೂಡ್ಸ್ ರೈಲಿನಡಿ ಸಿಲುಕಿ 6 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಒಬ್ಬ ಕಾರ್ಮಿಕ ಗಾಯಗೊಂಡಿದ್ದಾನೆ. ಈ ಕಾರ್ಮಿಕರು ಗೂಡ್ಸ್ ರೈಲಿನ ಕೆಳಗೆ ವಿಶ್ರಾಂತಿ ಪಡೆಯುತ್ತಿದ್ದರು. ಅಷ್ಟರಲ್ಲಿ ರೈಲು ಚಲಿಸಿದ್ದು ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಒಡಿಶಾದ ಬಾಲಸೋರ್‌ನಲ್ಲಿ ಸರಣಿ ರೈಲು ಅಪಘಾತ ಸಂಭವಿಸಿದ 5 ದಿನಗಳ ನಂತರ ಈ ಘಟನೆ ನಡೆದಿದೆ.

ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಈ ಕಾರ್ಮಿಕರು ಸಮೀಪದಲ್ಲಿ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಭಾರೀ ಮಳೆ ಪ್ರಾರಂಭವಾಯಿತು. ಮಳೆಯಿಂದ ರಕ್ಷಣೆ ಪಡೆಯಲು, ಗೂಡ್ಸ್ ರೈಲಿನ ಬಿಡ್ ಅಡಿಯಲ್ಲಿ ಆಶ್ರಯ ಪಡೆಯಲು ನಿರ್ಧರಿಸಿದರು. ಒಬ್ಬೊಬ್ಬರಾಗಿ ಎಲ್ಲ ಕಾರ್ಮಿಕರು ಗೂಡ್ಸ್ ರೈಲಿನ ಬೋಗಿಯ ಕೆಳಗೆ ಹೋದರು. ಕೂಲಿ ಕಾರ್ಮಿಕರು ರೈಲಿನ ಬೋಗಿಯ ಕೆಳಗೆ ಕುಳಿತಿದ್ದ ಅದೇ ಸಮಯಕ್ಕೆ ರೈಲು ಮತ್ತೆ ಸಂಚರಿಸಲು ಆರಂಭಿಸಿತು. ಇದರಿಂದ 6 ಜನ ಕೂಲಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಈ ವಿಚಾರಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇನ್ನಷ್ಟೇ ದೊರೆಯಬೇಕಿದೆ.

ಒಡಿಶಾದ ಬಾಲಸೋರ್‌ನಲ್ಲಿ ಕಳೆದ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್, ಗೂಡ್ಸ್ ರೈಲು ಮತ್ತು ಯಶವಂತಪುರ-ಹೌರಾ ರೈಲು ಡಿಕ್ಕಿ ಹೊಡೆದ ಪರಿಣಾಮ 288 ಜನರು ಸಾವನ್ನಪ್ಪಿದ್ದರು. ಈ ಭೀಕರ ಅಪಘಾತದಲ್ಲಿ 1 ಸಾವಿರಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: ಒಡಿಶಾ ರೈಲು ಅಪಘಾತದಲ್ಲಿ ಸಾವಿಗೀಡಾದವರ ಮೃತದೇಹ ಹೆಚ್ಚು ಕಾಲ ಇರಿಸಲು ಸಾಧ್ಯವಿಲ್ಲ: ವೈದ್ಯರು

ರೈಲು ದುರಂತದ ಐದು ದಿನಗಳ ನಂತರ ಕೋರಮಂಡಲ್ ಎಕ್ಸ್‌ಪ್ರೆಸ್ ತನ್ನ ಪ್ರಯಾಣವನ್ನು ಬುಧವಾರ ಪುನರಾರಂಭಿಸಿದೆ. ರೈಲು ಬುಧವಾರ ಮಧ್ಯಾಹ್ನ 3:30 ಕ್ಕೆ ಶಾಲಿಮಾರ್‌ನಿಂದ ಚೆನ್ನೈಗೆ ಪ್ರಯಾಣ ಬೆಳೆಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ