ಲಾಕ್‌ಡೌನ್ 3 ಅನಿವಾರ್ಯತೆ? ವಾರಾಂತ್ಯ ದೇಶವನ್ನುದ್ದೇಶಿಸಿ ಮೋದಿ ಭಾಷಣ ಸಾಧ್ಯತೆ!

ಮೇ 3ರಂದು ದೇಶದಲ್ಲಿ ಲಾಕ್‌ಡೌನ್ 2.0 ಅಂತ್ಯವಾಗುವ ಹಿನ್ನೆಲೆ ವಾರಾಂತ್ಯದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುವ ಸಾಧ್ಯತೆಯಿದೆ. ಕೊರೊನಾ ವಿರುದ್ಧ ಸಮರ ಸಾರಿರುವ ಸಂದರ್ಭದಲ್ಲಿ ದೇಶವನ್ನು ಉದ್ದೇಶಿಸಿ ಮೋದಿ 4ನೆಯ ಬಾರಿಗೆ ಭಾಷಣ‌ ಮಾಡಲಿದ್ದಾರೆ. ಹಲವಾರು ಜಿಲ್ಲೆಗಳಲ್ಲಿ ಲಾಕ್‌ಡೌನ್ 2.0 ಅಂತ್ಯಗೊಳಿಸುವ ಘೋಷನೆ ಮಾಡುವ ಸಾಧ್ಯತೆಯಿದೆ. ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ಅವಧಿ ವಿಸ್ತರಿಸುವ ಅನಿವಾರ್ಯತೆಯನ್ನು ಅವರು ಮನದಟ್ಟುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ, ಸಿಎಂಗಳ ಜೊತೆಗಿನ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೇಲೆ […]

ಲಾಕ್‌ಡೌನ್ 3 ಅನಿವಾರ್ಯತೆ? ವಾರಾಂತ್ಯ ದೇಶವನ್ನುದ್ದೇಶಿಸಿ ಮೋದಿ ಭಾಷಣ ಸಾಧ್ಯತೆ!
ಸಾಧು ಶ್ರೀನಾಥ್​

Updated on: Apr 27, 2020 | 10:45 AM

ಮೇ 3ರಂದು ದೇಶದಲ್ಲಿ ಲಾಕ್‌ಡೌನ್ 2.0 ಅಂತ್ಯವಾಗುವ ಹಿನ್ನೆಲೆ ವಾರಾಂತ್ಯದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುವ ಸಾಧ್ಯತೆಯಿದೆ.

ಕೊರೊನಾ ವಿರುದ್ಧ ಸಮರ ಸಾರಿರುವ ಸಂದರ್ಭದಲ್ಲಿ ದೇಶವನ್ನು ಉದ್ದೇಶಿಸಿ ಮೋದಿ 4ನೆಯ ಬಾರಿಗೆ ಭಾಷಣ‌ ಮಾಡಲಿದ್ದಾರೆ. ಹಲವಾರು ಜಿಲ್ಲೆಗಳಲ್ಲಿ ಲಾಕ್‌ಡೌನ್ 2.0 ಅಂತ್ಯಗೊಳಿಸುವ ಘೋಷನೆ ಮಾಡುವ ಸಾಧ್ಯತೆಯಿದೆ. ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ಅವಧಿ ವಿಸ್ತರಿಸುವ ಅನಿವಾರ್ಯತೆಯನ್ನು ಅವರು ಮನದಟ್ಟುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇದೇ ವೇಳೆ, ಸಿಎಂಗಳ ಜೊತೆಗಿನ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಕೆಲ ರಾಜ್ಯಗಳು ಮನವಿ ಮಾಡಿರೋದನ್ನು ನೋಡಿದ್ರೆ ಲಾಕ್​ಡೌನ್ ಎರಡು ವಾರಗಳ ಮಟ್ಟಿಗಾದ್ರೂ ಮುಂದುವರಿಸಿದ್ರೂ ಅಚ್ಚರಿ ಇಲ್ಲ.

ಎರಡನೇ ಹಂತದ ಲಾಕ್​ಡೌನ್ ಜಾರಿಯಾಗಿ ಇಂದಿಗೆ 11 ದಿನಗಳಾಗಿವೆ. ಆದ್ರೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ದೇಶಾದ್ಯಂತ 25 ಸಾವಿರಕ್ಕೂ ಅಧಿಕ ಮಂದಿಗೆ ಮಹಾಮಾರಿ ಅಟ್ಯಾಕ್ ಮಾಡಿದೆ. 826 ಮಂದಿಯನ್ನು ಡ್ರ್ಯಾಗನ್ ವೈರಸ್ ಬಲಿ ಪಡೆದಿದೆ. ಹೆಮ್ಮಾರಿ ಕೊರೊನಾ ತನ್ನ ಬಾಹುವನ್ನು ಕ್ಷಣಕ್ಷಣಕ್ಕೂ ಚಾಚುತ್ತಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us