AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿರುವ ಹುದ್ದೆಗಳನ್ನು ಭರ್ತಿ ಮಾಡಿ, ಬಂಡವಾಳ ವೆಚ್ಚಗಳ ಮೇಲ್ವಿಚಾರಣೆಗೆ ವೇಗ ನೀಡಿ: ಕೇಂದ್ರ ಖಡಕ್ ಸೂಚನೆ

ಪ್ರತಿ ಸಚಿವಾಲಯವು ನಿಯಮಿತವಾಗಿ ಬಂಡವಾಳ ವೆಚ್ಚವನ್ನು ಮೇಲ್ವಿಚಾರಣೆ ಮಾಡಬೇಕು, ಬಂಡವಾಳ ವೆಚ್ಚದ ವೇಗವನ್ನು ಹೆಚ್ಚಿಸಲು ಮತ್ತು ಬಳಕೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಬಜೆಟ್ ಹಂಚಿಕೆಯನ್ನು ಮಾಡುವಂತೆ ಹೇಳಿದೆ.

ಖಾಲಿರುವ ಹುದ್ದೆಗಳನ್ನು ಭರ್ತಿ ಮಾಡಿ, ಬಂಡವಾಳ ವೆಚ್ಚಗಳ ಮೇಲ್ವಿಚಾರಣೆಗೆ ವೇಗ ನೀಡಿ: ಕೇಂದ್ರ ಖಡಕ್ ಸೂಚನೆ
Narendra Modi
TV9 Web
| Edited By: |

Updated on: Oct 12, 2022 | 6:30 PM

Share

ದೆಹಲಿ: ಸಚಿವಾಲಯಗಳಿಗೆ ಮತ್ತು ಇಲಾಖೆಗಳಿಗೆ ನೀಡಲಾದ ಬಜೆಟ್ ಅನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ನೋಡಿಕೊಳ್ಳಲು ಕೇಂದ್ರದ ಮೋದಿ ಸರ್ಕಾರವು ಆಧುನೀಕರಣ ಮತ್ತು ಹೊಸ ಉಪಕರಣಗಳನ್ನು ಖರೀದಿಸಲು ಬಂಡವಾಳ ವೆಚ್ಚವನ್ನು ಸರಿಯಾಗಿ ಬಳಸುವುದನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳಿಗೆ ಸಭೆಯನ್ನು ನಡೆಸಿ, ಕ್ಯಾಬಿನೆಟ್ ಸೆಕ್ರೆಟರಿಯೇಟ್ ಪತ್ರವನ್ನು ಬಿಡುಗಡೆ ಮಾಡಿದೆ. ಪ್ರತಿ ಸಚಿವಾಲಯವು ನಿಯಮಿತವಾಗಿ ಬಂಡವಾಳ ವೆಚ್ಚವನ್ನು ಮೇಲ್ವಿಚಾರಣೆ ಮಾಡಬೇಕು, ಬಂಡವಾಳ ವೆಚ್ಚದ ವೇಗವನ್ನು ಹೆಚ್ಚಿಸಲು ಮತ್ತು ಬಳಕೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಬಜೆಟ್ ಹಂಚಿಕೆಯನ್ನು ಮಾಡುವಂತೆ ಹೇಳಿದೆ.

ಸೆಪ್ಟೆಂಬರ್ 7ರಂದು ನಡೆದ ಸಚಿವ ಸಂಪುಟ ಸಭೆಯ ಫಲಿತಾಂಶದ ಆಧಾರದ ಮೇಲೆ ಸಂಪುಟ ಕಾರ್ಯದರ್ಶಿ ಸೂಚನೆಗಳ ದೀರ್ಘ ಪಟ್ಟಿಯನ್ನು ನೀಡಿದ್ದಾರೆ. ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗುವಾಬಾ ಅವರು ಸರ್ಕಾರಿ ಇಲಾಖೆಗಳಿಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆದ್ಯತೆ ನೀಡುವಂತೆ ಕೇಳಿಕೊಂಡಿದ್ದಾರೆ.

ಸಚಿವಾಲಯಗಳು ನೇರ ನೇಮಕಾತಿ ಮತ್ತು ಬಡ್ತಿಗಳು ಮತ್ತು ನಿವೃತ್ತಿಯ ಪರಿಣಾಮವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ನೇಮಕಾತಿಗಳಿಗಾಗಿ ದಿನಾಂಕವನ್ನು ಅಂತಿಮಗೊಳಿಸುತ್ತವೆ. ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಮಯಾವಧಿಯನ್ನು ಮತ್ತಷ್ಟು ಸಂಕುಚಿತಗೊಳಿಸಲು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯೊಂದಿಗೆ ಸಮಾಲೋಚಿಸಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಚಿವಾಲಯಗಳು ಪತ್ರದಲ್ಲಿ ತಿಳಿಸಿವೆ.

ಇದನ್ನು ಓದಿ: ನೋಟು ಅಮಾನ್ಯೀಕರಣ ಬಗ್ಗೆ ಪರಿಶೀಲಿಸುವುದಾಗಿ ಹೇಳಿದ ಸುಪ್ರೀಂಕೋರ್ಟ್; ನವೆಂಬರ್ 9ಕ್ಕೆ ವಿಚಾರಣೆ

ಜಿಇಎಂ ಪೋರ್ಟಲ್ ಮೂಲಕ ಸರಕು ಮತ್ತು ಸೇವೆಗಳ ಸಂಗ್ರಹಣೆಯಲ್ಲಿ ಶೇಕಡಾ 100 ರಷ್ಟು ಮಾರ್ಕ್ ಅನ್ನು ಸಾಧಿಸಲು ಕೆಲಸ ಮಾಡಲು ಇಲಾಖೆಗಳನ್ನು ಸರ್ಕಾರ ಕೇಳಿದೆ. ಲೆಕ್ಕಪರಿಶೋಧಕರ ವರದಿಗಳನ್ನು ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸಲು ಮತ್ತು ತಮ್ಮ ಕೆಲಸದಲ್ಲಿ ನಿರಂತರ ಸುಧಾರಣೆಗಳನ್ನು ಮಾಡುವಂತೆ ಕ್ಯಾಬಿನೆಟ್ ಕಾರ್ಯದರ್ಶಿ ಸಚಿವಾಲಯಗಳನ್ನು ಕೇಳಿದರು.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ