AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮಾ ನಾನು ಸಾಯ್ತೀನಿ, ಇಲ್ದಿದ್ರೆ ಅವ್ರೇ ಸಾಯಿಸ್ತಾರೆ, ತಾಯಿಗೆ ಮೆಸೇಜ್ ಕಳುಹಿಸಿ ಗರ್ಭಿಣಿ ಆತ್ಮಹತ್ಯೆ

ನಿರಂತರ ಕಿರುಕುಳದಿಂದ ಬೇಸತ್ತು ಗರ್ಭಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಆತ್ಮಹತ್ಯೆಗೆ ಪ್ರಚೋದನೆ ಮತ್ತು ಇತರೆ ಸಂಬಂಧಿತ ಸೆಕ್ಷನ್​​ಗಳಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತ್ರಿಶೂರ್​​ನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ದಂಪತಿಗೆ ಒಬ್ಬ ಮಗನಿದ್ದಾನೆ.

ಅಮ್ಮಾ ನಾನು ಸಾಯ್ತೀನಿ, ಇಲ್ದಿದ್ರೆ ಅವ್ರೇ ಸಾಯಿಸ್ತಾರೆ, ತಾಯಿಗೆ ಮೆಸೇಜ್ ಕಳುಹಿಸಿ ಗರ್ಭಿಣಿ ಆತ್ಮಹತ್ಯೆ
ಮಹಿಳೆ ಸಾವು Image Credit source: India Today
ನಯನಾ ರಾಜೀವ್
|

Updated on: Jul 31, 2025 | 2:27 PM

Share

ತ್ರಿಶೂರ್, ಜುಲೈ 31: ಅಮ್ಮಾ ನಾನು ಸಾಯ್ತೀನಿ, ಇಲ್ಲದಿದ್ದರೆ ಅವರೇ ನನ್ನನ್ನು ಸಾಯಿಸುತ್ತಾರೆ ಎಂದು ತಾಯಿಗೆ ಮೆಸೇಜ್ ಕಳುಹಿಸಿ ಗರ್ಭಿಣಿ(Pregnant) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತ್ರಿಶೂರ್​​ನಲ್ಲಿ ನಡೆದಿದೆ.ತ್ರಿಶೂರ್​ ಜಿಲ್ಲೆಯ ವೆಲ್ಲಂಗುಲರ್​​ನಲ್ಲಿರುವ ತನ್ನ ಪತಿಯ ಮನೆಯಲ್ಲಿ ಫಸೀಲಾ ಎಂಬ  ಮಹಿಳೆ ನೇಣಿಗೆ ಶರಣಾಗಿದ್ದಾರೆ.

ಜುಲೈ 29ರಂದು ಘಟನೆ ನಡೆದಿದೆ. ಇರಿಂಜಲಕುಡ ಪೊಲೀಸರು ಆಕೆಯ ಪತಿ ನೌಫಲ್ ಮತ್ತು ಅತ್ತೆ ರಮ್ಲಾ ಅವರನ್ನು ಬಂಧಿಸಿದ್ದು, ಇಬ್ಬರನ್ನೂ ಬುಧವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಿತ್ಯವೂ ಅತ್ತೆ ಮನೆಯಲ್ಲಿ ಮಹಿಳೆ ನರಕ ಅನುಭವಿಸುತ್ತಿದ್ದರು. ತಾಯಿಗೆ ಕಳುಹಿಸಿರುವ ಸಂದೇಶದಲ್ಲಿ ಅತ್ತೆ ನಿತ್ಯವೂ ತನ್ನ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಬರೆಸಿದ್ದರು.

ತನ್ನ ತಾಯಿಗೆ ಕಳುಹಿಸಿದ ಸಂದೇಶಗಳಲ್ಲಿ, ಫಸೀಲಾ ತಾನು ಎರಡನೇ ಬಾರಿಗೆ ಗರ್ಭಿಣಿಯಾಗಿದ್ದೇನೆ ಮತ್ತು ತನ್ನ ಪತಿ ತನ್ನ ಹೊಟ್ಟೆಗೆ ಹಲವು ಬಾರಿ ಒದ್ದಿದ್ದಾನೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ ನನ್ನ ಒಂದು ಕೈ ಮುರಿದಿದ್ದಾನೆ.ಕೊನೆಯ ಸಂದೇಶಗಳಲ್ಲಿ ಒಂದರಲ್ಲಿ, ಫಸೀಲಾ ತನ್ನ ತಾಯಿಗೆ ನಾನು ಸಾಯುತ್ತೇನೆ, ಇಲ್ಲದಿದ್ದರೆ ಅವರು ನನ್ನನ್ನು ಕೊಲ್ಲುತ್ತಾರೆ ಎಂದು ಬರೆದಿದ್ದಾರೆ.

ಮತ್ತಷ್ಟು ಓದಿ: ಪ್ರತ್ಯೇಕ ಘಟನೆ: ಸೆಂಟ್ರಲ್ ಇಂಟಲಿಜೆನ್ಸ್​​ ಸಿಬ್ಬಂದಿ ಆತ್ಮಹತ್ಯೆ, ಮಗನ ತಿಥಿ ದಿನವೇ ತಾಯಿ ನೇಣಿಗೆ ಶರಣು!

ಆತ್ಮಹತ್ಯೆಗೆ ಪ್ರಚೋದನೆ ಮತ್ತು ಇತರೆ ಸಂಬಂಧಿತ ಸೆಕ್ಷನ್​​ಗಳಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತ್ರಿಶೂರ್​​ನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ದಂಪತಿಗೆ ಒಬ್ಬ ಮಗನಿದ್ದಾನೆ.

ಕೇರಳದ ಮಹಿಳೆಯರ ಮೇಲೆ ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಿರುವ ನಡುವೆ, ಕೊಲ್ಲಂನ 29ವರ್ಷದ ಅಥುಲ್ಯಾ ಎಂಬ ಮಹಿಳೆ ಜುಲೈ 21ರಂದು ಯುನೈಟೆಡ್ ಅರಬ್ ಎಮಿರೇಟ್ಸ್​​ನ ಅಪಾರ್​ಟ್​ಮೆಂಟ್​​ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಆಕೆಯ ಕುಟುಂಬವು ಆಕೆಯ ಪತಿಯೇ ಕೊಲೆ ಮಾಡಿದ್ದಾನೆ ಇದು ಆತ್ಮಹತ್ಯೆಯಲ್ಲ ಎಂದು ಆರೋಪಿಸಿದೆ. ಕೊಲ್ಲಂ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಅವರ ಕುಟುಂಬದ ಪ್ರಕಾರ, 2014ರಲ್ಲಿ ಮದುವೆಯಾದಾಗಿನಿಂದ ಅಥುಲ್ಯಾ ವರದಕ್ಷಿಣೆ ಬೇಡಿಕೆ ಇಟ್ಟು ನಿತ್ಯ ದೈಹಿಕ ಮತ್ತು ಮಾನಸಿಕ ಕಿರುಕುಳವನ್ನು ಎದುರಿಸುತ್ತಿದ್ದರು.

ಮತ್ತೊಂದು ಪ್ರಕರಣದಲ್ಲಿ ಜುಲೈ 8ರಂದು ಶಾರ್ಜಾದಲ್ಲಿರುವ ತಮ್ಮ ಫ್ಲಾಟ್​ನಲ್ಲಿ 32 ವರ್ಷದ ವಿಪಂಚಿಕಾ ಮಣಿಯನ್ ಮತ್ತು ಅವರ ಒಂದೂವರೆ ವರ್ಷದ ಮಗಳು ಶವವಾಗಿ ಪತ್ತೆಯಾಗಿದ್ದರು. ವಿಪಂಚಿಕಾ ಬರೆದ ಆತ್ಮಹತ್ಯಾ ಪತ್ರದಲ್ಲಿ ವರ್ಷಗಳ ಕಾಲ ವರದಕ್ಷಿಣೆ ಕಿರುಕುಳ ಅನುಭವಿಸಿರುವುದಾಗಿ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?