AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಕುಶಲಕರ್ಮಿಯ ಆಸೆ ಈಡೇರಿತು, ಅಯೋಧ್ಯೆ ತಲುಪಿದ 400 ಕೆಜಿಯ ದೈತ್ಯ ಬೀಗ

ರಾಮ ಭಕ್ತರೊಬ್ಬರು ಬೃಹತ್​​​ ಆಕಾರದ ಬೀಗ​​​​ವೊಂದನ್ನು ಅಯೋಧ್ಯೆಗೆ ನೀಡಿದ್ದಾರೆ. ಇದಕ್ಕಾಗಿ ಎರಡು ವರ್ಷಗಳ ಕಾಲ ಇವರು ಶ್ರಮಿಸಿದ್ದಾರೆ ಎಂದು ಹೇಳಲಾಗಿದೆ. ಅಲಿಘರ್‌ನ ಕುಶಲಕರ್ಮಿ ಸತ್ಯ ಪ್ರಕಾಶ್ (67 ) ಅವರು ಅಯೋಧ್ಯೆಯ ದೇವಾಲಯಕ್ಕಾಗಿ 400 ಕೆಜಿಯ ದೈತ್ಯ ಬೀಗವನ್ನು ನೀಡಿದ್ದಾರೆ.

ಕೊನೆಗೂ ಕುಶಲಕರ್ಮಿಯ ಆಸೆ ಈಡೇರಿತು, ಅಯೋಧ್ಯೆ ತಲುಪಿದ 400 ಕೆಜಿಯ ದೈತ್ಯ ಬೀಗ
ಅಕ್ಷಯ್​ ಪಲ್ಲಮಜಲು​​
|

Updated on: Jan 20, 2024 | 10:59 AM

Share

ಮುಜಫರ್‌ನಗರ, ಜ.20: ಅಯೋಧ್ಯೆ (Ayodhya) ರಾಮಮಂದಿರ ಉದ್ಘಾಟನೆಗೆ ಇನ್ನು ಎರಡು ದಿನ ಮಾತ್ರ ಬಾಕಿದೆ. ಈಗಾಗಲೇ ರಾಮಭಕ್ತರಲ್ಲಿ ಸಂಭ್ರಮ ಮನೆ ಮಾಡಿದೆ. ರಾಮಮಂದಿರಕ್ಕೆ ಅನೇಕ ಭಕ್ತರು, ಹಲವು ಉಡುಗೊರೆಯನ್ನು ನೀಡುವ ಮೂಲಕ ರಾಮ ಭಕ್ತಿಯನ್ನು ತೋರಿಸಿದ್ದಾರೆ. ಇದೀಗ ಇಂತಹದೇ ಒಂದು ಕೊಡುಗೆಯನ್ನು ರಾಮಮಂದಿರಕ್ಕೆ ಭಕ್ತರೊಬ್ಬರು ನೀಡಿದ್ದಾರೆ. ಬೃಹತ್​​​ ಆಕಾರದ ಬೀಗ​​​​ವೊಂದನ್ನು ಅಯೋಧ್ಯೆಗೆ ನೀಡಿದ್ದಾರೆ. ಇದಕ್ಕಾಗಿ ಎರಡು ವರ್ಷಗಳ ಕಾಲ ಇವರು ಶ್ರಮಿಸಿದ್ದಾರೆ ಎಂದು ಹೇಳಲಾಗಿದೆ. ಅಲಿಘರ್‌ನ ಕುಶಲಕರ್ಮಿ ಸತ್ಯ ಪ್ರಕಾಶ್ (67 ) ಅವರು ಅಯೋಧ್ಯೆಯ ದೇವಾಲಯಕ್ಕಾಗಿ 400 ಕೆಜಿಯ ದೈತ್ಯ ಬೀಗವನ್ನು ನೀಡಿದ್ದಾರೆ. ಈ ಬೀಗಕ್ಕೆ ಕೊನೆಯ ಸ್ವರ್ಶ ನೀಡುವ ಮುನ್ನವೇ ಅವರು ಕೊನೆಯುಸಿರು ಎಳೆದಿದ್ದಾರೆ. ಇದೀಗ ಅವರ ಆಸೆಯಂತೆ 15 ಕೆಜಿ ತೂಕದ ಎರಡು ಕೀಗಳ ಜೊತೆಗೆ 400 ಕೆಜಿಯ ದೈತ್ಯ ಬೀಗವು ಅಯೋಧ್ಯೆ ತಲುಪಿದೆ.

ಈ ಬೀಗ 10 ಅಡಿ ಎತ್ತರ, 4.6 ಅಡಿ ಅಗಲ ಮತ್ತು 9.5 ಇಂಚು ದಪ್ಪದ ಸುಮಾರು 2 ಲಕ್ಷ ರೂ, ಖರ್ಚು ಮಾಡಲಾಗಿದೆ. ಕೊನೆಗೂ ನನ್ನ ಪತಿಯ ಆಸೆಯಂತೆ ಅಯೋಧ್ಯೆ ರಾಮಮಂದಿರಕ್ಕೆ ಈ ಕೊಡುಗೆ ತಲುಪಿದೆ ಎಂಬ ಸಂತೋಷ ನಮಗಿದೆ ಎಂದು ಸತ್ಯ ಪ್ರಕಾಶ್ ಅವರು ಪತ್ನಿ ರುಕ್ಮಣಿ ಹೇಳಿದ್ದಾರೆ.

ಸತ್ಯ ಪ್ರಕಾಶ್ ಅವರ ಮನೆಯಿಂದ ಈ ದೈತ್ಯ ಬೀಗ​ವನ್ನು ಕ್ರೇನ್​​ ಸಹಾಯದಿಂದ ಲಾರಿಗೆ ತುಂಬಿ, ಶುಕ್ರವಾರ ಅಯೋಧ್ಯೆಗೆ ಈ ಬೀಗ ತಲುಪಿದೆ ಎಂದು ಹೇಳಿದ್ದಾರೆ. ಇನ್ನು ಸತ್ಯ ಪ್ರಕಾಶ್​​​​ ಅವರ ಪುತ್ರ ಮಹೇಶ್‌ಚಂದ್ ಅವರು ತನ್ನ ಕುಟುಂಬದ ಸಂಕಷ್ಟದ ಬಗ್ಗೆ ತಿಳಿದ ಹಿಂದೂ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಅನ್ನಪೂರ್ಣ ಭಾರತಿ ಅವರ ನಮಗೆ ಸಹಾಯ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ಬಾಬರ್ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಬದಲಾಯಿಸಿದ ಹಿಂದೂ ಕಾರ್ಯಕರ್ತರು

ಇನ್ನು ಈ ಬೀಗ ವಿಶ್ವದಲ್ಲೇ ಅತೀ ದೊಡ್ಡದಾದ ಬೀಗ ಎಂದು ಹೇಳಲಾಗಿದೆ. ಜತೆಗೆ ಸ್ವತಃ ಕೈಯಲ್ಲಿಯೇ ತಯಾರಿಸಿರುವ ಬೀಗ ಎಂದು ಹೇಳಲಾಗಿದೆ. ಇನ್ನು ಸತ್ಯ ಪ್ರಕಾಶ್​​​ ಅವರು ಕನಸು ಇಂದು ಪೂರ್ಣಗೊಂಡಿದೆ ಎಂದು ಹಿಂದೂ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಅನ್ನಪೂರ್ಣ ಭಾರತಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್