AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಕುಶಲಕರ್ಮಿಯ ಆಸೆ ಈಡೇರಿತು, ಅಯೋಧ್ಯೆ ತಲುಪಿದ 400 ಕೆಜಿಯ ದೈತ್ಯ ಬೀಗ

ರಾಮ ಭಕ್ತರೊಬ್ಬರು ಬೃಹತ್​​​ ಆಕಾರದ ಬೀಗ​​​​ವೊಂದನ್ನು ಅಯೋಧ್ಯೆಗೆ ನೀಡಿದ್ದಾರೆ. ಇದಕ್ಕಾಗಿ ಎರಡು ವರ್ಷಗಳ ಕಾಲ ಇವರು ಶ್ರಮಿಸಿದ್ದಾರೆ ಎಂದು ಹೇಳಲಾಗಿದೆ. ಅಲಿಘರ್‌ನ ಕುಶಲಕರ್ಮಿ ಸತ್ಯ ಪ್ರಕಾಶ್ (67 ) ಅವರು ಅಯೋಧ್ಯೆಯ ದೇವಾಲಯಕ್ಕಾಗಿ 400 ಕೆಜಿಯ ದೈತ್ಯ ಬೀಗವನ್ನು ನೀಡಿದ್ದಾರೆ.

ಕೊನೆಗೂ ಕುಶಲಕರ್ಮಿಯ ಆಸೆ ಈಡೇರಿತು, ಅಯೋಧ್ಯೆ ತಲುಪಿದ 400 ಕೆಜಿಯ ದೈತ್ಯ ಬೀಗ
ಅಕ್ಷಯ್​ ಪಲ್ಲಮಜಲು​​
|

Updated on: Jan 20, 2024 | 10:59 AM

Share

ಮುಜಫರ್‌ನಗರ, ಜ.20: ಅಯೋಧ್ಯೆ (Ayodhya) ರಾಮಮಂದಿರ ಉದ್ಘಾಟನೆಗೆ ಇನ್ನು ಎರಡು ದಿನ ಮಾತ್ರ ಬಾಕಿದೆ. ಈಗಾಗಲೇ ರಾಮಭಕ್ತರಲ್ಲಿ ಸಂಭ್ರಮ ಮನೆ ಮಾಡಿದೆ. ರಾಮಮಂದಿರಕ್ಕೆ ಅನೇಕ ಭಕ್ತರು, ಹಲವು ಉಡುಗೊರೆಯನ್ನು ನೀಡುವ ಮೂಲಕ ರಾಮ ಭಕ್ತಿಯನ್ನು ತೋರಿಸಿದ್ದಾರೆ. ಇದೀಗ ಇಂತಹದೇ ಒಂದು ಕೊಡುಗೆಯನ್ನು ರಾಮಮಂದಿರಕ್ಕೆ ಭಕ್ತರೊಬ್ಬರು ನೀಡಿದ್ದಾರೆ. ಬೃಹತ್​​​ ಆಕಾರದ ಬೀಗ​​​​ವೊಂದನ್ನು ಅಯೋಧ್ಯೆಗೆ ನೀಡಿದ್ದಾರೆ. ಇದಕ್ಕಾಗಿ ಎರಡು ವರ್ಷಗಳ ಕಾಲ ಇವರು ಶ್ರಮಿಸಿದ್ದಾರೆ ಎಂದು ಹೇಳಲಾಗಿದೆ. ಅಲಿಘರ್‌ನ ಕುಶಲಕರ್ಮಿ ಸತ್ಯ ಪ್ರಕಾಶ್ (67 ) ಅವರು ಅಯೋಧ್ಯೆಯ ದೇವಾಲಯಕ್ಕಾಗಿ 400 ಕೆಜಿಯ ದೈತ್ಯ ಬೀಗವನ್ನು ನೀಡಿದ್ದಾರೆ. ಈ ಬೀಗಕ್ಕೆ ಕೊನೆಯ ಸ್ವರ್ಶ ನೀಡುವ ಮುನ್ನವೇ ಅವರು ಕೊನೆಯುಸಿರು ಎಳೆದಿದ್ದಾರೆ. ಇದೀಗ ಅವರ ಆಸೆಯಂತೆ 15 ಕೆಜಿ ತೂಕದ ಎರಡು ಕೀಗಳ ಜೊತೆಗೆ 400 ಕೆಜಿಯ ದೈತ್ಯ ಬೀಗವು ಅಯೋಧ್ಯೆ ತಲುಪಿದೆ.

ಈ ಬೀಗ 10 ಅಡಿ ಎತ್ತರ, 4.6 ಅಡಿ ಅಗಲ ಮತ್ತು 9.5 ಇಂಚು ದಪ್ಪದ ಸುಮಾರು 2 ಲಕ್ಷ ರೂ, ಖರ್ಚು ಮಾಡಲಾಗಿದೆ. ಕೊನೆಗೂ ನನ್ನ ಪತಿಯ ಆಸೆಯಂತೆ ಅಯೋಧ್ಯೆ ರಾಮಮಂದಿರಕ್ಕೆ ಈ ಕೊಡುಗೆ ತಲುಪಿದೆ ಎಂಬ ಸಂತೋಷ ನಮಗಿದೆ ಎಂದು ಸತ್ಯ ಪ್ರಕಾಶ್ ಅವರು ಪತ್ನಿ ರುಕ್ಮಣಿ ಹೇಳಿದ್ದಾರೆ.

ಸತ್ಯ ಪ್ರಕಾಶ್ ಅವರ ಮನೆಯಿಂದ ಈ ದೈತ್ಯ ಬೀಗ​ವನ್ನು ಕ್ರೇನ್​​ ಸಹಾಯದಿಂದ ಲಾರಿಗೆ ತುಂಬಿ, ಶುಕ್ರವಾರ ಅಯೋಧ್ಯೆಗೆ ಈ ಬೀಗ ತಲುಪಿದೆ ಎಂದು ಹೇಳಿದ್ದಾರೆ. ಇನ್ನು ಸತ್ಯ ಪ್ರಕಾಶ್​​​​ ಅವರ ಪುತ್ರ ಮಹೇಶ್‌ಚಂದ್ ಅವರು ತನ್ನ ಕುಟುಂಬದ ಸಂಕಷ್ಟದ ಬಗ್ಗೆ ತಿಳಿದ ಹಿಂದೂ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಅನ್ನಪೂರ್ಣ ಭಾರತಿ ಅವರ ನಮಗೆ ಸಹಾಯ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ಬಾಬರ್ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಬದಲಾಯಿಸಿದ ಹಿಂದೂ ಕಾರ್ಯಕರ್ತರು

ಇನ್ನು ಈ ಬೀಗ ವಿಶ್ವದಲ್ಲೇ ಅತೀ ದೊಡ್ಡದಾದ ಬೀಗ ಎಂದು ಹೇಳಲಾಗಿದೆ. ಜತೆಗೆ ಸ್ವತಃ ಕೈಯಲ್ಲಿಯೇ ತಯಾರಿಸಿರುವ ಬೀಗ ಎಂದು ಹೇಳಲಾಗಿದೆ. ಇನ್ನು ಸತ್ಯ ಪ್ರಕಾಶ್​​​ ಅವರು ಕನಸು ಇಂದು ಪೂರ್ಣಗೊಂಡಿದೆ ಎಂದು ಹಿಂದೂ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಅನ್ನಪೂರ್ಣ ಭಾರತಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್