AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಕುಶಲಕರ್ಮಿಯ ಆಸೆ ಈಡೇರಿತು, ಅಯೋಧ್ಯೆ ತಲುಪಿದ 400 ಕೆಜಿಯ ದೈತ್ಯ ಬೀಗ

ರಾಮ ಭಕ್ತರೊಬ್ಬರು ಬೃಹತ್​​​ ಆಕಾರದ ಬೀಗ​​​​ವೊಂದನ್ನು ಅಯೋಧ್ಯೆಗೆ ನೀಡಿದ್ದಾರೆ. ಇದಕ್ಕಾಗಿ ಎರಡು ವರ್ಷಗಳ ಕಾಲ ಇವರು ಶ್ರಮಿಸಿದ್ದಾರೆ ಎಂದು ಹೇಳಲಾಗಿದೆ. ಅಲಿಘರ್‌ನ ಕುಶಲಕರ್ಮಿ ಸತ್ಯ ಪ್ರಕಾಶ್ (67 ) ಅವರು ಅಯೋಧ್ಯೆಯ ದೇವಾಲಯಕ್ಕಾಗಿ 400 ಕೆಜಿಯ ದೈತ್ಯ ಬೀಗವನ್ನು ನೀಡಿದ್ದಾರೆ.

ಕೊನೆಗೂ ಕುಶಲಕರ್ಮಿಯ ಆಸೆ ಈಡೇರಿತು, ಅಯೋಧ್ಯೆ ತಲುಪಿದ 400 ಕೆಜಿಯ ದೈತ್ಯ ಬೀಗ
ಅಕ್ಷಯ್​ ಪಲ್ಲಮಜಲು​​
|

Updated on: Jan 20, 2024 | 10:59 AM

Share

ಮುಜಫರ್‌ನಗರ, ಜ.20: ಅಯೋಧ್ಯೆ (Ayodhya) ರಾಮಮಂದಿರ ಉದ್ಘಾಟನೆಗೆ ಇನ್ನು ಎರಡು ದಿನ ಮಾತ್ರ ಬಾಕಿದೆ. ಈಗಾಗಲೇ ರಾಮಭಕ್ತರಲ್ಲಿ ಸಂಭ್ರಮ ಮನೆ ಮಾಡಿದೆ. ರಾಮಮಂದಿರಕ್ಕೆ ಅನೇಕ ಭಕ್ತರು, ಹಲವು ಉಡುಗೊರೆಯನ್ನು ನೀಡುವ ಮೂಲಕ ರಾಮ ಭಕ್ತಿಯನ್ನು ತೋರಿಸಿದ್ದಾರೆ. ಇದೀಗ ಇಂತಹದೇ ಒಂದು ಕೊಡುಗೆಯನ್ನು ರಾಮಮಂದಿರಕ್ಕೆ ಭಕ್ತರೊಬ್ಬರು ನೀಡಿದ್ದಾರೆ. ಬೃಹತ್​​​ ಆಕಾರದ ಬೀಗ​​​​ವೊಂದನ್ನು ಅಯೋಧ್ಯೆಗೆ ನೀಡಿದ್ದಾರೆ. ಇದಕ್ಕಾಗಿ ಎರಡು ವರ್ಷಗಳ ಕಾಲ ಇವರು ಶ್ರಮಿಸಿದ್ದಾರೆ ಎಂದು ಹೇಳಲಾಗಿದೆ. ಅಲಿಘರ್‌ನ ಕುಶಲಕರ್ಮಿ ಸತ್ಯ ಪ್ರಕಾಶ್ (67 ) ಅವರು ಅಯೋಧ್ಯೆಯ ದೇವಾಲಯಕ್ಕಾಗಿ 400 ಕೆಜಿಯ ದೈತ್ಯ ಬೀಗವನ್ನು ನೀಡಿದ್ದಾರೆ. ಈ ಬೀಗಕ್ಕೆ ಕೊನೆಯ ಸ್ವರ್ಶ ನೀಡುವ ಮುನ್ನವೇ ಅವರು ಕೊನೆಯುಸಿರು ಎಳೆದಿದ್ದಾರೆ. ಇದೀಗ ಅವರ ಆಸೆಯಂತೆ 15 ಕೆಜಿ ತೂಕದ ಎರಡು ಕೀಗಳ ಜೊತೆಗೆ 400 ಕೆಜಿಯ ದೈತ್ಯ ಬೀಗವು ಅಯೋಧ್ಯೆ ತಲುಪಿದೆ.

ಈ ಬೀಗ 10 ಅಡಿ ಎತ್ತರ, 4.6 ಅಡಿ ಅಗಲ ಮತ್ತು 9.5 ಇಂಚು ದಪ್ಪದ ಸುಮಾರು 2 ಲಕ್ಷ ರೂ, ಖರ್ಚು ಮಾಡಲಾಗಿದೆ. ಕೊನೆಗೂ ನನ್ನ ಪತಿಯ ಆಸೆಯಂತೆ ಅಯೋಧ್ಯೆ ರಾಮಮಂದಿರಕ್ಕೆ ಈ ಕೊಡುಗೆ ತಲುಪಿದೆ ಎಂಬ ಸಂತೋಷ ನಮಗಿದೆ ಎಂದು ಸತ್ಯ ಪ್ರಕಾಶ್ ಅವರು ಪತ್ನಿ ರುಕ್ಮಣಿ ಹೇಳಿದ್ದಾರೆ.

ಸತ್ಯ ಪ್ರಕಾಶ್ ಅವರ ಮನೆಯಿಂದ ಈ ದೈತ್ಯ ಬೀಗ​ವನ್ನು ಕ್ರೇನ್​​ ಸಹಾಯದಿಂದ ಲಾರಿಗೆ ತುಂಬಿ, ಶುಕ್ರವಾರ ಅಯೋಧ್ಯೆಗೆ ಈ ಬೀಗ ತಲುಪಿದೆ ಎಂದು ಹೇಳಿದ್ದಾರೆ. ಇನ್ನು ಸತ್ಯ ಪ್ರಕಾಶ್​​​​ ಅವರ ಪುತ್ರ ಮಹೇಶ್‌ಚಂದ್ ಅವರು ತನ್ನ ಕುಟುಂಬದ ಸಂಕಷ್ಟದ ಬಗ್ಗೆ ತಿಳಿದ ಹಿಂದೂ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಅನ್ನಪೂರ್ಣ ಭಾರತಿ ಅವರ ನಮಗೆ ಸಹಾಯ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ಬಾಬರ್ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಬದಲಾಯಿಸಿದ ಹಿಂದೂ ಕಾರ್ಯಕರ್ತರು

ಇನ್ನು ಈ ಬೀಗ ವಿಶ್ವದಲ್ಲೇ ಅತೀ ದೊಡ್ಡದಾದ ಬೀಗ ಎಂದು ಹೇಳಲಾಗಿದೆ. ಜತೆಗೆ ಸ್ವತಃ ಕೈಯಲ್ಲಿಯೇ ತಯಾರಿಸಿರುವ ಬೀಗ ಎಂದು ಹೇಳಲಾಗಿದೆ. ಇನ್ನು ಸತ್ಯ ಪ್ರಕಾಶ್​​​ ಅವರು ಕನಸು ಇಂದು ಪೂರ್ಣಗೊಂಡಿದೆ ಎಂದು ಹಿಂದೂ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಅನ್ನಪೂರ್ಣ ಭಾರತಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?