AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirmala Sitharaman: ಸಣ್ಣ ಉದ್ಯಮಗಳ ಕಾಯಕಲ್ಪಕ್ಕೆ ದೊಡ್ಡಮೊತ್ತದ ಕೇಂದ್ರದಿಂದ ಹಣ ನಿಗದಿ: ಯಾವ ಕ್ಷೇತ್ರಕ್ಕೆ ಎಷ್ಟು ಸಾಲ? ಎಷ್ಟು ಅನುದಾನ ಇಲ್ಲಿದೆ ಮಾಹಿತಿ

‘ಕೊವಿಡ್ ಬಾಧಿತ ಕ್ಷೇತ್ರಗಳ ಪುನರುಜ್ಜೀವನಕ್ಕೇಂದು ₹ 1.1 ಲಕ್ಷ ಕೋಟಿ ಸಾಲ ಖಾತ್ರಿ ಯೋಜನೆ ಪ್ರಕಟಿಸುತ್ತಿದ್ದೇವೆ. ಈ ಪೈಕಿ ₹ 50 ಸಾವಿರವನ್ನು ಆರೋಗ್ಯ ಕ್ಷೇತ್ರಕ್ಕೆ ಮೀಸಲಿಟ್ಟಿದ್ದೇವೆ’ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು

Nirmala Sitharaman: ಸಣ್ಣ ಉದ್ಯಮಗಳ ಕಾಯಕಲ್ಪಕ್ಕೆ ದೊಡ್ಡಮೊತ್ತದ ಕೇಂದ್ರದಿಂದ ಹಣ ನಿಗದಿ: ಯಾವ ಕ್ಷೇತ್ರಕ್ಕೆ ಎಷ್ಟು ಸಾಲ? ಎಷ್ಟು ಅನುದಾನ ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on:Jun 28, 2021 | 6:01 PM

Share

ದೆಹಲಿ: ಕೊವಿಡ್ 2ನೇ ಅಲೆಯ ಹೊಡೆತದಿಂದ ಕುಸಿತ ಕಂಡಿರುವ ದೇಶದ ವಿವಿಧ ವಲಯಗಳ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಸೋಮವಾರ ₹ 1.1 ಲಕ್ಷ ಕೋಟಿ ಮೊತ್ತದ ಸಾಲ ಖಾತರಿ ಯೋಜನೆ ಪ್ರಕಟಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಯೋಜನೆಯ ವಿವರಗಳನ್ನು ನೀಡಿದರು. ಈ ಪೈಕಿ ₹ 50 ಸಾವಿರ ಕೋಟಿಯಷ್ಟು ದೊಡ್ಡ ಮೊತ್ತವನ್ನು ಆರೋಗ್ಯ ಕ್ಷೇತ್ರಕ್ಕೆ ಮೀಸಲಿಟ್ಟಿರುವುದು ವಿಶೇಷ ಎನಿಸಿದೆ.

‘ನಾವು ಒಟ್ಟು 8 ಆರ್ಥಿಕ ಪರಿಹಾರ ಕ್ರಮಗಳನ್ನು ಪ್ರಕಟಿಸುತ್ತಿದ್ದೇವೆ. ಈ ಪೈಕಿ ನಾಲ್ಕು ಸಂಪೂರ್ಣ ಹೊಸತು. ಒಂದು ಆರೋಗ್ಯ ಕ್ಷೇತ್ರಕ್ಕೆ ನೇರವಾಗಿ ಸಂಬಂಧಿಸಿದ್ದು. ಕೊವಿಡ್ ಬಾಧಿತ ಕ್ಷೇತ್ರಗಳ ಪುನರುಜ್ಜೀವನಕ್ಕೇಂದು ₹ 1.1 ಲಕ್ಷ ಕೋಟಿ ಸಾಲ ಖಾತ್ರಿ ಯೋಜನೆ ಪ್ರಕಟಿಸುತ್ತಿದ್ದೇವೆ. ಈ ಪೈಕಿ ₹ 50 ಸಾವಿರವನ್ನು ಆರೋಗ್ಯ ಕ್ಷೇತ್ರಕ್ಕೆ ಮೀಸಲಿಟ್ಟಿದ್ದೇವೆ’ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಸಾಲ ಖಾತರಿ ಯೋಜನೆಯಿಂದ ನೇರವಾಗಿ 25 ಲಕ್ಷ ಜನರಿಗೆ ಅನುಕೂಲವಾಗಲಿದೆ ಎಂದು ಹಣಕಾಸು ಸಚಿವರು ತಿಳಿಸಿದರು. ಮೈಕ್ರೊ-ಫೈನಾನ್ಸ್​ ಸಂಸ್ಥೆಗಳಿಂದ ಸಾಲವನ್ನು ಅತಿಸಣ್ಣ ಸಾಲಗಾರರಿಗೂ ನೀಡಲಾಗುವುದು. ಈ ಯೋಜನೆಯಡಿ ಗರಿಷ್ಠ ₹ 1.25 ಲಕ್ಷವನ್ನು ಸಾಲವಾಗಿ ನೀಡಲಾಗುತ್ತದೆ. ನಮ್ಮ ಗಮನವು ಹೊಸ ಯೋಜನೆಗಳ ಬಗ್ಗೆ ಇರುತ್ತದೆಯೇ ಹೊರತು ಹಳೆಯ ಸಾಲಗಳ ಮರುಪಾವತಿ ಬಗ್ಗೆ ಅಲ್ಲ’ ಎಂದು ನಿರ್ಮಲಾ ಸೋಮವಾರ ವರದಿಗಾರರಿಗೆ ತಿಳಿಸಿದರು.

ಸಾಲ ಖಾತ್ರಿ ಯೋಜನೆಯಡಿ ಬಡ್ಡಿ ದರ ಸಾಲ ಖಾತ್ರಿ ಯೋಜನೆಯಡಿ ನೀಡುವ ಸಾಲಗಳಿಗೆ ರಿಸರ್ವ್​ ಬ್ಯಾಂಕ್​ ನಿಗದಿಪಡಿಸಿರುವ ಬಡ್ಡಿಗಿಂತಲೂ ಶೇ 2ರಷ್ಟು ಕಡಿಮೆ ಬಡ್ಡಿ ಇರುತ್ತದೆ. ಸಾಲ ಪಾವತಿಗೆ 3 ವರ್ಷಗಳ ಕಾಲಾವಕಾಶ ಸಿಗುತ್ತದೆ. ಹೊಸ ಸಾಲ ವಿತರಣೆ ಮತ್ತು ಈಗಾಗಲೇ ಸಾಲ ಪಡೆದು ಸಂಕಷ್ಟದಲ್ಲಿರುವವರ ನೆರವಿಗೆ ಬರುವುದು ನಮ್ಮ ಆದ್ಯತೆಯಾಗಿರಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಗ್ರಾಮೀಣ ಪ್ರದೇಶ ಮತ್ತು ಸಣ್ಣ ಪಟ್ಟಣಗಳಲ್ಲಿರುವ ಅತಿ ಸಣ್ಣ ಸಾಲಗಾರರನ್ನೂ ನಾವು ತಲುಪಲಿದ್ದೇವೆ ಎಂದು ವಿಶ್ವಾಸ ಪ್ರದರ್ಶಿಸಿದರು. ಆರೋಗ್ಯ ಕ್ಷೇತ್ರ ಹೊರತುಪಡಿಸಿ ಬೇರೆ ವಲಯಗಳಿಗೆ ಶೇ 8.25ರ ಬಡ್ಡಿದರದಲ್ಲಿ ಸಾಲ ಸಿಗುತ್ತದೆ.  ಎನ್​ಪಿಎ ಘೋಷಣೆಯಾಗದ ಸಾಲಗಾರರದು ಅಂದರೆ 89 ದಿನದವರೆಗೂ ಸಾಲ ಮರುಪಾವತಿ ಮಾಡದವರು ಈ ಯೋಜನೆಯಡಿ ಸಾಲ ಪಡೆಯಲು ಅರ್ಹರು.

ತುರ್ತು ಸಾಲ ಖಾತ್ರಿ ಯೋಜನೆ ಆತ್ಮನಿರ್ಭರ್ ಭಾರತ ಪ್ಯಾಕೇಜ್​ನಡಿ ಕಳೆದ ವರ್ಷ ಘೋಷಿಸಿದ್ದ ₹ 3 ಲಕ್ಷ ಕೋಟಿ ಮೊತ್ತದ ತುರ್ತು ಸಾಲ ಖಾತ್ರಿ ಯೋಜನೆಯ (Emergency Credit Line Guarantee Scheme – ECLGS) ಮೊತ್ತವನ್ನೂ ₹ 4.5 ಲಕ್ಷ ಕೋಟಿಗೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಣ್ಣ ಮತ್ತು ಅತಿಸಣ್ಣ ಉದ್ದಿಮೆಗಳಿಗೆ ಕೊಲ್ಯಾಟ್ರಲ್ ಇಲ್ಲದೆ ಸಾಲ ನೀಡಲು ಈ ನಿಧಿಯನ್ನು ಬಳಸಲು ಹಣಕಾಸು ಇಲಾಖೆ ಉದ್ದೇಶಿಸಿದೆ.

ಆರೋಗ್ಯ ಕ್ಷೇತ್ರಕ್ಕೆ ₹ 50,000 ಕೋಟಿ ಆರೋಗ್ಯ ಕ್ಷೇತ್ರವನ್ನು ಸದೃಢಗೊಳಿಸಲು ₹ 50,000 ಕೋಟಿ ಮೊತ್ತವನ್ನು ಕೇಂದ್ರ ಸರ್ಕಾರ ತೆಗೆದಿರಿಸಿದೆ. ಈ ಹಣದಿಂದ ದೇಶದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಮೂಲ ಸೌಕರ್ಯಗಳನ್ನು ಸದೃಢಗೊಳಿಸಲಾಗುವುದು ಎಂದು ಸಚಿವರು ಹೇಳಿದರು.

ಆರೋಗ್ಯ ಕ್ಷೇತ್ರಕ್ಕೆ ಘೋಷಿಸಿರುವ 50 ಸಾವಿರ ಕೋಟಿ ರೂಪಾಯಿ ಸಾಲ ಗ್ಯಾರಂಟಿ ಯೋಜನೆಯ ಲಾಭವನ್ನು ದೇಶದ 8 ಮಹಾನಗರಗಳನ್ನು ಹೊರತುಪಡಿಸಿ ಉಳಿದ ನಗರಗಳು ಪಡೆದುಕೊಳ್ಳಬಹುದು. ಆರೋಗ್ಯ ಮೂಲಸೌಕರ್ಯದ ವಿಸ್ತರಣೆ ಹಾಗೂ ಹೊಸದಾಗಿ ಆಸ್ಪತ್ರೆ ಆರಂಭಿಸುವವರಿಗೂ ಈ ಯೋಜನೆಯಡಿ ಸಾಲ ಸಿಗಲಿದೆ. ವಿಸ್ತರಣೆಗಾದರೆ ಶೇ 50ರಷ್ಟು, ಹೊಸ ಯೋಜನೆಯಾದರೆ, ಶೇ 75ರಷ್ಟು ಸಾಲ ನೀಡಲಾಗುತ್ತೆ. ಆದ್ಯತೆಯ ಜಿಲ್ಲೆಗಳಲ್ಲಿ ಹೊಸ ಆಸ್ಪತ್ರೆ ಸ್ಥಾಪನೆ ಮತ್ತು ವಿಸ್ತರಣೆ ಯೋಜನೆಗಳಿಗೆ ಶೇ 75 ರಷ್ಟು ಸಾಲ ನೀಡಲಾಗುತ್ತೆ. ಗರಿಷ್ಠ 100 ಕೋಟಿ ರೂಪಾಯಿವರೆಗೂ ಸಾಲ ನೀಡಲು ಅವಕಾಶವಿದೆ. ಶೇ 7.95 ರ ಬಡ್ಡಿದರದಲ್ಲಿ 3 ವರ್ಷದ ಅವಧಿಗೆ ಸಾಲ ಸಿಗುತ್ತದೆ. ಈ ಸಾಲಕ್ಕೆ ನ್ಯಾಷನಲ್ ಕ್ರೆಡಿಟ್ ಗ್ಯಾರಂಟಿ ಟ್ರಸ್ಟಿ ಕಂಪನಿ ಲಿಮಿಟೆಡ್​ನ ಖಾತ್ರಿ ಇರುತ್ತದೆ.

(Finance Minister Nirmala Sitharaman announces 8 major relief measures to boost Covid affected sectors)

ಇದನ್ನೂ ಓದಿ: Nirmala Sitharaman: ಟೂರಿಸ್ಟ್​ ಗೈಡ್​ಗಳಿಗೆ 1 ಲಕ್ಷದ ತನಕ ಸಾಲ; ಭಾರತಕ್ಕೆ ಬರುವ 5 ಲಕ್ಷ ವಿದೇಶಿಗರಿಗೆ ವೀಸಾ ಶುಲ್ಕ ಇಲ್ಲ

ಇದನ್ನೂ ಓದಿ: ಕೊವಿಡ್ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್

Published On - 5:54 pm, Mon, 28 June 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ