AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 31ರವರೆಗೆ ಕೊವಿಡ್ ಚಿಕಿತ್ಸೆಯ ಉಪಕರಣಗಳ ಮೇಲೆ ಜಿಎಸ್​ಟಿ ವಿನಾಯತಿ

GST On Covid Essentials: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ 43ನೇ ಜಿಎಸ್​ಟಿ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬ್ಲ್ಯಾಕ್ ಫಂಗಸ್‌ಗೆ ನೀಡುವ ಔಷಧಕ್ಕೂ ಜಿಎಸ್​ಟಿ ವಿನಾಯತಿ ಘೋಷಿಸಲಾಗಿದೆ.

ಆಗಸ್ಟ್  31ರವರೆಗೆ ಕೊವಿಡ್ ಚಿಕಿತ್ಸೆಯ ಉಪಕರಣಗಳ ಮೇಲೆ ಜಿಎಸ್​ಟಿ ವಿನಾಯತಿ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
guruganesh bhat
|

Updated on:May 28, 2021 | 9:34 PM

Share

ದೆಹಲಿ: ಆಗಸ್ಟ್ 31ರವರೆಗೆ  ಕೊವಿಡ್ ಚಿಕಿತ್ಸೆಗೆ ಬಳಸುವ ವೈದ್ಯಕೀಯ ಉಪಕರಣಗಳ ಆಮದಿನ ಮೇಲೆ ಜಿಎಸ್​ಟಿ ವಿನಾಯತಿ ನೀಡಲು ಜಿಎಸ್​ಟಿ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ 43ನೇ ಜಿಎಸ್​ಟಿ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬ್ಲ್ಯಾಕ್ ಫಂಗಸ್‌ಗೆ ನೀಡುವ ಔಷಧಕ್ಕೂ ಜಿಎಸ್​ಟಿ ವಿನಾಯತಿ ಘೋಷಿಸಲಾಗಿದೆ.

ಜಿಎಸ್​ಟಿ ಮಂಡಳಿಯ ಸಭೆ ಮುಗಿಸಿದ ನಂತರ ಸ್ವತಃ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜನರು ಮೊದಲೇ ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್​ಡೌನ್​ನಿಂದ ಜನರ ದುಡಿಮೆ, ಸಂಪಾದನೆಗೂ ಹೊಡೆತ ಬಿದ್ದಿದೆ. ಕೊರೊನಾದಿಂದ ಜೀವ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಇಂಥ ಸ್ಥಿತಿಯಲ್ಲಿ ಜೀವ ಉಳಿಸುವ ಔಷಧಿಗಳು, ಕೊರೊನಾ ಲಸಿಕೆ, ವೆಂಟಿಲೇಟರ್​ಗಳ ಮೇಲೆಲ್ಲಾ ಜಿಎಸ್‌ಟಿ ವಿಧಿಸಿ ತೆರಿಗೆ ಸಂಗ್ರಹಿಸುವುದು ಎಷ್ಟು ಸರಿ ಎಂಬ ಚರ್ಚೆಗಳು ನಡೆಯುತ್ತಿವೆ. ಹೀಗಾಗಿ ಈಗ ಕೊರೊನಾ ಲಸಿಕೆ, ಔಷಧಿಗಳ ಮೇಲೆ ಜಿಎಸ್‌ಟಿ ಇರಬೇಕೇ ಬೇಡವೇ? ಎಂಬ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ಜಿಎಸ್‌ಟಿ ಮಂಡಳಿಯ ಸಭೆ ಕರೆಯಲಾಗಿತ್ತು. ಜಿಎಸ್‌ಟಿ ಬಗ್ಗೆ ಈ ಸಭೆಯಲ್ಲಿ ಕೈಗೊಂಡ ತೀರ್ಮಾನವೇ ಅಂತಿಮ. ಹೀಗಾಗಿ  ಇಂದು (ಮೇ 28) ಶುಕ್ರವಾರ ನಡೆಯುವ ಜಿಎಸ್‌ಟಿ ಮಂಡಳಿ ಸಭೆ ಮಹತ್ವ ಪಡೆದುಕೊಂಡಿತ್ತು.  ರಾಜ್ಯ ಸರ್ಕಾರಗಳ ಒತ್ತಾಯದ ಮೇರೆಗೆ 7 ತಿಂಗಳ ಬಳಿಕ ಜಿಎಸ್‌ಟಿ ಮಂಡಳಿಯ ಸಭೆಯನ್ನು ಕರೆಯಲಾಗಿದೆ. ಜಿಎಸ್‌ಟಿ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಹಿಸುವರು. ಕೇಂದ್ರದ ಹಣಕಾಸು ಇಲಾಖೆಯ ಅಧಿಕಾರಿಗಳು ಹಾಗೂ ಎಲ್ಲ ರಾಜ್ಯದ ಹಣಕಾಸು ಸಚಿವರು ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಹಳ್ಳಿಗಳಲ್ಲಿ ಕೊವಿಡ್ ಕಡಿಮೆ ಮಾಡಲು ಹೆಚ್ಚಿನ ಗಮನ ಕೊಡಿ; ಸಿಎಂ ಯಡಿಯೂರಪ್ಪ ಸೂಚನೆ

ಸ್ವಂತ ಖರ್ಚಿನಲ್ಲಿ ಕೊವಿಡ್ ಲಸಿಕೆ ಪೂರೈಸಲು ತೀರ್ಮಾನಿಸಿದ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ

Finance minister Nirmala Sitharaman anounce GST cut on Covid essentials)

Published On - 9:28 pm, Fri, 28 May 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ