AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 31ರವರೆಗೆ ಕೊವಿಡ್ ಚಿಕಿತ್ಸೆಯ ಉಪಕರಣಗಳ ಮೇಲೆ ಜಿಎಸ್​ಟಿ ವಿನಾಯತಿ

GST On Covid Essentials: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ 43ನೇ ಜಿಎಸ್​ಟಿ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬ್ಲ್ಯಾಕ್ ಫಂಗಸ್‌ಗೆ ನೀಡುವ ಔಷಧಕ್ಕೂ ಜಿಎಸ್​ಟಿ ವಿನಾಯತಿ ಘೋಷಿಸಲಾಗಿದೆ.

ಆಗಸ್ಟ್  31ರವರೆಗೆ ಕೊವಿಡ್ ಚಿಕಿತ್ಸೆಯ ಉಪಕರಣಗಳ ಮೇಲೆ ಜಿಎಸ್​ಟಿ ವಿನಾಯತಿ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
guruganesh bhat
|

Updated on:May 28, 2021 | 9:34 PM

Share

ದೆಹಲಿ: ಆಗಸ್ಟ್ 31ರವರೆಗೆ  ಕೊವಿಡ್ ಚಿಕಿತ್ಸೆಗೆ ಬಳಸುವ ವೈದ್ಯಕೀಯ ಉಪಕರಣಗಳ ಆಮದಿನ ಮೇಲೆ ಜಿಎಸ್​ಟಿ ವಿನಾಯತಿ ನೀಡಲು ಜಿಎಸ್​ಟಿ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ 43ನೇ ಜಿಎಸ್​ಟಿ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬ್ಲ್ಯಾಕ್ ಫಂಗಸ್‌ಗೆ ನೀಡುವ ಔಷಧಕ್ಕೂ ಜಿಎಸ್​ಟಿ ವಿನಾಯತಿ ಘೋಷಿಸಲಾಗಿದೆ.

ಜಿಎಸ್​ಟಿ ಮಂಡಳಿಯ ಸಭೆ ಮುಗಿಸಿದ ನಂತರ ಸ್ವತಃ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜನರು ಮೊದಲೇ ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್​ಡೌನ್​ನಿಂದ ಜನರ ದುಡಿಮೆ, ಸಂಪಾದನೆಗೂ ಹೊಡೆತ ಬಿದ್ದಿದೆ. ಕೊರೊನಾದಿಂದ ಜೀವ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಇಂಥ ಸ್ಥಿತಿಯಲ್ಲಿ ಜೀವ ಉಳಿಸುವ ಔಷಧಿಗಳು, ಕೊರೊನಾ ಲಸಿಕೆ, ವೆಂಟಿಲೇಟರ್​ಗಳ ಮೇಲೆಲ್ಲಾ ಜಿಎಸ್‌ಟಿ ವಿಧಿಸಿ ತೆರಿಗೆ ಸಂಗ್ರಹಿಸುವುದು ಎಷ್ಟು ಸರಿ ಎಂಬ ಚರ್ಚೆಗಳು ನಡೆಯುತ್ತಿವೆ. ಹೀಗಾಗಿ ಈಗ ಕೊರೊನಾ ಲಸಿಕೆ, ಔಷಧಿಗಳ ಮೇಲೆ ಜಿಎಸ್‌ಟಿ ಇರಬೇಕೇ ಬೇಡವೇ? ಎಂಬ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ಜಿಎಸ್‌ಟಿ ಮಂಡಳಿಯ ಸಭೆ ಕರೆಯಲಾಗಿತ್ತು. ಜಿಎಸ್‌ಟಿ ಬಗ್ಗೆ ಈ ಸಭೆಯಲ್ಲಿ ಕೈಗೊಂಡ ತೀರ್ಮಾನವೇ ಅಂತಿಮ. ಹೀಗಾಗಿ  ಇಂದು (ಮೇ 28) ಶುಕ್ರವಾರ ನಡೆಯುವ ಜಿಎಸ್‌ಟಿ ಮಂಡಳಿ ಸಭೆ ಮಹತ್ವ ಪಡೆದುಕೊಂಡಿತ್ತು.  ರಾಜ್ಯ ಸರ್ಕಾರಗಳ ಒತ್ತಾಯದ ಮೇರೆಗೆ 7 ತಿಂಗಳ ಬಳಿಕ ಜಿಎಸ್‌ಟಿ ಮಂಡಳಿಯ ಸಭೆಯನ್ನು ಕರೆಯಲಾಗಿದೆ. ಜಿಎಸ್‌ಟಿ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಹಿಸುವರು. ಕೇಂದ್ರದ ಹಣಕಾಸು ಇಲಾಖೆಯ ಅಧಿಕಾರಿಗಳು ಹಾಗೂ ಎಲ್ಲ ರಾಜ್ಯದ ಹಣಕಾಸು ಸಚಿವರು ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಹಳ್ಳಿಗಳಲ್ಲಿ ಕೊವಿಡ್ ಕಡಿಮೆ ಮಾಡಲು ಹೆಚ್ಚಿನ ಗಮನ ಕೊಡಿ; ಸಿಎಂ ಯಡಿಯೂರಪ್ಪ ಸೂಚನೆ

ಸ್ವಂತ ಖರ್ಚಿನಲ್ಲಿ ಕೊವಿಡ್ ಲಸಿಕೆ ಪೂರೈಸಲು ತೀರ್ಮಾನಿಸಿದ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ

Finance minister Nirmala Sitharaman anounce GST cut on Covid essentials)

Published On - 9:28 pm, Fri, 28 May 21

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ