AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾದ ಎಲ್ಲ ಬಾಕಿ ಚುಕ್ತ ಮಾಡುವಂತೆ ಕೇಂದ್ರ ಸರ್ಕಾರದ ಇಲಾಖೆಗಳಿಗೆ ಸೂಚಿಸಿದ ಹಣಕಾಸು ಸಚಿವಾಲಯ

ಟಾಟಾ ಸನ್ಸ್​ಗೆ ಮಾರಾಟವಾದ ನಂತರ ಕೇಂದ್ರ ಸರ್ಕಾರಕ್ಕೆ ಸಾಲದ ಮೇಲೆ ಸೇವೆ ಒದಿಸುವ ಪರಿಪಾಠವನ್ನು ಏರ್​ ಇಂಡಿಯಾ ಕೈಬಿಟ್ಟಿತ್ತು.

ಏರ್ ಇಂಡಿಯಾದ ಎಲ್ಲ ಬಾಕಿ ಚುಕ್ತ ಮಾಡುವಂತೆ ಕೇಂದ್ರ ಸರ್ಕಾರದ ಇಲಾಖೆಗಳಿಗೆ ಸೂಚಿಸಿದ ಹಣಕಾಸು ಸಚಿವಾಲಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 27, 2021 | 10:17 PM

Share

ದೆಹಲಿ: ಏರ್​ ಇಂಡಿಯಾದ ಎಲ್ಲ ಬಾಕಿಯನ್ನೂ ತಕ್ಷಣ ಚುಕ್ತ ಮಾಡಬೇಕು ಎಂದು ಕೇಂದ್ರ ಹಣಕಾಸು ಇಲಾಖೆಯು ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಬುಧವಾರ ಸೂಚಿಸಿದೆ. ಮುಂದಿನ ಆದೇಶದವರೆಗೆ ಕೇಂದ್ರ ಸರ್ಕಾರದ ಎಲ್ಲ ಅಧಿಕಾರಿಗಳೂ ಏರ್​ ಇಂಡಿಯಾದ ಟಿಕೆಟ್​ಗಳನ್ನು ಹಣ ತೆತ್ತು ಖರೀದಿಸಬೇಕು ಎಂದು ನಿರ್ದೇಶನ ನೀಡಿದೆ.

ಟಾಟಾ ಸನ್ಸ್​ಗೆ ಮಾರಾಟವಾದ ನಂತರ ಕೇಂದ್ರ ಸರ್ಕಾರಕ್ಕೆ ಸಾಲದ ಮೇಲೆ ಸೇವೆ ಒದಿಸುವ ಪರಿಪಾಠವನ್ನು ಏರ್​ ಇಂಡಿಯಾ ಕೈಬಿಟ್ಟಿತ್ತು. ಈ ಬೆಳವಣಿಗೆಯ ನಂತರ ಹಣಕಾಸು ಸಚಿವಾಲಯವು ಮೇಲಿನ ನಿರ್ದೇಶನವನ್ನು ನೀಡಿದೆ.

ಏರ್​ ಇಂಡಿಯಾ ಖರೀದಿಗೆ ಟಾಟಾ ಸನ್ಸ್​ ಗ್ರೂಪ್​ ಸಲ್ಲಿಸಿದ್ದ ಬಿಡ್ ಅಂತಿಮಗೊಂಡ ನಂತರ ಟಿಕೆಟ್ ಖರೀದಿಗೆ ನೀಡುತ್ತಿದ್ದ ಸಾಲ ಸೌಲಭ್ಯವನ್ನು ಏರ್​ ಇಂಡಿಯಾ ನಿಲ್ಲಿಸಿದೆ. ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ಏರ್ ಇಂಡಿಯಾದ ಬಾಕಿ ಚುಕ್ತ ಮಾಡಬೇಕು ಎಂದು ಮೆಮೊ ಮೂಲಕ ಸೂಚಿಸಿದೆ. ತಮ್ಮ ಅಧೀನದಲ್ಲಿರುವ ವಿವಿಧ ನಿಗಮ ಮಂಡಳಿಗಳು ಹಾಗೂ ಕಚೇರಿಗಳಿಗೆ ಈ ಬೆಳವಣಿಗೆಯನ್ನು ಮನದಟ್ಟು ಮಾಡಿಕೊಡಬೇಕು ಎಂದು ಹಣಕಾಸು ಇಲಾಖೆ ಸೂಚಿಸಿದೆ.

ಷೇರು ಖರೀದಿ ಒಪ್ಪಂದಕ್ಕೆ ಸಹಿ ಏರ್ ಇಂಡಿಯಾವನ್ನು 18,000 ಕೋಟಿ ರೂಪಾಯಿಗೆ ಮಾರಾಟ ಮಾಡಲು ಟಾಟಾ ಸನ್ಸ್‌ನೊಂದಿಗೆ ಷೇರು ಖರೀದಿ ಒಪ್ಪಂದಕ್ಕೆ ಸರ್ಕಾರ ಸೋಮವಾರ (ಅ.25) ಸಹಿ ಹಾಕಿದೆ.

ಏರ್ ಇಂಡಿಯಾದ ಹೂಡಿಕೆ ಹಿಂತೆಗೆತಕ್ಕಾಗಿ ಟಾಟಾ ಸನ್ಸ್‌ನೊಂದಿಗೆ ಸರ್ಕಾರವು ಷೇರು ಖರೀದಿ ಒಪ್ಪಂದಕ್ಕೆ ಸಹಿ ಮಾಡಿದೆ. ಈ ಒಪ್ಪಂದವು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮತ್ತು ಗ್ರೌಂಡ್ ಹ್ಯಾಂಡ್ಲಿಂಗ್ ಆರ್ಮ್ AISATS ಮಾರಾಟವನ್ನು ಒಳಗೊಂಡಿದೆ. ಸ್ಪೈಸ್‌ಜೆಟ್ ಪ್ರವರ್ತಕ ಅಜಯ್ ಸಿಂಗ್ ನೇತೃತ್ವದ ಒಕ್ಕೂಟ ರೂ. 15,100 ಕೋಟಿಗೆ ಮಾಡಿದ್ದ ಆಫರ್​ ಅನ್ನು ಟಾಟಾ ಸೋಲಿಸಿತು. ಅಂದಹಾಗೆ ನಷ್ಟವನ್ನು ಉಂಟುಮಾಡುತ್ತಿದ್ದ ಏರ್​ಇಂಡಿಯಾದಿಂದ ತನ್ನ ಶೇ 100ರಷ್ಟು ಪಾಲನ್ನು ಮಾರಾಟ ಮಾಡಲು ಸರ್ಕಾರವು ನಿಗದಿಪಡಿಸಿದ ಮೀಸಲು ಬೆಲೆ ರೂ. 12,906 ಕೋಟಿ ಆಗಿತ್ತು.

ಇದನ್ನೂ ಓದಿ: Air India ಏರ್ ಇಂಡಿಯಾ ಬಿಡ್ ಗೆದ್ದ ಟಾಟಾ ಸನ್ಸ್: ಮಾಧ್ಯಮ ವರದಿ ತಪ್ಪು ಎಂದ ಸರ್ಕಾರ ಇದನ್ನೂ ಓದಿ: Air India Deal: ಏರ್​ಇಂಡಿಯಾ ಷೇರು ಖರೀದಿಯ 18 ಸಾವಿರ ಕೋಟಿ ರೂಪಾಯಿ ಒಪ್ಪಂದಕ್ಕೆ ಟಾಟಾ ಸನ್ಸ್- ಸರ್ಕಾರ ಸಹಿ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು