AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಂತ ನರೇಂದ್ರ ಗಿರಿ ಅನುಮಾನಾಸ್ಪದ ಸಾವು ಪ್ರಕರಣ; ಆನಂದ್ ಗಿರಿ ವಿರುದ್ಧ ಎಫ್ಐಆರ್ ದಾಖಲು

ಸಿಎಂ ಯೋಗಿ ಆದಿತ್ಯನಾಥ್ ಮಹಾಂತ ನರೇಂದ್ರ ಗಿರಿ ಅಂತಿಮ ದರ್ಶನ ಪಡೆದಿದ್ದಾರೆ. ಬಾಗಂಬರಿ ಮಠದಲ್ಲಿ ಅಂತಿಮ ನಮನ ಸಲ್ಲಿಸಿದ್ದಾರೆ.

ಮಹಾಂತ ನರೇಂದ್ರ ಗಿರಿ ಅನುಮಾನಾಸ್ಪದ ಸಾವು ಪ್ರಕರಣ; ಆನಂದ್ ಗಿರಿ ವಿರುದ್ಧ ಎಫ್ಐಆರ್ ದಾಖಲು
ಮಹಾಂತಾ ನರೇಂದ್ರ ಗಿರಿ
TV9 Web
| Edited By: |

Updated on:Sep 21, 2021 | 11:59 AM

Share

ಅಖಿಲ ಭಾರತೀಯ ಅಖಾಡ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿ ಅಮರ್ ಗಿರಿ ಪವನ್ ಮಹಾರಾಜ್ ದೂರು ಆಧರಿಸಿ ಆನಂದ್ ಗಿರಿ ವಿರುದ್ಧ ಐಪಿಸಿ ಸೆಕ್ಷನ್ 306ರಡಿ ಎಫ್ಐಆರ್ ದಾಖಲಾಗಿದೆ.

ಇನ್ನು ಮತ್ತೊಂದು ಕಡೆ ಸಿಎಂ ಯೋಗಿ ಆದಿತ್ಯನಾಥ್ ಮಹಾಂತ ನರೇಂದ್ರ ಗಿರಿ ಅಂತಿಮ ದರ್ಶನ ಪಡೆದಿದ್ದಾರೆ. ಬಾಗಂಬರಿ ಮಠದಲ್ಲಿ ಅಂತಿಮ ನಮನ ಸಲ್ಲಿಸಿದ್ದಾರೆ.

ಅಖಿಲ ಭಾರತೀಯ ಅಖಾಡ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ನರೇಂದ್ರ ಗಿರಿಯವರು ಸಾವಿಗೂ ಮೊದಲು ಒಂದು ವಿಡಿಯೋ ಮಾಡಿದ್ದಾರೆ. ಆ ವಿಡಿಯೋ ಇದೀಗ ಪೊಲೀಸರ ಬಳಿಯಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಮಹಾಂತ ನರೇಂದ್ರ ಗಿರಿಯವರ ಶವ ಅವರ ಪ್ರಯಾಗರಾಜ್ನಲ್ಲಿರುವ ನಿವಾಸದ ಕೋಣೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ನಿನ್ನೆ ಪತ್ತೆಯಾಗಿದೆ. ಅದು ಆತ್ಮಹತ್ಯೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಇನ್ನು ಸೂಸೈಡ್ ನೋಟ್ ಕೂಡ ಬರೆದಿಟ್ಟಿದ್ದು ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೀಗ ವಿಡಿಯೋವನ್ನೂ ಪರಿಶೀಲನೆ ಮಾಡುತ್ತಿದ್ದಾರೆ. ಸೂಸೈಡ್ ನೋಟ್ನಲ್ಲಿ ಇರುವುದೇ ಬಹುತೇಕ ವಿಡಿಯೋದಲ್ಲೂ ಇರುವುದಾಗಿ ನಿರ್ಭಯ್ ದ್ವಿವೇದಿ ತಿಳಿಸಿದ್ದಾರೆ.

ಆತ್ಮಹತ್ಯೆ ನೋಟ್ ಮತ್ತು ವಿಡಿಯೋ ಎರಡರದಲ್ಲೂ ಮಹಾಂತ ನರೇಂದ್ರ ಗಿರಿಯವರು ಕೆಲವು ಜನರ ಹೆಸರನ್ನು ಉಲ್ಲೇಖಿಸಿ, ನನಗೆ ತುಂಬ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನಾನು ತುಂಬ ಘನತೆಯಿಂದ ಜೀವನ ನಡೆಸುತ್ತಿದ್ದೇನೆ. ಅವಮಾನಗಳನ್ನು ಸಹಿಸುತ್ತ ಬದುಕಲು ಸಾಧ್ಯವಿಲ್ಲ. ಇದೇ ಕಾರಣಕ್ಕೆ ನಾನು ನನ್ನ ಜೀವನವನ್ನು ಕೊನೆಗೊಳಿಸಿಕೊಳ್ಳುತ್ತಿದ್ದೇನೆ ಎಂದು ಸೂಸೈಡ್ ಲೆಟರ್ನಲ್ಲಿ ಬರೆದಿದ್ದಾರೆ. ಸುಮಾರು 7-8 ಪುಟಗಳ ಸೂಸೈಡ್ ನೋಟ್ ಬರೆದಿರುವ ಅವರು, ತಮ್ಮ ಮಾನಸಿಕ ನೋವಿಗೆ ಅನೇಕ ಕಾರಣಗಳು ಇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾವಿಗೂ ಮುನ್ನ ವಿಡಿಯೋ ಮಾಡಿದ್ದ ಮಹಾಂತ ನರೇಂದ್ರ ಗಿರಿ; ಶಿಷ್ಯನನ್ನು ಹರಿದ್ವಾರದಲ್ಲಿ ವಶಕ್ಕೆ ಪಡೆದ ಪೊಲೀಸರು

Published On - 11:57 am, Tue, 21 September 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ