AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೂಲ್​ಕಿಟ್ ಕೇಸ್​​​; ಕಾಂಗ್ರೆಸ್​​ನಿಂದ ದೂರು, ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ, ವಕ್ತಾರನ ವಿರುದ್ಧ ಎಫ್​ಐಆರ್​ ದಾಖಲು

Toolkit Case: ಭಾರತದಲ್ಲಿ ಪತ್ತೆಯಾದ ರೂಪಾಂತರಿ ಕೊರೊನಾ ವೈರಸ್​​ನ್ನು ಇಂಡಿಯಾ ಸ್ಟ್ರೈನ್​, ಮೋದಿ ಸ್ಟ್ರೈನ್​ ಎಂದು ಕರೆಯುವ ಮೂಲಕ ಕಾಂಗ್ರೆಸ್​ ಕೇಂದ್ರ ಸರ್ಕಾರಕ್ಕೆ ಕಳಂಕ ತರಲು ಪ್ರಯತ್ನಿಸುತ್ತಿದೆ ಎಂಬುದು ಬಿಜೆಪಿ ಆರೋಪ ಮಾಡಿತ್ತು.

ಟೂಲ್​ಕಿಟ್ ಕೇಸ್​​​; ಕಾಂಗ್ರೆಸ್​​ನಿಂದ ದೂರು, ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ, ವಕ್ತಾರನ ವಿರುದ್ಧ ಎಫ್​ಐಆರ್​ ದಾಖಲು
ಬಿಜೆಪಿಯ ರಮಣ್​ ಸಿಂಗ್ ಮತ್ತು ಸಂಬಿತ್ ಪಾತ್ರಾ
Lakshmi Hegde
|

Updated on:May 23, 2021 | 7:17 PM

Share

ದೆಹಲಿ: ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ರಮಣ್​ ಸಿಂಗ್​ ಮತ್ತು ಪಕ್ಷದ ವಕ್ತಾರ ಸಂಬಿತ್​ ಪಾತ್ರಾ ವಿರುದ್ಧ ಛತ್ತೀಸ್​ಗಡ್​​ನಲ್ಲಿ ಎಫ್​ಐಆರ್ ದಾಖಲಾಗಿದೆ. ಎಐಸಿಸಿ ರಿಸರ್ಚ್​ ಡಿಪಾರ್ಟ್​​ಮೆಂಟ್​​ನ ಲೆಟರ್​ಹೆಡ್​ನ್ನು ಫೋರ್ಜರಿ ಮಾಡಿ, ಅದರಲ್ಲಿ ಸುಳ್ಳು, ಕಲ್ಪಿತ ವಿಷಯ ಪ್ರಿಂಟ್ ಮಾಡಿರುವ ಆರೋಪದಡಿ ಇವರ ವಿರುದ್ಧ ಪ್ರಕರಣ ದಾಖಲಾಗಿದೆ. ಇವರಿಬ್ಬರಿಗೂ ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ ನೀಡಲಾಗಿದೆ ಎಂದು ರಾಯಪುರ ಸಿವಿಲ್​ ಲೈನ್ಸ್ ಪೊಲೀಸ್ ಎಸ್​ಎಚ್​ಒ ಆರ್​​ಕೆ ಮಿಶ್ರಾ ತಿಳಿಸಿದ್ದಾರೆ.

ಛತ್ತೀಸಗಡ್​ ಪ್ರದೇಶ ಕಾಂಗ್ರೆಸ್​ ಎನ್​​ಎಸ್​​ಯುಐ ಅಧ್ಯಕ್ಷ ನೀಡಿದ ದೂರಿನ ಅನ್ವಯ ಎಫ್​ಐಆರ್​ ದಾಖಲು ಮಾಡಲಾಗಿದೆ. ಇಲ್ಲಿಗೆ ಬಂದು ಅಥವಾ ವಿಡಿಯೋ ಕಾನ್ಫರೆನ್ಸ್​ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸಂಬಿತ್​​ ಪಾತ್ರ ಅವರಿಗೆ ಸೂಚಿಸಲಾಗಿದೆ ಎಂದು ಮಿಶ್ರಾ ಮಾಹಿತಿ ನೀಡಿದ್ದಾರೆ. ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್​. ಸಂತೋಷ್​ ವಿರುದ್ಧ ಕೂಡ ದೆಹಲಿ ಪೊಲೀಸರಿಗೆ ಕಾಂಗ್ರೆಸ್​ ದೂರು ನೀಡಿದೆ.

ಭಾರತದಲ್ಲಿ ಪತ್ತೆಯಾದ ರೂಪಾಂತರಿ ಕೊರೊನಾ ವೈರಸ್​​ನ್ನು ಇಂಡಿಯಾ ಸ್ಟ್ರೈನ್​, ಮೋದಿ ಸ್ಟ್ರೈನ್​ ಎಂದು ಕರೆಯುವ ಮೂಲಕ ಕಾಂಗ್ರೆಸ್​ ಕೇಂದ್ರ ಸರ್ಕಾರಕ್ಕೆ ಕಳಂಕ ತರಲು ಪ್ರಯತ್ನಿಸುತ್ತಿದೆ ಎಂಬುದು ಬಿಜೆಪಿ ಆರೋಪ ಮಾಡಿತ್ತು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಟೂಲ್​ಕಿಟ್​ ತಯಾರಿಸಿದೆ ಎಂದೂ ಹೇಳಿತ್ತು. ಆದರೆ ಆರೋಪವನ್ನು ಅಲ್ಲಗಳೆದಿದ್ದ ಕಾಂಗ್ರೆಸ್​, ಇದು ಫೇಕ್​ ಟೂಲ್​ಕಿಟ್​ ಎಂದು ಹೇಳಿದ್ದಲ್ಲದೆ ಪೊಲೀಸರಿಗೆ ದೂರು ಕೂಡ ನೀಡಿದೆ. ಕಾಂಗ್ರೆಸ್ ಟೂಲ್​​ಕಿಟ್​ ಎಂದು ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಆರೋಪ ಮಾಡಿದ ಬಿಜೆಪಿ ನಾಯಕರೆಲ್ಲರ ವಿರುದ್ಧವೂ ಕಾಂಗ್ರೆಸ್ ದೂರು ನೀಡಿದೆ.

ಇದನ್ನೂ ಓದಿ: Fact Check: ಕಾಂಗ್ರೆಸ್ ಟೂಲ್​ಕಿಟ್ ಎಂದು ವೈರಲ್ ಆದ ದಾಖಲೆ ಕಾಂಗ್ರೆಸ್ ಪಕ್ಷದ ನಕಲಿ ಲೆಟರ್​ಹೆಡ್ ಬಳಸಿ ಮಾಡಿದ್ದು

ಮಾನವೀಯತೆ ಮೆರೆದ ಯುವ ಕಾಂಗ್ರೆಸ್ ಕಾರ್ಯಕರ್ತರು; ಮೊಬೈಲ್ ಕಳುವಾಗಿದೆ ಎಂದು ಪತ್ರ ಬರೆದ ಕೊಡಗು ಬಾಲಕಿಗೆ ಹೊಸ ಫೋನ್!

ಮೇಘನಾ ರಾಜ್ ​- ಚಿರಂಜೀವಿ ಸರ್ಜಾ ಪುತ್ರ ಜ್ಯೂ. ಚಿರುಗೆ ಹೆಜ್ಜೆ ಹೆಜ್ಜೆಗೂ ಪ್ರೀತಿ ತೋರಿಸುತ್ತಿರುವ ಫ್ಯಾನ್ಸ್​

Published On - 6:17 pm, Sun, 23 May 21

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ