AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೂಲ್​ಕಿಟ್ ಕೇಸ್​​​; ಕಾಂಗ್ರೆಸ್​​ನಿಂದ ದೂರು, ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ, ವಕ್ತಾರನ ವಿರುದ್ಧ ಎಫ್​ಐಆರ್​ ದಾಖಲು

Toolkit Case: ಭಾರತದಲ್ಲಿ ಪತ್ತೆಯಾದ ರೂಪಾಂತರಿ ಕೊರೊನಾ ವೈರಸ್​​ನ್ನು ಇಂಡಿಯಾ ಸ್ಟ್ರೈನ್​, ಮೋದಿ ಸ್ಟ್ರೈನ್​ ಎಂದು ಕರೆಯುವ ಮೂಲಕ ಕಾಂಗ್ರೆಸ್​ ಕೇಂದ್ರ ಸರ್ಕಾರಕ್ಕೆ ಕಳಂಕ ತರಲು ಪ್ರಯತ್ನಿಸುತ್ತಿದೆ ಎಂಬುದು ಬಿಜೆಪಿ ಆರೋಪ ಮಾಡಿತ್ತು.

ಟೂಲ್​ಕಿಟ್ ಕೇಸ್​​​; ಕಾಂಗ್ರೆಸ್​​ನಿಂದ ದೂರು, ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ, ವಕ್ತಾರನ ವಿರುದ್ಧ ಎಫ್​ಐಆರ್​ ದಾಖಲು
ಬಿಜೆಪಿಯ ರಮಣ್​ ಸಿಂಗ್ ಮತ್ತು ಸಂಬಿತ್ ಪಾತ್ರಾ
Follow us
Lakshmi Hegde
|

Updated on:May 23, 2021 | 7:17 PM

ದೆಹಲಿ: ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ರಮಣ್​ ಸಿಂಗ್​ ಮತ್ತು ಪಕ್ಷದ ವಕ್ತಾರ ಸಂಬಿತ್​ ಪಾತ್ರಾ ವಿರುದ್ಧ ಛತ್ತೀಸ್​ಗಡ್​​ನಲ್ಲಿ ಎಫ್​ಐಆರ್ ದಾಖಲಾಗಿದೆ. ಎಐಸಿಸಿ ರಿಸರ್ಚ್​ ಡಿಪಾರ್ಟ್​​ಮೆಂಟ್​​ನ ಲೆಟರ್​ಹೆಡ್​ನ್ನು ಫೋರ್ಜರಿ ಮಾಡಿ, ಅದರಲ್ಲಿ ಸುಳ್ಳು, ಕಲ್ಪಿತ ವಿಷಯ ಪ್ರಿಂಟ್ ಮಾಡಿರುವ ಆರೋಪದಡಿ ಇವರ ವಿರುದ್ಧ ಪ್ರಕರಣ ದಾಖಲಾಗಿದೆ. ಇವರಿಬ್ಬರಿಗೂ ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ ನೀಡಲಾಗಿದೆ ಎಂದು ರಾಯಪುರ ಸಿವಿಲ್​ ಲೈನ್ಸ್ ಪೊಲೀಸ್ ಎಸ್​ಎಚ್​ಒ ಆರ್​​ಕೆ ಮಿಶ್ರಾ ತಿಳಿಸಿದ್ದಾರೆ.

ಛತ್ತೀಸಗಡ್​ ಪ್ರದೇಶ ಕಾಂಗ್ರೆಸ್​ ಎನ್​​ಎಸ್​​ಯುಐ ಅಧ್ಯಕ್ಷ ನೀಡಿದ ದೂರಿನ ಅನ್ವಯ ಎಫ್​ಐಆರ್​ ದಾಖಲು ಮಾಡಲಾಗಿದೆ. ಇಲ್ಲಿಗೆ ಬಂದು ಅಥವಾ ವಿಡಿಯೋ ಕಾನ್ಫರೆನ್ಸ್​ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸಂಬಿತ್​​ ಪಾತ್ರ ಅವರಿಗೆ ಸೂಚಿಸಲಾಗಿದೆ ಎಂದು ಮಿಶ್ರಾ ಮಾಹಿತಿ ನೀಡಿದ್ದಾರೆ. ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್​. ಸಂತೋಷ್​ ವಿರುದ್ಧ ಕೂಡ ದೆಹಲಿ ಪೊಲೀಸರಿಗೆ ಕಾಂಗ್ರೆಸ್​ ದೂರು ನೀಡಿದೆ.

ಭಾರತದಲ್ಲಿ ಪತ್ತೆಯಾದ ರೂಪಾಂತರಿ ಕೊರೊನಾ ವೈರಸ್​​ನ್ನು ಇಂಡಿಯಾ ಸ್ಟ್ರೈನ್​, ಮೋದಿ ಸ್ಟ್ರೈನ್​ ಎಂದು ಕರೆಯುವ ಮೂಲಕ ಕಾಂಗ್ರೆಸ್​ ಕೇಂದ್ರ ಸರ್ಕಾರಕ್ಕೆ ಕಳಂಕ ತರಲು ಪ್ರಯತ್ನಿಸುತ್ತಿದೆ ಎಂಬುದು ಬಿಜೆಪಿ ಆರೋಪ ಮಾಡಿತ್ತು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಟೂಲ್​ಕಿಟ್​ ತಯಾರಿಸಿದೆ ಎಂದೂ ಹೇಳಿತ್ತು. ಆದರೆ ಆರೋಪವನ್ನು ಅಲ್ಲಗಳೆದಿದ್ದ ಕಾಂಗ್ರೆಸ್​, ಇದು ಫೇಕ್​ ಟೂಲ್​ಕಿಟ್​ ಎಂದು ಹೇಳಿದ್ದಲ್ಲದೆ ಪೊಲೀಸರಿಗೆ ದೂರು ಕೂಡ ನೀಡಿದೆ. ಕಾಂಗ್ರೆಸ್ ಟೂಲ್​​ಕಿಟ್​ ಎಂದು ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಆರೋಪ ಮಾಡಿದ ಬಿಜೆಪಿ ನಾಯಕರೆಲ್ಲರ ವಿರುದ್ಧವೂ ಕಾಂಗ್ರೆಸ್ ದೂರು ನೀಡಿದೆ.

ಇದನ್ನೂ ಓದಿ: Fact Check: ಕಾಂಗ್ರೆಸ್ ಟೂಲ್​ಕಿಟ್ ಎಂದು ವೈರಲ್ ಆದ ದಾಖಲೆ ಕಾಂಗ್ರೆಸ್ ಪಕ್ಷದ ನಕಲಿ ಲೆಟರ್​ಹೆಡ್ ಬಳಸಿ ಮಾಡಿದ್ದು

ಮಾನವೀಯತೆ ಮೆರೆದ ಯುವ ಕಾಂಗ್ರೆಸ್ ಕಾರ್ಯಕರ್ತರು; ಮೊಬೈಲ್ ಕಳುವಾಗಿದೆ ಎಂದು ಪತ್ರ ಬರೆದ ಕೊಡಗು ಬಾಲಕಿಗೆ ಹೊಸ ಫೋನ್!

ಮೇಘನಾ ರಾಜ್ ​- ಚಿರಂಜೀವಿ ಸರ್ಜಾ ಪುತ್ರ ಜ್ಯೂ. ಚಿರುಗೆ ಹೆಜ್ಜೆ ಹೆಜ್ಜೆಗೂ ಪ್ರೀತಿ ತೋರಿಸುತ್ತಿರುವ ಫ್ಯಾನ್ಸ್​

Published On - 6:17 pm, Sun, 23 May 21

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ