AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2006ರಲ್ಲಿ ನಡೆದಿದ್ದ ಆ ದುರಂತದ ಬಗ್ಗೆ ವಾಟ್ಸ್​ಆ್ಯಪ್​ ಸ್ಟೇಟಸ್​ ಹಾಕಿದ್ದಕ್ಕೆ ಪತ್ರಕರ್ತನ ವಿರುದ್ಧ ಎಫ್​ಐಆರ್​..

ಸಜೀದ್​ ರೈನಾ ಶ್ರೀನಗರ ಮೂಲದ ಸುದ್ದಿ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಸ್ಟೇಟಸ್​ ಹಾಕಿದ ಬಳಿಕ ಅವರಿಗೆ ಪೊಲೀಸರು ಕರೆಮಾಡಿದ್ದರು. ಪೊಲೀಸರು ಕರೆ ಮಾಡುತ್ತಿದ್ದಂತೆ ತಮ್ಮ ಸ್ಟೇಟಸ್​ನ್ನು ಡಿಲೀಟ್ ಮಾಡಿದ್ದಾರೆ.

2006ರಲ್ಲಿ ನಡೆದಿದ್ದ ಆ ದುರಂತದ ಬಗ್ಗೆ ವಾಟ್ಸ್​ಆ್ಯಪ್​ ಸ್ಟೇಟಸ್​ ಹಾಕಿದ್ದಕ್ಕೆ ಪತ್ರಕರ್ತನ ವಿರುದ್ಧ ಎಫ್​ಐಆರ್​..
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 06, 2021 | 5:15 PM

Share

ಜಮ್ಮು-ಕಾಶ್ಮೀರದಲ್ಲಿ 23 ವರ್ಷದ ಪತ್ರಕರ್ತನೊಬ್ಬನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ಎಫ್​ಐಆರ್​ ದಾಖಲಿಸಿದ್ದಾರೆ. ಆತ 2006ರಲ್ಲಿ ನಡೆದಿದ್ದ ಘಟನೆಯೊಂದರ ಬಗ್ಗೆ ವಾಟ್ಸ್​​ಆ್ಯಪ್​​ ಸ್ಟೇಟಸ್​ ಹಾಕಿದ್ದೇ ಇದಕ್ಕೆ ಕಾರಣ. 15ವರ್ಷಗಳ ವಾಲೂರು ಸರೋವರದಲ್ಲಿ ನಡೆದ ದೋಣಿ ದುರಂತದಲ್ಲಿ 22 ಮಕ್ಕಳು ಮೃತಪಟ್ಟಿದ್ದರು. ಅದರ ಫೋಟೋ ಹಾಕಿದ್ದ ಬಂಡೀಪೋರಾದ ಪತ್ರಕರ್ತ, ವಾಲೂರು ಲೇಕ್​ ಹುತಾತ್ಮರು ಎಂದು ಹಾಕಿದ್ದರು. ಅದೇ ಈಗ ಅವರ ವಿರುದ್ಧ ಕೇಸ್​ ದಾಖಲಾಗಲೂ ಕಾರಣ.

ಈ ಪತ್ರಕರ್ತನ ಹೆಸರು ಸಜೀದ್​ ರೈನಾ. ಇವರು ಮೇ 30ರಂದು ವಾಲೂರು ದೋಣಿ ದುರಂತಕ್ಕೆ ಸಂಬಂಧಪಟ್ಟ ವಾಟ್ಸ್​ಆ್ಯಪ್ ಸ್ಟೇಟಸ್​ ಹಾಕಿದ್ದರು. ಈಗ್ಯಾಕೆ ಮತ್ತೆ ಆ ದುರಂತದ ಫೋಟೋ ಹಾಕಿದ್ದಾರೆ ಎಂಬುದು ತನಿಖಾರ್ಹವಾಗಿದೆ. ಸೋಷಿಯಲ್​ ಮೀಡಿಯಾಗಳಲ್ಲಿ ಮತ್ತೆ ವೈರಲ್ ಆಗುತ್ತಿದೆ. ಹಾಗಾಗಿ ವಿಚಾರಣೆ ಅಗತ್ಯವಿದೆ ಎಂದು ಬಂಡಿಪೋರಾ ಠಾಣೆ ಪೊಲೀಸರು ಟ್ವೀಟ್​ ಮಾಡಿದ್ದಾರೆ.

ಸಜೀದ್​ ರೈನಾ ಶ್ರೀನಗರ ಮೂಲದ ಸುದ್ದಿ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಸ್ಟೇಟಸ್​ ಹಾಕಿದ ಬಳಿಕ ಅವರಿಗೆ ಪೊಲೀಸರು ಕರೆಮಾಡಿದ್ದರು. ಪೊಲೀಸರು ಕರೆ ಮಾಡುತ್ತಿದ್ದಂತೆ ತಮ್ಮ ಸ್ಟೇಟಸ್​ನ್ನು ಡಿಲೀಟ್ ಮಾಡಿದ್ದಾರೆ. ವಾಲೂರು ದೋಣಿ ದುರಂತಕ್ಕೆ ಮೇ 30ರಂದು ಸರಿಯಾಗಿ 15 ವರ್ಷ ತುಂಬಿತ್ತು. ಹಾಗಾಗಿ ಅದರಲ್ಲಿ ಮೃತಪಟ್ಟ ಮಕ್ಕಳ ಫೋಟೋವನ್ನು ವಾಟ್ಸ್​ಆ್ಯಪ್ ಸ್ಟೇಟಸ್​​ಗೆ ಹಾಕಿದ್ದೆ. ಸಂಜೆ ಹೊತ್ತಿಗೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಕರೆ ಮಾಡಿದರು. ನಾನು ಸ್ಟೇಟಸ್​ ಹಾಕಿದ್ದರ ಹಿಂದೆ ಯಾವುದೇ ಬೇರೆ ಉದ್ದೇಶವಿಲ್ಲ ಎಂದು ಕ್ಷಮೆ ಕೇಳಿದೆ. ಕೇವಲ 20 ಜನರಷ್ಟೇ ನೋಡಿದ್ದಾಗ ನಾನು ಅದನ್ನು ಡಿಲೀಟ್ ಮಾಡಿದ್ದೆ ಎಂದು ಪತ್ರಕರ್ತ ತಿಳಿಸಿದ್ದಾರೆ. ನಾನಂದುಕೊಂಡೆ ಆ ವಿಷಯ ಅಲ್ಲಿಗೇ ಮುಗಿಯಿತೆಂದು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ನನ್ನ ವಿರುದ್ಧ ಎಫ್​ಐಆರ್​ ದಾಖಲಾಗಿದೆ ಎಂಬುದು ಎರಡು ದಿನಗಳ ಬಳಿಕವಷ್ಟೇ ಗೊತ್ತಾಯಿತು ಎಂದು ಹೇಳಿಕೊಂಡಿದ್ದಾರೆ.

ಏನಾಗಿತ್ತು 2006ರಲ್ಲಿ? 2006ರ ಮೇ 30ರಂದು ಹಂದ್ವಾರಾದಲ್ಲಿರುವ ಬರ್ನಿಂಗ್​ ಕ್ಯಾಂಡಲ್​ ಸ್ಕೂಲ್​​ನ ಮಕ್ಕಳು ವಾಲೂರು ನದಿ ದಡಕ್ಕೆ ಪಿಕ್ನಿಕ್​​ಗೆ ಹೋಗಿದ್ದರು. ಅದರಲ್ಲಿ ಒಂದು ಗುಂಪು ಸರೋವರದಲ್ಲಿ ಬೋಟಿಂಗ್​​ಗೆ ಹೋದಾಗ ದೋಣಿ ಮಗುಚಿ 22 ಮಕ್ಕಳು ಮೃತಪಟ್ಟಿದ್ದರು. ಅವತ್ತು ಬೋಟಿಂಗ್​ಗೆ ಕರೆದುಕೊಂಡು ಹೋಗಿದ್ದು ನೌಕಾಪಡೆಯ ಮಾರ್ಕೋಸ್ ಬೋಟ್ ಆಗಿತ್ತು. ಅಂದು ಮೃತಪಟ್ಟವರೆಲ್ಲ 10 ವರ್ಷದ ಒಳಗಿನ ಮಕ್ಕಳೇ ಆಗಿದ್ದರು. ಹೀಗೆ ಮೃತಪಟ್ಟವರ ನೆನಪಲ್ಲಿ ನೌಕಾದಳ, ಹಂದ್ವಾರಾದ ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳ ವಿಭಾಗವನ್ನು ಸ್ಥಾಪಿಸಿದೆ.

ಇದನ್ನೂ ಓದಿ: ಲಾಕ್​ಡೌನ್​ನಿಂದ ಬೆಳೆದ ಬೆಳೆಗೆ ಬೆಲೆ ಇಲ್ಲ; ಹೊಲದಲ್ಲಿಯೇ ಬದನೆಕಾಯಿಯನ್ನು ನಾಶ ಮಾಡಿದ ಬೆಳಗಾವಿ ರೈತ

Published On - 5:14 pm, Sun, 6 June 21

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ