AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎನ್​ಎಸ್​ ವಿಕ್ರಾಂತ್​ ನೌಕೆ ವಿಚಾರದಲ್ಲಿ ಹಗರಣದ ಆರೋಪ; ಬಿಜೆಪಿ ಮುಖಂಡ, ಅವರ ಪುತ್ರನ ವಿರುದ್ಧ ಎಫ್​ಐಆರ್

ಇತ್ತೀಚೆಗೆ ಈ ಬಗ್ಗೆ ಮೊದಲು ಧ್ವನಿ ಎತ್ತಿದ್ದು ಶಿವಸೇನೆ ಸಂಸದ ಸಂಜಯ್ ರಾವತ್.  2013-14ರಲ್ಲಿ ಐಎನ್​ಎಸ್​ ವಿಕ್ರಾಂತ್​ ಮಾರಾಟ ಮಾಡುವ ಸಂದರ್ಭದಲ್ಲಿ ಕಿರಿತ್​ ಸೋಮಯ್ಯ ನೇತೃತ್ವದಲ್ಲಿ ಒಂದು ಅಭಿಯಾನ ಶುರುವಾಯಿತು. ಆದರೆ ಸಂಗ್ರಹವಾದ ಹಣ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದರು.

ಐಎನ್​ಎಸ್​ ವಿಕ್ರಾಂತ್​ ನೌಕೆ ವಿಚಾರದಲ್ಲಿ ಹಗರಣದ ಆರೋಪ; ಬಿಜೆಪಿ ಮುಖಂಡ, ಅವರ ಪುತ್ರನ ವಿರುದ್ಧ ಎಫ್​ಐಆರ್
ಕಿರಿತ್ ಸೋಮಯ್ಯ
TV9 Web
| Edited By: |

Updated on: Apr 07, 2022 | 2:27 PM

Share

ಮುಂಬೈನ ಬಿಜೆಪಿ ನಾಯಕ ಕಿರಿತ್​ ಸೋಮಯ್ಯ ಮತ್ತು ಆತನ ಪುತ್ರ ನೀಲ್​ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಇವರಿಬ್ಬರೂ ಐಎನ್​ಎಸ್​ ವಿಕ್ರಾಂತ್​ ಯುದ್ಧವಿಮಾನ ವಾಹಕ ನೌಕೆಯ ಹೆಸರಲ್ಲಿ ಅಪಾರ ಪ್ರಮಾಣದ ದೇಣಿಗೆ ಸಂಗ್ರಹ ಮಾಡಿ, ಅದನ್ನು ದುರ್ಬಳಕೆ ಮಾಡಿದ್ದಾರೆ ಎಂಬುದಾಗಿ ಸೇನೆಯ ಮಾಜಿ ಅಧಿಕಾರಿಯೊಬ್ಬರು ಟ್ರಾಂಬೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಮುಂಬೈ ಪೊಲೀಸರು ಎಫ್​ಐಆರ್ ದಾಖಲು ಮಾಡಿದ್ದಾರೆ.  ಅಂದಹಾಗೇ, ಈ ಐಎನ್​ಎಸ್​ ವಿಕ್ರಾಂತ್​ ಎಂಬುದು ಭಾರತದಲ್ಲಿ ನಿರ್ಮಾಣವಾದ ಮೊಟ್ಟಮೊದಲ ಯುದ್ಧವಿಮಾನ ವಾಹಕ ನೌಕೆ. 1961ರಲ್ಲಿ ಕಾರ್ಯಾರಂಭ ಮಾಡಿತು. ಭಾರತೀಯ ನೌಕಾಪಡೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ಅದರಲ್ಲೂ 1971ರ ಇಂಡೋ-ಪಾಕ್​ ಯುದ್ಧದ ಸಮಯದಲ್ಲಿ ಪೂರ್ವ ಪಾಕಿಸ್ತಾನದಲ್ಲಿ ನೌಕಾದಿಗ್ಬಂಧನ ಹಾಕುವಲ್ಲಿ ಇದರ ಪಾತ್ರ ಬಹು ಮಹತ್ವದ್ದಾಗಿತ್ತು. ಆದರೆ 1997ರಲ್ಲಿ ಇದನ್ನು ರದ್ದುಗೊಳಿಸಲಾಯಿತು. 2014 ಜನವರಿಯಲ್ಲಿ ಆನ್​ಲೈನ್ ಹರಾಜು ಮೂಲಕ, ಸುಮಾರು 63.2 ಕೋಟಿ ರೂಪಾಯಿಗೆ ಮಾರಾಟ ಮಾಡಲಾಗಿತ್ತು. ಅದಕ್ಕೂ ಮೊದಲು  ಈ ನೌಕೆಯನ್ನು ಮಾರಾಟ ಮಾಡುವುದನ್ನು ತಡೆದು, ಮತ್ತೆ ಪ್ರಾರಂಭ ಮಾಡಿಸುತ್ತೇವೆ ಎಂದು ಹೇಳಿ ಕಿರಿತ್ ಸೋಮಯ್ಯ ದೇಣಿಗೆ ಸಂಗ್ರಹ ಅಭಿಯಾನ ಶುರು ಮಾಡಿದ್ದರು. ಅಪಾರ ಹಣ ಸಂಗ್ರಹ ಮಾಡಿ ಅದನ್ನು ಸರ್ಕಾರಕ್ಕೆ ಹಸ್ತಾಂತರ ಮಾಡದೆ ವಂಚನೆ ಮಾಡಿದ್ದಾರೆ ಎಂಬುದು ಆರೋಪ.

ಇತ್ತೀಚೆಗೆ ಈ ಬಗ್ಗೆ ಮೊದಲು ಧ್ವನಿ ಎತ್ತಿದ್ದು ಶಿವಸೇನೆ ಸಂಸದ ಸಂಜಯ್ ರಾವತ್.  2013-14ರಲ್ಲಿ ಐಎನ್​ಎಸ್​ ವಿಕ್ರಾಂತ್​ ಮಾರಾಟ ಮಾಡುವ ಸಂದರ್ಭದಲ್ಲಿ ಕಿರಿತ್​ ಸೋಮಯ್ಯ ನೇತೃತ್ವದಲ್ಲಿ ಒಂದು ಅಭಿಯಾನ ಶುರುವಾಯಿತು. ವಿಕ್ರಾಂತ್ ನೌಕೆಯನ್ನು ಮತ್ತೆ ಪ್ರಾರಂಭ ಮಾಡಿಸಲಾಗುವುದು ಅದಾಗದೆ ಇದ್ದರೆ, ಈ ನೌಕೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸಲಾಗುವುದು ಎಂದು ಆಗ ಹೇಳಿದ್ದರು. ಅನೇಕ ಜನರು ಇದಕ್ಕಾಗಿ ದೇಣಿಗೆ ನೀಡಿದ್ದರು. ಏನಿಲ್ಲವೆಂದರೂ ಸುಮಾರು 57 ಕೋಟಿ ರೂಪಾಯಿಗಳಷ್ಟು ಸಂಗ್ರಹಗೊಂಡಿದ್ದರ ಬಗ್ಗೆ ಮಾಹಿತಿ ಇದೆ. ನಂತರ ಆ ಹಣ ಏನಾಯಿತು. ಅದನ್ನು ರಾಜಭವನದಲ್ಲಿ ಡಿಪೋಸಿಟ್ ಮಾಡಲಾಗಿದೆ ಎಂದು ಕಿರಿತ್ ಸೋಮಯ್ಯ ಹೇಳಿದ್ದರು. ಆದರೆ ಆರ್​ಟಿಐ ಮೂಲಕ ಮಾಹಿತಿ ಪಡೆದಾಗ, ಅಲ್ಲಿ ಯಾವುದೇ ಹಣವೂ ಠೇವಣಿಯಾಗಲಿಲ್ಲ ಎಂಬುದು ಬೆಳಕಿಗೆ ಬಂದಿದೆ. ಇದು ವಂಚನೆ ಪ್ರಕರಣ ಎಂದು  ರಾವತ್ ಆರೋಪಿಸಿದ್ದರು. ಅಷ್ಟೇ ಅಲ್ಲ, ಇದು ರಾಷ್ಟ್ರೀಯ ಭದ್ರತೆ ವಿಚಾರ. ಮಹಾರಾಷ್ಟ್ರ ಸರ್ಕಾರ ಇದನ್ನು ತನಿಖೆಗೆ ಕೈಗೆತ್ತಿಕೊಳ್ಳಲಿದೆ ಎಂದೂ ಹೇಳಿದ್ದರು.

ಅದಾದ ಮೇಲೆ ಮಿಲಿಟರಿ ಮಾಜಿ ಅಧಿಕಾರಿಯೊಬ್ಬರು ದೂರು ನೀಡಿದ್ದಾರೆ. ಆದರೆ ತಮ್ಮ ಮೇಲಿನ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸೋಮಯ್ಯ, ನಾನು ಯಾವುದೇ ಹಗರಣವನ್ನೂ ಮಾಡಿಲ್ಲ. ನಾನೇನೂ ತಪ್ಪು ಮಾಡಿಲ್ಲ. ಸಂಜಯ್​ ರಾವತ್​ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಬಿಟ್ಟರೆ, ಅದಕ್ಕೆ ಸಾಕ್ಷಿಯನ್ನೇನೂ ನೀಡುತ್ತಿಲ್ಲ. ಇಲ್ಲಿಯವರೆಗೆ ಎಫ್​ಐಆರ್​ ಕಾಪಿ ನನಗೆ ತಲುಪಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಕನ್ನಡದ ‘ಪ್ರೀತ್ಸು’ ಚಿತ್ರಕ್ಕೆ ಇಳಯರಾಜಾ ಸಂಗೀತ ನಿರ್ದೇಶನ;​ ಆಡಿಯೋ ರಿಲೀಸ್ ಮಾಡಿಕೊಂಡ​ ಖುಷಿಯಲ್ಲಿ ಚಿತ್ರತಂಡ

Follow Us
Web contact
Web contact

TV9 Kannada

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ