AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​​440ಕೆ ಕೊವಿಡ್ ರೂಪಾಂತರದ ಬಗ್ಗೆ ಜನರಲ್ಲಿ ಭಯ ಹುಟ್ಟಿಸಿದ ಆರೋಪ; ಚಂದ್ರಬಾಬು ನಾಯ್ಡು ವಿರುದ್ಧ ಎಫ್​ಐಆರ್​

ಚಂದ್ರಬಾಬು ನಾಯ್ಡು ಅವರು ಕೊವಿಡ್​ 19 ಸೋಂಕಿನ ರೂಪಾಂತರವಾದ N440K ಸೋಂಕಿನ ಬಗ್ಗೆ ಮಾತನಾಡಿದ ಎರಡೇ ದಿನಗಳಲ್ಲಿ ಗುಂಟೂರಿನ ಅರುಂಡಲ್​ಪೇಟ್​ ಠಾಣೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ.

ಎನ್​​440ಕೆ ಕೊವಿಡ್ ರೂಪಾಂತರದ ಬಗ್ಗೆ ಜನರಲ್ಲಿ ಭಯ ಹುಟ್ಟಿಸಿದ ಆರೋಪ; ಚಂದ್ರಬಾಬು ನಾಯ್ಡು ವಿರುದ್ಧ ಎಫ್​ಐಆರ್​
ಚಂದ್ರಬಾಬು ನಾಯ್ಡು
Lakshmi Hegde
|

Updated on:May 11, 2021 | 10:19 PM

Share

ಅಮರಾವತಿ: ಕೊವಿಡ್​ 19 ವೈರಸ್​​ನ ರೂಪಾಂತರ ಸೋಂಕಿನ ಬಗ್ಗೆ ಜನರಲ್ಲಿ ಭಯ ಹುಟ್ಟಿಸಿದ್ದಾರೆ ಎಂಬ ಆರೋಪದಡಿ ಆಂಧ್ರಪ್ರದೇಶ ತೆಲುಗು ದೇಸಂ ಪಕ್ಷ (ಟಿಡಿಪಿ)ದ ಮುಖ್ಯಸ್ಥ ಎನ್​.ಚಂದ್ರಬಾಬು ನಾಯ್ಡು ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಚಂದ್ರಬಾಬು ನಾಯ್ಡು ಅವರು ಕೊವಿಡ್​ 19 ಸೋಂಕಿನ ರೂಪಾಂತರವಾದ N440K ಸೋಂಕಿನ ಬಗ್ಗೆ ಮಾತನಾಡಿದ ಎರಡೇ ದಿನಗಳಲ್ಲಿ ಗುಂಟೂರಿನ ಅರುಂಡಲ್​ಪೇಟ್​ ಠಾಣೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ. ಟಿಡಿಪಿ ಮುಖ್ಯಸ್ಥ ಹಾಗೂ ಆ ಪಕ್ಷದ ಹಲವರು ಜನರಲ್ಲಿ ಭಯ ಹುಟ್ಟಿಸುತ್ತಿದ್ದಾರೆ. ಈಗಾಗಲೇ ಕೊರೊನಾದಿಂದ ಆತಂಕದಲ್ಲಿರುವ ಜನರಲ್ಲಿ N440K ರೂಪಾಂತರದ ಬಗ್ಗೆ ಮತ್ತಷ್ಟು ಭಯ ಹುಟ್ಟುವಂತೆ ಮಾಡುತ್ತಿದ್ದಾರೆ ಎಂದು ವಕೀಲರೊಬ್ಬರು ಪೊಲೀಸರಿಗೆ ದೂರು ನೀಡಿದ್ದರು.

ಈ ರೂಪಾಂತರ ವೈರಸ್​ ಭಯದಿಂದಾಗಿ ನೆರೆರಾಜ್ಯದ ಜನರು, ಆಂಧ್ರ ಜನರನ್ನು ತಮ್ಮ ರಾಜ್ಯಕ್ಕೆ ಸೇರಿಸುತ್ತಿಲ್ಲ. ಇಲ್ಲಿನ ಜನರಲ್ಲಿ ಆತಂಕ ಮೂಡಲು, ನೆರೆ ರಾಜ್ಯದ ಜನರು ಇಲ್ಲಿನವರನ್ನು ತಮ್ಮ ರಾಜ್ಯಕ್ಕೆ ಪ್ರವೇಶ ಮಾಡಲು ಬಿಡದೆ ಇರುವುದಕ್ಕೆಲ್ಲ ಕಾರಣ ಚಂದ್ರಬಾಬು ನಾಯ್ಡು ಅವರು ಹಬ್ಬಿಸಿದ ಸುಳ್ಳು ಸುದ್ದಿಯೇ ಕಾರಣ ಎಂದು ಆ ವಕೀಲ ದೂರಿನಲ್ಲಿ ಉಲ್ಲೇಖಿಸಿದ್ದರು.

ಇನ್ನು ಚಂದ್ರಬಾಬು ನಾಯ್ಡು ಅವರು ತಪ್ಪಾದ ಮಾಹಿತಿಯನ್ನು ಜನರಿಗೆ ನೀಡುವ ಮೂಲಕ ಅವರ ದಾರಿ ತಪ್ಪಿಸುತ್ತಿದ್ದಾರೆ ಎಂದು ವೈಎಸ್​ಆರ್​ಸಿಪಿ ಮುಖಂಡ ಸಜ್ಜಲಾ ರಾಮಕೃಷ್ಣ ರೆಡ್ಡಿ ಕೂಡ ಆರೋಪಿಸಿದ್ದಾರೆ.

ಇದನ್ನೂ ಓದಿ: ಯುಕೆಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಪ್ರಧಾನಿ ಮೋದಿ

ಕುವೈತ್​ನಿಂದ ಮತ್ತೆ ಆಕ್ಸಿಜನ್ ನೆರವು; ಎರಡು ಹಡಗುಗಗಳಲ್ಲಿ ಬಂದಿಳಿದ ವೈದ್ಯಕೀಯ ಪರಿಕರಗಳು

FIR Against TDP Leader Chandrababu Naidu over his N440K variant statement

Published On - 10:18 pm, Tue, 11 May 21

‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು