AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರಿಗೆ ಅವಹೇಳನ ಮಾಡಿದ್ದ ಬಿಜೆಪಿ ನಾಯಕನಿಗೆ ಶೋಕಾಸ್​ ನೋಟಿಸ್​ ನೀಡಿದ ಪಕ್ಷ; ಎಫ್​ಐಆರ್​ ದಾಖಲು

ಟಿ 20 ವಿಶ್ವಕಪ್​ ಪಂದ್ಯಾವಳಿಯಲ್ಲಿ ಪಾಕಿಸ್ತಾನ ಗೆದ್ದಾಗ ಕಾಶ್ಮೀರದ ವಿವಿಧೆಡೆ ಸಂಭ್ರಮಿಸಿದ್ದನ್ನು ವಿರೋಧಿಸುವ ಭರದಲ್ಲಿ ವಿಕ್ರಮ್​ ರಾಂಧವ ಕಾಶ್ಮೀರದ ಮುಸ್ಲಿಮರ ಬಗ್ಗೆ ಕೀಳಾಗಿ ಕಾಮೆಂಟ್​ ಮಾಡಿದ್ದರು.

ಮುಸ್ಲಿಮರಿಗೆ ಅವಹೇಳನ ಮಾಡಿದ್ದ ಬಿಜೆಪಿ ನಾಯಕನಿಗೆ ಶೋಕಾಸ್​ ನೋಟಿಸ್​ ನೀಡಿದ ಪಕ್ಷ; ಎಫ್​ಐಆರ್​ ದಾಖಲು
ವಿಕ್ರಮ್​ ರಾಂಧವಾ
TV9 Web
| Edited By: |

Updated on: Nov 02, 2021 | 5:40 PM

Share

ಜಮ್ಮು: ಮುಸ್ಲಿಮರ ವಿರುದ್ಧ ಅನುಚಿತವಾಗಿ ಮಾತನಾಡಿದ ಬಿಜೆಪಿ ನಾಯಕ (BJP Leader) ವಿಕ್ರಮ್​ ರಾಂಧವಾ ವಿರುದ್ಧ ಜಮ್ಮು-ಕಾಶ್ಮೀರ (Jammu-Kashmir)ದಲ್ಲಿ ಪ್ರಕರಣ ದಾಖಲಾಗಿದೆ. ಇವರ ಹೇಳಿಕೆಯನ್ನು ಬಿಜೆಪಿ ಪಕ್ಷವೇ ವಿರೋಧಿಸಿದೆ. ರಾಂಧವಾ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವುದಿಲ್ಲ. ಅವರು ಕೂಡಲೇ ಕ್ಷಮೆ ಕೋರಬೇಕು ಎಂದು ಪಕ್ಷ ಹೇಳಿದೆ. ಪಾಕಿಸ್ತಾನ ಟಿ-20 ವಿಶ್ವಕಪ್​ ಪಂದ್ಯದಲ್ಲಿ ಗೆದ್ದ ಬಳಿಕ,  ಜಮ್ಮು-ಕಾಶ್ಮೀರದ ಮಾಜಿ ಶಾಸಕ ವಿಕ್ರಮ್ ರಾಂಧವಾ ವಿಡಿಯೋ ಮೂಲಕ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದರು.

ವಿಕ್ರಮ್​ ರಾಂಧವ ಅವರಿಗೆ ಬಿಜೆಪಿ ಶೋಕಾಸ್ ನೋಟಿಸ್​ ನೀಡಿದೆ. ನಿಮ್ಮ ಹೇಳಿಕೆಯ ಬಗ್ಗೆ 48 ಗಂಟೆಗಳಲ್ಲಿ ಸ್ಪಷ್ಟನೆ ನೀಡಿ ಮತ್ತು ಸಾರ್ವಜನಿಕವಾಗಿ ಕ್ಷಮೆ ಕೇಳಿ ಎಂದು ಹೇಳಿದೆ.  ಟಿ 20 ವಿಶ್ವಕಪ್​ ಪಂದ್ಯಾವಳಿಯಲ್ಲಿ ಪಾಕಿಸ್ತಾನ ಗೆದ್ದಾಗ ಕಾಶ್ಮೀರದ ವಿವಿಧೆಡೆ ಸಂಭ್ರಮಿಸಿದ್ದನ್ನು ವಿರೋಧಿಸುವ ಭರದಲ್ಲಿ ವಿಕ್ರಮ್​ ರಾಂಧವ ಕಾಶ್ಮೀರದ ಮುಸ್ಲಿಮರ ಬಗ್ಗೆ ಕೀಳಾಗಿ ಕಾಮೆಂಟ್​ ಮಾಡಿದ್ದರು. ಅದನ್ನು ವಿರೋಧಿಸಿರುವ ಪಕ್ಷ, ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆದ ವಿಡಿಯೋದಲ್ಲಿ ನೀವು ನಿರ್ದಿಷ್ಟ ಸಮುದಾಯವೊಂದರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ಕಾಣುತ್ತಿದೆ. ಇದನ್ನು ನಮ್ಮ ಪಕ್ಷ ಒಪ್ಪಿಕೊಳ್ಳಲು ಸಾಧ್ಯವಿಲ್ಲ, ನಮ್ಮ ಪಕ್ಷಕ್ಕೆ ಮುಜುಗರ ತರುವಂತ ವಿಚಾರ ಎಂದು ನೋಟಿಸ್​​ನಲ್ಲಿ ಉಲ್ಲೇಖಿಸಿದೆ.

ಅಂದಹಾಗೆ ಬಿಜೆಪಿ ಈ ವರ್ಷದಲ್ಲೇ ಇದು ಎರಡನೇ ಬಾರಿಗೆ ರಾಂಧವಾಗೆ ಶೋಕಾಸ್​ ನೋಟಿಸ್​ ನೀಡುತ್ತಿದೆ. ಈ ಹಿಂದೆ ರಾಂಧವಾ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್​ ವಿರುದ್ಧ ಮಾತನಾಡಿದ್ದರು. ಜಿತೇಂದ್ರ ಸಿಂಗ್​ ಅಕ್ರಮ ಗಣಿಗಾರಿಕೆ ಮತ್ತು ಬೃಹತ್​ ಕಿಕ್​ಬ್ಯಾಕ್​ಗಳನ್ನು ಪೋಷಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಆಗಲೂ ಸಹ ಬಿಜೆಪಿ ಅಸಮಾಧಾನ ಹೊರಹಾಕಿತ್ತು. ನಿಮ್ಮ ಹೇಳಿಕೆಯಿಂದ ಪಕ್ಷಕ್ಕೆ ಕಳಂಕ ತಂದಿದ್ದೀರಿ ಎಂದು ಶೋಕಾಸ್ ನೋಟಿಸ್​ನಲ್ಲಿ ಹೇಳಿತ್ತು.

ಇದನ್ನೂ ಓದಿ: NEET ಫಲಿತಾಂಶ 2021: ಕಟ್ ಆಫ್ ಮಾರ್ಕ್, ಲಿಂಗ ಮತ್ತು ಜಾತಿ ಆಧಾರಿತ ವರ್ಗೀಕರಣ ಹೇಗಿದೆ?

ಹಾನಗಲ್, ಸಿಂದಗಿ ಉಪಚುನಾವಣೆ ಅಂತಿಮ ಫಲಿತಾಂಶ: ಯಾರಿಗೆ ಎಷ್ಟು ಅಂತರದ ಗೆಲುವು? ಇಲ್ಲಿದೆ ವಿವರ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ