AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರಿಗೆ ಅವಹೇಳನ ಮಾಡಿದ್ದ ಬಿಜೆಪಿ ನಾಯಕನಿಗೆ ಶೋಕಾಸ್​ ನೋಟಿಸ್​ ನೀಡಿದ ಪಕ್ಷ; ಎಫ್​ಐಆರ್​ ದಾಖಲು

ಟಿ 20 ವಿಶ್ವಕಪ್​ ಪಂದ್ಯಾವಳಿಯಲ್ಲಿ ಪಾಕಿಸ್ತಾನ ಗೆದ್ದಾಗ ಕಾಶ್ಮೀರದ ವಿವಿಧೆಡೆ ಸಂಭ್ರಮಿಸಿದ್ದನ್ನು ವಿರೋಧಿಸುವ ಭರದಲ್ಲಿ ವಿಕ್ರಮ್​ ರಾಂಧವ ಕಾಶ್ಮೀರದ ಮುಸ್ಲಿಮರ ಬಗ್ಗೆ ಕೀಳಾಗಿ ಕಾಮೆಂಟ್​ ಮಾಡಿದ್ದರು.

ಮುಸ್ಲಿಮರಿಗೆ ಅವಹೇಳನ ಮಾಡಿದ್ದ ಬಿಜೆಪಿ ನಾಯಕನಿಗೆ ಶೋಕಾಸ್​ ನೋಟಿಸ್​ ನೀಡಿದ ಪಕ್ಷ; ಎಫ್​ಐಆರ್​ ದಾಖಲು
ವಿಕ್ರಮ್​ ರಾಂಧವಾ
TV9 Web
| Edited By: |

Updated on: Nov 02, 2021 | 5:40 PM

Share

ಜಮ್ಮು: ಮುಸ್ಲಿಮರ ವಿರುದ್ಧ ಅನುಚಿತವಾಗಿ ಮಾತನಾಡಿದ ಬಿಜೆಪಿ ನಾಯಕ (BJP Leader) ವಿಕ್ರಮ್​ ರಾಂಧವಾ ವಿರುದ್ಧ ಜಮ್ಮು-ಕಾಶ್ಮೀರ (Jammu-Kashmir)ದಲ್ಲಿ ಪ್ರಕರಣ ದಾಖಲಾಗಿದೆ. ಇವರ ಹೇಳಿಕೆಯನ್ನು ಬಿಜೆಪಿ ಪಕ್ಷವೇ ವಿರೋಧಿಸಿದೆ. ರಾಂಧವಾ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವುದಿಲ್ಲ. ಅವರು ಕೂಡಲೇ ಕ್ಷಮೆ ಕೋರಬೇಕು ಎಂದು ಪಕ್ಷ ಹೇಳಿದೆ. ಪಾಕಿಸ್ತಾನ ಟಿ-20 ವಿಶ್ವಕಪ್​ ಪಂದ್ಯದಲ್ಲಿ ಗೆದ್ದ ಬಳಿಕ,  ಜಮ್ಮು-ಕಾಶ್ಮೀರದ ಮಾಜಿ ಶಾಸಕ ವಿಕ್ರಮ್ ರಾಂಧವಾ ವಿಡಿಯೋ ಮೂಲಕ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದರು.

ವಿಕ್ರಮ್​ ರಾಂಧವ ಅವರಿಗೆ ಬಿಜೆಪಿ ಶೋಕಾಸ್ ನೋಟಿಸ್​ ನೀಡಿದೆ. ನಿಮ್ಮ ಹೇಳಿಕೆಯ ಬಗ್ಗೆ 48 ಗಂಟೆಗಳಲ್ಲಿ ಸ್ಪಷ್ಟನೆ ನೀಡಿ ಮತ್ತು ಸಾರ್ವಜನಿಕವಾಗಿ ಕ್ಷಮೆ ಕೇಳಿ ಎಂದು ಹೇಳಿದೆ.  ಟಿ 20 ವಿಶ್ವಕಪ್​ ಪಂದ್ಯಾವಳಿಯಲ್ಲಿ ಪಾಕಿಸ್ತಾನ ಗೆದ್ದಾಗ ಕಾಶ್ಮೀರದ ವಿವಿಧೆಡೆ ಸಂಭ್ರಮಿಸಿದ್ದನ್ನು ವಿರೋಧಿಸುವ ಭರದಲ್ಲಿ ವಿಕ್ರಮ್​ ರಾಂಧವ ಕಾಶ್ಮೀರದ ಮುಸ್ಲಿಮರ ಬಗ್ಗೆ ಕೀಳಾಗಿ ಕಾಮೆಂಟ್​ ಮಾಡಿದ್ದರು. ಅದನ್ನು ವಿರೋಧಿಸಿರುವ ಪಕ್ಷ, ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆದ ವಿಡಿಯೋದಲ್ಲಿ ನೀವು ನಿರ್ದಿಷ್ಟ ಸಮುದಾಯವೊಂದರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ಕಾಣುತ್ತಿದೆ. ಇದನ್ನು ನಮ್ಮ ಪಕ್ಷ ಒಪ್ಪಿಕೊಳ್ಳಲು ಸಾಧ್ಯವಿಲ್ಲ, ನಮ್ಮ ಪಕ್ಷಕ್ಕೆ ಮುಜುಗರ ತರುವಂತ ವಿಚಾರ ಎಂದು ನೋಟಿಸ್​​ನಲ್ಲಿ ಉಲ್ಲೇಖಿಸಿದೆ.

ಅಂದಹಾಗೆ ಬಿಜೆಪಿ ಈ ವರ್ಷದಲ್ಲೇ ಇದು ಎರಡನೇ ಬಾರಿಗೆ ರಾಂಧವಾಗೆ ಶೋಕಾಸ್​ ನೋಟಿಸ್​ ನೀಡುತ್ತಿದೆ. ಈ ಹಿಂದೆ ರಾಂಧವಾ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್​ ವಿರುದ್ಧ ಮಾತನಾಡಿದ್ದರು. ಜಿತೇಂದ್ರ ಸಿಂಗ್​ ಅಕ್ರಮ ಗಣಿಗಾರಿಕೆ ಮತ್ತು ಬೃಹತ್​ ಕಿಕ್​ಬ್ಯಾಕ್​ಗಳನ್ನು ಪೋಷಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಆಗಲೂ ಸಹ ಬಿಜೆಪಿ ಅಸಮಾಧಾನ ಹೊರಹಾಕಿತ್ತು. ನಿಮ್ಮ ಹೇಳಿಕೆಯಿಂದ ಪಕ್ಷಕ್ಕೆ ಕಳಂಕ ತಂದಿದ್ದೀರಿ ಎಂದು ಶೋಕಾಸ್ ನೋಟಿಸ್​ನಲ್ಲಿ ಹೇಳಿತ್ತು.

ಇದನ್ನೂ ಓದಿ: NEET ಫಲಿತಾಂಶ 2021: ಕಟ್ ಆಫ್ ಮಾರ್ಕ್, ಲಿಂಗ ಮತ್ತು ಜಾತಿ ಆಧಾರಿತ ವರ್ಗೀಕರಣ ಹೇಗಿದೆ?

ಹಾನಗಲ್, ಸಿಂದಗಿ ಉಪಚುನಾವಣೆ ಅಂತಿಮ ಫಲಿತಾಂಶ: ಯಾರಿಗೆ ಎಷ್ಟು ಅಂತರದ ಗೆಲುವು? ಇಲ್ಲಿದೆ ವಿವರ

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ