AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ಪಿ ಅಭ್ಯರ್ಥಿಗೆ ಹಣದ ಆಮಿಷ ಒಡ್ಡಿದ ಆರೋಪ; ಕೇರಳ ಬಿಜೆಪಿ ಅಧ್ಯಕ್ಷನ ವಿರುದ್ಧ ಎಫ್​ಐಆರ್​

ಬಿಜೆಪಿ ಈ ಆರೋಪವನ್ನು ತಳ್ಳಿ ಹಾಕಿದೆ. ನಾವು ನಾಮಪತ್ರ ಹಿಂಪಡೆಯುವಂತೆ ಯಾರಿಗೂ ಹೇಳಿಲ್ಲ. ಹಣ ಕೊಡುತ್ತೇವೆ ಎಂದೂ ಆಸೆ ತೋರಿಸಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ.

ಬಿಎಸ್​ಪಿ ಅಭ್ಯರ್ಥಿಗೆ ಹಣದ ಆಮಿಷ ಒಡ್ಡಿದ ಆರೋಪ; ಕೇರಳ ಬಿಜೆಪಿ ಅಧ್ಯಕ್ಷನ ವಿರುದ್ಧ ಎಫ್​ಐಆರ್​
ಕೆ.ಸುರೇಂದ್ರನ್​
TV9 Web
| Edited By: |

Updated on:Jun 07, 2021 | 3:19 PM

Share

ತಿರುವನಂತಪುರ: ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್​ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆ ಬಿಎಸ್​ಪಿ ಅಭ್ಯರ್ಥಿಗೆ ನಾಮಪತ್ರ ಹಿಂಪಡೆಯಲು ಹಣದ ಆಮಿಷ ಒಡ್ಡಿದ್ದಾರೆ ಎಂಬ ಆರೋಪದಡಿ ಈ ಪ್ರಕರಣ ದಾಖಲಾಗಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ  ವಿಧಾನಸಭಾ ಕ್ಷೇತ್ರದ ಬಿಎಸ್​​ಪಿ ಅಭ್ಯರ್ಥಿಯಾಗಿದ್ದ ಕೆ.ಸುಂದರ ಈ ಆರೋಪ ಮಾಡಿದ್ದಾರೆ.

ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್​​ಪಿಯಿಂದ ಕೆ.ಸುಂದರ ಸ್ಪರ್ಧಿಸಿದ್ದರು. ಹಾಗೇ ಬಿಜೆಪಿಯಿಂದ ಕೆ.ಸುರೇಂದ್ರನ್​​ ಕಣಕ್ಕೆ ಇಳಿದಿದ್ದರು. ತಾನೇ ಗೆಲ್ಲಬೇಕು ಎಂಬ ಕಾರಣಕ್ಕೆ ನನಗೆ ಹಣ, ಮನೆಯ ಆಮಿಷ ತೋರಿದ್ದಾರೆಂದು ಕೆ.ಸುಂದರ್ ಆರೋಪಿಸಿದ್ದಾರೆ. ನಾಮಪತ್ರ ಹಿಂಪಡೆದರೆ 2.5 ಲಕ್ಷ ರೂಪಾಯಿ ಮತ್ತು ಒಂದು ಸ್ಮಾರ್ಟ್ ಫೋನ್​ ಕೊಡುತ್ತೇನೆ ಎಂದು ಹೇಳಿದ್ದರು. ಹಾಗೇ, ಈ ಕ್ಷೇತ್ರದಲ್ಲಿ ತಾನು ಗೆದ್ದರೆ, 15 ಲಕ್ಷ ರೂ. ಜತೆ ಕರ್ನಾಟಕದಲ್ಲಿ ಒಂದು ಮನೆ, ವೈನ್​ ಶಾಪ್​ ಕೊಡಿಸುತ್ತೇನೆ ಎಂದೂ ಭರವಸೆ ನೀಡಿದ್ದರು. ಆದರೆ ಚುನಾವಣೆ ಮುಗಿಯುತ್ತಿದ್ದಂತೆ ಯಾರೂ ನನಗೆ ಕರೆ ಮಾಡಲಿಲ್ಲ ಎಂದು ಸುಂದರ್​ ತಿಳಿಸಿದ್ದಾರೆ.

ಬಿಜೆಪಿ ಈ ಆರೋಪವನ್ನು ತಳ್ಳಿ ಹಾಕಿದೆ. ನಾವು ನಾಮಪತ್ರ ಹಿಂಪಡೆಯುವಂತೆ ಯಾರಿಗೂ ಹೇಳಿಲ್ಲ. ಹಣ ಕೊಡುತ್ತೇವೆ ಎಂದೂ ಆಸೆ ತೋರಿಸಿಲ್ಲ. ಕೆ.ಸುಂದರ್​ ಅವರ್ಯಾಕೆ ನಾಮಪತ್ರ ವಾಪಸ್​ ಪಡೆದಿದ್ದಾರೆ ಎಂಬುದನ್ನೂ ಅವರೇ ಈ ಹಿಂದೆ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಸಿಪಿಐ(ಎಂ) ಅಥವಾ ಐಯುಎಂಎಲ್​​ ಪಕ್ಷಗಳ ಒತ್ತಡದಿಂದಾಗಿ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆಂಬುದು ಸ್ಪಷ್ಟವಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್​ ಹೇಳಿದ್ದಾರೆ. ಕೇರಳದಲ್ಲಿ ಈ ಬಾರಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. 2016ರಲ್ಲಿ ಗೆದ್ದಿದ್ದ ನೆಮಾಮ್​ ಕ್ಷೇತ್ರವೂ ಈ ಬಾರಿ ಕೈಜಾರಿದೆ. ಇನ್ನೂ ಈ ವಿಧಾನಸಭಾ ಚುನಾವಣೆಯಲ್ಲಿ ಕೇರಳ ಬಿಜೆಪಿ ಘಟಕ ಅಪಾರ ಪ್ರಮಾಣದಲ್ಲಿ ಕಪ್ಪುಹಣ ವಿನಿಯೋಗಿಸಿದೆ ಎಂಬ ಟೀಕೆಯೂ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; ಪ್ರತಿಷ್ಠಿತ ಕಾಲೇಜುಗಳಲ್ಲಿ ಹೆಚ್ಚಿದ ಸೀಟು ಬೇಡಿಕೆ

Published On - 1:40 pm, Mon, 7 June 21

Follow Us
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್