Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ಪಿ ಅಭ್ಯರ್ಥಿಗೆ ಹಣದ ಆಮಿಷ ಒಡ್ಡಿದ ಆರೋಪ; ಕೇರಳ ಬಿಜೆಪಿ ಅಧ್ಯಕ್ಷನ ವಿರುದ್ಧ ಎಫ್​ಐಆರ್​

ಬಿಜೆಪಿ ಈ ಆರೋಪವನ್ನು ತಳ್ಳಿ ಹಾಕಿದೆ. ನಾವು ನಾಮಪತ್ರ ಹಿಂಪಡೆಯುವಂತೆ ಯಾರಿಗೂ ಹೇಳಿಲ್ಲ. ಹಣ ಕೊಡುತ್ತೇವೆ ಎಂದೂ ಆಸೆ ತೋರಿಸಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ.

ಬಿಎಸ್​ಪಿ ಅಭ್ಯರ್ಥಿಗೆ ಹಣದ ಆಮಿಷ ಒಡ್ಡಿದ ಆರೋಪ; ಕೇರಳ ಬಿಜೆಪಿ ಅಧ್ಯಕ್ಷನ ವಿರುದ್ಧ ಎಫ್​ಐಆರ್​
ಕೆ.ಸುರೇಂದ್ರನ್​
Follow us
TV9 Web
| Updated By: Lakshmi Hegde

Updated on:Jun 07, 2021 | 3:19 PM

ತಿರುವನಂತಪುರ: ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್​ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆ ಬಿಎಸ್​ಪಿ ಅಭ್ಯರ್ಥಿಗೆ ನಾಮಪತ್ರ ಹಿಂಪಡೆಯಲು ಹಣದ ಆಮಿಷ ಒಡ್ಡಿದ್ದಾರೆ ಎಂಬ ಆರೋಪದಡಿ ಈ ಪ್ರಕರಣ ದಾಖಲಾಗಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ  ವಿಧಾನಸಭಾ ಕ್ಷೇತ್ರದ ಬಿಎಸ್​​ಪಿ ಅಭ್ಯರ್ಥಿಯಾಗಿದ್ದ ಕೆ.ಸುಂದರ ಈ ಆರೋಪ ಮಾಡಿದ್ದಾರೆ.

ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್​​ಪಿಯಿಂದ ಕೆ.ಸುಂದರ ಸ್ಪರ್ಧಿಸಿದ್ದರು. ಹಾಗೇ ಬಿಜೆಪಿಯಿಂದ ಕೆ.ಸುರೇಂದ್ರನ್​​ ಕಣಕ್ಕೆ ಇಳಿದಿದ್ದರು. ತಾನೇ ಗೆಲ್ಲಬೇಕು ಎಂಬ ಕಾರಣಕ್ಕೆ ನನಗೆ ಹಣ, ಮನೆಯ ಆಮಿಷ ತೋರಿದ್ದಾರೆಂದು ಕೆ.ಸುಂದರ್ ಆರೋಪಿಸಿದ್ದಾರೆ. ನಾಮಪತ್ರ ಹಿಂಪಡೆದರೆ 2.5 ಲಕ್ಷ ರೂಪಾಯಿ ಮತ್ತು ಒಂದು ಸ್ಮಾರ್ಟ್ ಫೋನ್​ ಕೊಡುತ್ತೇನೆ ಎಂದು ಹೇಳಿದ್ದರು. ಹಾಗೇ, ಈ ಕ್ಷೇತ್ರದಲ್ಲಿ ತಾನು ಗೆದ್ದರೆ, 15 ಲಕ್ಷ ರೂ. ಜತೆ ಕರ್ನಾಟಕದಲ್ಲಿ ಒಂದು ಮನೆ, ವೈನ್​ ಶಾಪ್​ ಕೊಡಿಸುತ್ತೇನೆ ಎಂದೂ ಭರವಸೆ ನೀಡಿದ್ದರು. ಆದರೆ ಚುನಾವಣೆ ಮುಗಿಯುತ್ತಿದ್ದಂತೆ ಯಾರೂ ನನಗೆ ಕರೆ ಮಾಡಲಿಲ್ಲ ಎಂದು ಸುಂದರ್​ ತಿಳಿಸಿದ್ದಾರೆ.

ಬಿಜೆಪಿ ಈ ಆರೋಪವನ್ನು ತಳ್ಳಿ ಹಾಕಿದೆ. ನಾವು ನಾಮಪತ್ರ ಹಿಂಪಡೆಯುವಂತೆ ಯಾರಿಗೂ ಹೇಳಿಲ್ಲ. ಹಣ ಕೊಡುತ್ತೇವೆ ಎಂದೂ ಆಸೆ ತೋರಿಸಿಲ್ಲ. ಕೆ.ಸುಂದರ್​ ಅವರ್ಯಾಕೆ ನಾಮಪತ್ರ ವಾಪಸ್​ ಪಡೆದಿದ್ದಾರೆ ಎಂಬುದನ್ನೂ ಅವರೇ ಈ ಹಿಂದೆ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಸಿಪಿಐ(ಎಂ) ಅಥವಾ ಐಯುಎಂಎಲ್​​ ಪಕ್ಷಗಳ ಒತ್ತಡದಿಂದಾಗಿ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆಂಬುದು ಸ್ಪಷ್ಟವಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್​ ಹೇಳಿದ್ದಾರೆ. ಕೇರಳದಲ್ಲಿ ಈ ಬಾರಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. 2016ರಲ್ಲಿ ಗೆದ್ದಿದ್ದ ನೆಮಾಮ್​ ಕ್ಷೇತ್ರವೂ ಈ ಬಾರಿ ಕೈಜಾರಿದೆ. ಇನ್ನೂ ಈ ವಿಧಾನಸಭಾ ಚುನಾವಣೆಯಲ್ಲಿ ಕೇರಳ ಬಿಜೆಪಿ ಘಟಕ ಅಪಾರ ಪ್ರಮಾಣದಲ್ಲಿ ಕಪ್ಪುಹಣ ವಿನಿಯೋಗಿಸಿದೆ ಎಂಬ ಟೀಕೆಯೂ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; ಪ್ರತಿಷ್ಠಿತ ಕಾಲೇಜುಗಳಲ್ಲಿ ಹೆಚ್ಚಿದ ಸೀಟು ಬೇಡಿಕೆ

Published On - 1:40 pm, Mon, 7 June 21

ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್