AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid-19: ಜನರ ಬಳಿ ಹಣ ಪಡೆದು ನಕಲಿ ಕೋವಿಡ್​-19 ನೆಗೆಟಿವ್​ ವರದಿ ನೀಡುತ್ತಿದ್ದ ಕಿರಾತಕ ಅಂದರ್, ಯಾವೂರಲ್ಲಿ?

ಗುಜರಾತ್‌ನ ರಾಜ್‌ಕೋಟ್ ನಗರದ ಜನರ ಬಳಿ ಹಣ ಪಡೆದು ನಕಲಿ ಕೋವಿಡ್​-19 ನೆಗೆಟಿವ್​ ವರದಿಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಪ್ರಯೋಗಾಲಯದ ಏಜೆಂಟ್​ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

Covid-19: ಜನರ ಬಳಿ ಹಣ ಪಡೆದು ನಕಲಿ ಕೋವಿಡ್​-19 ನೆಗೆಟಿವ್​ ವರದಿ ನೀಡುತ್ತಿದ್ದ ಕಿರಾತಕ ಅಂದರ್, ಯಾವೂರಲ್ಲಿ?
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
|

Updated on: Mar 13, 2021 | 5:37 PM

Share

ರಾಜ್‌ಕೋಟ್: ಗುಜರಾತ್‌ನ ರಾಜ್‌ಕೋಟ್ ನಗರದ ಜನರ ಬಳಿ ಹಣ ಪಡೆದು ನಕಲಿ ಕೋವಿಡ್​-19 ನೆಗೆಟಿವ್​ ವರದಿಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಪ್ರಯೋಗಾಲಯದ ಏಜೆಂಟ್​ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿ ಪರಾಗ್ ಜೋಶಿ ತಲಾ 1,500 ರೂ.ಗಳಿಗೆ ಅಗತ್ಯವಿರುವ ಜನರಿಗೆ ಕೋವಿಡ್​-19 ನೆಗೆಟಿವ್ ಪ್ರಮಾಣಪತ್ರಗಳನ್ನು ಮಾರಾಟ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ.

ಉಪ ವೈದ್ಯಕೀಯ ಅಧಿಕಾರಿ ಡಾ. ಪರಾಗ್ ಚುನಾರಾ ಅವರು ನೀಡಿದ ದೂರಿನ ಆಧಾರದ ಮೇಲೆ, ಜೋಶಿ ಮತ್ತು ಇತರ ಅಪರಿಚಿತ ಆರೋಪಿಗಳ ವಿರುದ್ಧ ಗಾಂಧಿಗ್ರಾಮ್ ಪೊಲೀಸ್ ಠಾಣೆಯಲ್ಲಿ ಐಪಿಸಿ, ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಗುಜರಾತ್ ವೈದ್ಯಕೀಯ ವೈದ್ಯರ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ವ್ಯಾಬ್ ಮಾದರಿಗಳನ್ನು ಸಂಗ್ರಹಿಸದೆ ಪ್ರಮಾಣಪತ್ರ ನೀಡುತ್ತಿದ್ದ ಆರೋಪಿ ಜೋಶಿ ಅನಧಿಕೃತ ಸ್ವ್ಯಾಬ್ ಮಾದರಿ ಸಂಗ್ರಹ ಕೇಂದ್ರವನ್ನು ನಡೆಸುತ್ತಿದ್ದು, ಜನರ ಬಳಿ ಅವರ ಸ್ವ್ಯಾಬ್ ಮಾದರಿಗಳನ್ನು ಸಂಗ್ರಹಿಸದೆ ಅವರಿಗೆ ಕೋವಿಡ್​-19 ನೆಗೆಟಿವ್ ಪ್ರಮಾಣಪತ್ರಗಳನ್ನು ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಅಲ್ಲದೆ ಬೇರೊಬ್ಬರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸುವುದರ ಜೊತೆಗೆ ಯಾರಿಗೆ ಕೋವಿಡ್​-19 ನೆಗೆಟಿವ್ ಪ್ರಮಾಣಪತ್ರ ಅವಶ್ಯಕವಾಗಿರುತ್ತದೊ ಅಂತಹವರ ದಾಖಲೆಗಳನ್ನು ಮಾದರಿ ಜೊತೆಗೆ ಪ್ರಯೋಗಾಲಯಕ್ಕೆ ಕಳುಹಿಸಿಕೊಡುತ್ತಿದ್ದನಂತೆ.

ಯಾವುದೇ ಪರವಾನಗಿ ಇರಲಿಲ್ಲ.. ನಂತರ ಪ್ರಯೋಗಾಲಯದ ಸಿಬ್ಬಂದಿಗಳು ಯಾರ ಹೆಸರಲ್ಲಿ ಮಾದರಿ ಪರೀಕ್ಷೆಗೆ ಬಂದಿತ್ತೋ, ಆ ವ್ಯಕ್ತಿಯ ಹೆಸರಿನಲ್ಲಿ ವರದಿಯನ್ನು ನೀಡುತ್ತಿದ್ದರಂತೆ. ಇನ್ನೊಂದು ವಿಚಾರವೆಂದರೆ ಈ ಆರೋಪಿಗಳಿಗೆ ಮಾದರಿ ಸಂಗ್ರಹ ಕೇಂದ್ರವನ್ನು ನಡೆಸಲು ಯಾವುದೇ ಪರವಾನಗಿ ಇರಲಿಲ್ಲ. ಆದ್ದರಿಂದ ಗುಜರಾತ್ ವೈದ್ಯಕೀಯ ವೈದ್ಯರ ಕಾಯ್ದೆಯಡಿ ಕೂಡ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಈ ವರ್ಷದಲ್ಲೇ ಅತ್ಯಂತ ಹೆಚ್ಚು ಕೊರೊನಾ ಕೇಸ್​​ಗಳು ಇಂದು ದಾಖಲು; ಮಹಾರಾಷ್ಟ್ರದ ಹಲವು ನಗರಗಳು ಮತ್ತೆ ಲಾಕ್​

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್