AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Airport: ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಪೈಸ್​​ಜೆಟ್ ವಿಮಾನದಲ್ಲಿ ಅಗ್ನಿ ಅವಘಡ

ಘಟನೆಯನ್ನು ಟ್ಯಾಕ್ಸಿವೇಯಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಮೊಬೈಲ್ ಕ್ಯಾಮರಾದಲ್ಲಿ ಚಿತ್ರೀಕರಿಸಿದ್ದಾರೆ. ದೂರದಲ್ಲಿ ನಿಂತಿದ್ದ ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಹಾಗೂ ದಟ್ಟ ಹೊಗೆ ಹೊರಸೂಸುತ್ತಿರುವುದು ವಿಡಿಯೋದಲ್ಲಿ ಕಾಣಿಸಿದೆ.

Delhi Airport: ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಪೈಸ್​​ಜೆಟ್ ವಿಮಾನದಲ್ಲಿ ಅಗ್ನಿ ಅವಘಡ
ಚಿತ್ರ ಕೃಪೆ; ಟ್ವಿಟರ್ ವಿಡಿಯೋದ ಸ್ಕ್ರೀನ್​ಗ್ರ್ಯಾಬ್Image Credit source: Twitter
ಗಣಪತಿ ಶರ್ಮಾ
|

Updated on: Jul 25, 2023 | 9:57 PM

Share

ನವದೆಹಲಿ: ನಿರ್ವಹಣಾ ಕಾರ್ಯದ ಸಂದರ್ಭದಲ್ಲಿ ಸ್ಪೈಸ್​​​​ಜೆಟ್ (SpiceJet) ವಿಮಾನವೊಂದರಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ (Delhi Airport) ಮಂಗಳವಾರ ಸಂಜೆ ಸಂಭವಿಸಿದೆ. ಅದೃಷ್ಟವಶಾತ್ ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಸ್ಪೈಸ್​​ಜೆಟ್ ವಿಮಾನಯಾನ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಎಟಿಆರ್ ವಿಮಾನದ ನಿರ್ವಹಣಾ ಕಾರ್ಯ ಪ್ರಗತಿಯಲ್ಲಿದ್ದಾಗ ಒಂದು ಎಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಎಂಜಿನಿಯರ್​​ಗಳ ಗಮನಕ್ಕೆ ಬಂದಿದೆ. ತಕ್ಷಣವೇ ಬೆಂಕಿ ನಂದಿಸಲು ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಸಲಾಯಿತು ಎಂದು ‘ಎಎನ್​ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಘಟನೆಯನ್ನು ಟ್ಯಾಕ್ಸಿವೇಯಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಮೊಬೈಲ್ ಕ್ಯಾಮರಾದಲ್ಲಿ ಚಿತ್ರೀಕರಿಸಿದ್ದಾರೆ. ದೂರದಲ್ಲಿ ನಿಂತಿದ್ದ ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಹಾಗೂ ದಟ್ಟ ಹೊಗೆ ಹೊರಸೂಸುತ್ತಿರುವುದು ವಿಡಿಯೋದಲ್ಲಿ ಕಾಣಿಸಿದೆ.

ಇದನ್ನೂ ಓದಿ: SpiceJet: ಸ್ಪೈಸ್​ಜೆಟ್ ಬಿಕ್ಕಟ್ಟು; ನ್ಯಾಯಮಂಡಳಿ ಬಳಿ ಇನ್ಸಾಲ್ವೆನ್ಸಿ ಕ್ರಮಕ್ಕೆ ಮನವಿ ಮಾಡಿದ ವಿಮಾನ ಗುತ್ತಿಗೆ ಸಂಸ್ಥೆ; ನನಗೇನೂ ಸಮಸ್ಯೆ ಇಲ್ಲ ಎನ್ನುವ ಸ್ಪೈಸ್​ಜೆಟ್

ಸ್ಪೈಸ್​​ಜೆಟ್ ಅನ್ನು ವಿಸ್ತರಿತ ಕಣ್ಗಾವಲು ವ್ಯಾಪ್ತಿಯಿಂದ ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ (DGCA) ಹೊರಗಿಟ್ಟ ದಿನವೇ ಈ ಘಟನೆ ಸಂಭವಿಸಿದೆ. ಹಲವು ಸುತ್ತಿನ ತಪಾಸಣೆಯ ಬಳಿಕ ಡಿಜಿಸಿಎ ಈ ಕ್ರಮ ಕೈಗೊಂಡಿತ್ತು.

ವಿಮಾನಕ್ಕೆ ಬೆಂಕಿಹೊತ್ತಿದ ಘಟನೆ ಬಗ್ಗೆ ಡಿಜಿಸಿಎ ತನಿಖೆಗೆ ಆದೇಶಿಸಿದೆ.

ದೇಶದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ