AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Airport: ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಪೈಸ್​​ಜೆಟ್ ವಿಮಾನದಲ್ಲಿ ಅಗ್ನಿ ಅವಘಡ

ಘಟನೆಯನ್ನು ಟ್ಯಾಕ್ಸಿವೇಯಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಮೊಬೈಲ್ ಕ್ಯಾಮರಾದಲ್ಲಿ ಚಿತ್ರೀಕರಿಸಿದ್ದಾರೆ. ದೂರದಲ್ಲಿ ನಿಂತಿದ್ದ ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಹಾಗೂ ದಟ್ಟ ಹೊಗೆ ಹೊರಸೂಸುತ್ತಿರುವುದು ವಿಡಿಯೋದಲ್ಲಿ ಕಾಣಿಸಿದೆ.

Delhi Airport: ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಪೈಸ್​​ಜೆಟ್ ವಿಮಾನದಲ್ಲಿ ಅಗ್ನಿ ಅವಘಡ
ಚಿತ್ರ ಕೃಪೆ; ಟ್ವಿಟರ್ ವಿಡಿಯೋದ ಸ್ಕ್ರೀನ್​ಗ್ರ್ಯಾಬ್Image Credit source: Twitter
ಗಣಪತಿ ಶರ್ಮಾ
|

Updated on: Jul 25, 2023 | 9:57 PM

Share

ನವದೆಹಲಿ: ನಿರ್ವಹಣಾ ಕಾರ್ಯದ ಸಂದರ್ಭದಲ್ಲಿ ಸ್ಪೈಸ್​​​​ಜೆಟ್ (SpiceJet) ವಿಮಾನವೊಂದರಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ (Delhi Airport) ಮಂಗಳವಾರ ಸಂಜೆ ಸಂಭವಿಸಿದೆ. ಅದೃಷ್ಟವಶಾತ್ ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಸ್ಪೈಸ್​​ಜೆಟ್ ವಿಮಾನಯಾನ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಎಟಿಆರ್ ವಿಮಾನದ ನಿರ್ವಹಣಾ ಕಾರ್ಯ ಪ್ರಗತಿಯಲ್ಲಿದ್ದಾಗ ಒಂದು ಎಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಎಂಜಿನಿಯರ್​​ಗಳ ಗಮನಕ್ಕೆ ಬಂದಿದೆ. ತಕ್ಷಣವೇ ಬೆಂಕಿ ನಂದಿಸಲು ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಸಲಾಯಿತು ಎಂದು ‘ಎಎನ್​ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಘಟನೆಯನ್ನು ಟ್ಯಾಕ್ಸಿವೇಯಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಮೊಬೈಲ್ ಕ್ಯಾಮರಾದಲ್ಲಿ ಚಿತ್ರೀಕರಿಸಿದ್ದಾರೆ. ದೂರದಲ್ಲಿ ನಿಂತಿದ್ದ ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಹಾಗೂ ದಟ್ಟ ಹೊಗೆ ಹೊರಸೂಸುತ್ತಿರುವುದು ವಿಡಿಯೋದಲ್ಲಿ ಕಾಣಿಸಿದೆ.

ಇದನ್ನೂ ಓದಿ: SpiceJet: ಸ್ಪೈಸ್​ಜೆಟ್ ಬಿಕ್ಕಟ್ಟು; ನ್ಯಾಯಮಂಡಳಿ ಬಳಿ ಇನ್ಸಾಲ್ವೆನ್ಸಿ ಕ್ರಮಕ್ಕೆ ಮನವಿ ಮಾಡಿದ ವಿಮಾನ ಗುತ್ತಿಗೆ ಸಂಸ್ಥೆ; ನನಗೇನೂ ಸಮಸ್ಯೆ ಇಲ್ಲ ಎನ್ನುವ ಸ್ಪೈಸ್​ಜೆಟ್

ಸ್ಪೈಸ್​​ಜೆಟ್ ಅನ್ನು ವಿಸ್ತರಿತ ಕಣ್ಗಾವಲು ವ್ಯಾಪ್ತಿಯಿಂದ ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ (DGCA) ಹೊರಗಿಟ್ಟ ದಿನವೇ ಈ ಘಟನೆ ಸಂಭವಿಸಿದೆ. ಹಲವು ಸುತ್ತಿನ ತಪಾಸಣೆಯ ಬಳಿಕ ಡಿಜಿಸಿಎ ಈ ಕ್ರಮ ಕೈಗೊಂಡಿತ್ತು.

ವಿಮಾನಕ್ಕೆ ಬೆಂಕಿಹೊತ್ತಿದ ಘಟನೆ ಬಗ್ಗೆ ಡಿಜಿಸಿಎ ತನಿಖೆಗೆ ಆದೇಶಿಸಿದೆ.

ದೇಶದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ