AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಹರ್ಯಾಣದ ಖಾಸಗಿ ಬಸ್‌ಗಳ ವರ್ಕ್‌ಶಾಪ್‌ನಲ್ಲಿ ಅಗ್ನಿ ಅವಘಡ, 3 ಬಸ್‌ಗಳು ಬೆಂಕಿಗೆ ಆಹುತಿ

ನಾವು ಬೆಂಕಿಯನ್ನು ತ್ವರಿತವಾಗಿ ನಿಯಂತ್ರಿಸಿದ್ದೇವೆ, ಅದನ್ನು ಹರಡಲು ಬಿಡಲಿಲ್ಲ. ಹಿಂಬದಿಯ ಸ್ಲಂ ಪ್ರದೇಶಗಳು ಹಾಗೂ ಮುಂಭಾಗದಲ್ಲಿ ನಿಂತಿದ್ದ 3 ಬಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ದಿನೇಶ್ ಕುಮಾರ್ ಹೇಳಿದ್ದಾರೆ.

Breaking News ಹರ್ಯಾಣದ ಖಾಸಗಿ ಬಸ್‌ಗಳ ವರ್ಕ್‌ಶಾಪ್‌ನಲ್ಲಿ ಅಗ್ನಿ ಅವಘಡ, 3 ಬಸ್‌ಗಳು ಬೆಂಕಿಗೆ ಆಹುತಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 06, 2022 | 4:04 PM

Share

ಹರ್ಯಾಣದ ಖಾಸಗಿ ಬಸ್‌ಗಳ ವರ್ಕ್‌ಶಾಪ್‌ನಲ್ಲಿ ಅಗ್ನಿ ಅವಘಡ, 3 ಬಸ್‌ಗಳು ಬೆಂಕಿಗಾಹುತಿಯಾಗಿವೆ. ಮಾಹಿತಿ ಪಡೆದು ಭೀಮನಗರ ಅಗ್ನಿಶಾಮಕ ಠಾಣೆಯಿಂದ 2 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಿದ್ದೇವೆ. ನಾವು ಬೆಂಕಿಯನ್ನು ತ್ವರಿತವಾಗಿ ನಿಯಂತ್ರಿಸಿದ್ದೇವೆ, ಅದನ್ನು ಹರಡಲು ಬಿಡಲಿಲ್ಲ. ಹಿಂಬದಿಯ ಸ್ಲಂ ಪ್ರದೇಶಗಳು ಹಾಗೂ ಮುಂಭಾಗದಲ್ಲಿ ನಿಂತಿದ್ದ 3 ಬಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ದಿನೇಶ್ ಕುಮಾರ್ ಹೇಳಿದ್ದಾರೆ.

ಶೀತಲಾ ಮಾತಾ ದೇವಸ್ಥಾನದ ಬಳಿ ಬೆಳಗ್ಗೆ 11:30 ರ ಸುಮಾರಿಗೆ ಈ ಘಟನೆ ನಡೆದಿದೆ. ಗುರುಗ್ರಾಮದ ಶೀತಲಾ ಮಾತಾ ರಸ್ತೆಯಲ್ಲಿರುವ ನೀರಿನ ಟ್ಯಾಂಕ್‌ನ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಎಲ್ಲೆಡೆ ಭಯದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿನ ಗೋದಾಮಿನಲ್ಲಿದ್ದ ಪ್ಲಾಸ್ಟಿಕ್ ಟ್ಯಾಂಕ್ ಹಾಗೂ ಇತರೆ ವಸ್ತುಗಳಿಂದ ಬೆಂಕಿ ಹೆಚ್ಚಾಯಿತು. ಈ ಬೆಂಕಿಯ ಘಟನೆಯ ನಂತರ, ದೂರದವರೆಗೆ ಆಕಾಶದಲ್ಲಿ ಕಪ್ಪು ಹೊಗೆಯೊಂದು ಗೋಚರಿಸಿತು. ತಕ್ಷಣ ಅಗ್ನಿಶಾಮಕ ದಳಕ್ಕೆ ಬೆಂಕಿಯ ಬಗ್ಗೆ ಮಾಹಿತಿ ನೀಡಲಾಗಿದ್ದು, ಸಮೀಪದ ಅಗ್ನಿಶಾಮಕ ಠಾಣೆಗಳಿಂದ ಸುಮಾರು ಅರ್ಧ ಡಜನ್ ವಾಹನಗಳು ಬೆಂಕಿಯನ್ನು ನಿಯಂತ್ರಿಸಲು ಬಂದವು.

ಆದರೆ, ಇದಕ್ಕೂ ಮುನ್ನವೇ ಜೋರಾಗಿ ಗಾಳಿ ಬೀಸಿದ್ದರಿಂದ ಗೋದಾಮಿನ ಬಳಿಯಿರುವ ಖಾಸಗಿ ಬಸ್‌ಗಳ ವರ್ಕ್‌ಶಾಪ್‌ಗೆ ಬೆಂಕಿ ತಗುಲಿದ್ದು, ಅಲ್ಲೇ ನಿಂತಿದ್ದ ಖಾಸಗಿ ಬಸ್‌ಗಳಿಗೂ ಬೆಂಕಿ ಆವರಿಸಿದೆ. ಬಸ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಕಾರ್ಯಾಗಾರದಲ್ಲಿ ಕೆಲಸ ಮಾಡುವ ಸಿಬ್ಬಂದಿ ಬಸ್‌ಗಳನ್ನು ಸುಮಾರು 7 ಬಸ್‌ಗಳನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಈ ಹೊತ್ತಲ್ಲಿ 3 ಬಸ್‌ಗಳು ಬೆಂಕಿಗೆ ಆಹುತಿಯಾಗಿವೆ. ಈ ಘಟನೆ ಕುರಿತು ಅಗ್ನಿಶಾಮಕ ಅಧಿಕಾರಿ ದಿನೇಶ್ ಕುಮಾರ್ ಮಾತನಾಡಿ, ಬೆಂಕಿಯನ್ನು ಹೆಚ್ಚು ಹರಡಲು ಬಿಡದೆ ಬೆಂಕಿಯನ್ನು ಹತೋಟಿಗೆ ತಂದಿದ್ದೇವೆ.ಇಲ್ಲಿ ಹಿಂಬದಿಯ 2 ಸ್ಲಂ ಮತ್ತು ಮುಂಭಾಗದ 3 ಬಸ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತನಿಖೆಯ ನಂತರ, ಎಷ್ಟು ಹಾನಿಯಾಗಿದೆ ಎಂದು ಹೇಳಲು ಸಾಧ್ಯವಾಗುತ್ತದೆ ಎಂದಿದ್ದಾರೆ.

Published On - 3:14 pm, Tue, 6 September 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ