AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಹರ್ಯಾಣದ ಖಾಸಗಿ ಬಸ್‌ಗಳ ವರ್ಕ್‌ಶಾಪ್‌ನಲ್ಲಿ ಅಗ್ನಿ ಅವಘಡ, 3 ಬಸ್‌ಗಳು ಬೆಂಕಿಗೆ ಆಹುತಿ

ನಾವು ಬೆಂಕಿಯನ್ನು ತ್ವರಿತವಾಗಿ ನಿಯಂತ್ರಿಸಿದ್ದೇವೆ, ಅದನ್ನು ಹರಡಲು ಬಿಡಲಿಲ್ಲ. ಹಿಂಬದಿಯ ಸ್ಲಂ ಪ್ರದೇಶಗಳು ಹಾಗೂ ಮುಂಭಾಗದಲ್ಲಿ ನಿಂತಿದ್ದ 3 ಬಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ದಿನೇಶ್ ಕುಮಾರ್ ಹೇಳಿದ್ದಾರೆ.

Breaking News ಹರ್ಯಾಣದ ಖಾಸಗಿ ಬಸ್‌ಗಳ ವರ್ಕ್‌ಶಾಪ್‌ನಲ್ಲಿ ಅಗ್ನಿ ಅವಘಡ, 3 ಬಸ್‌ಗಳು ಬೆಂಕಿಗೆ ಆಹುತಿ
TV9 Web
| Edited By: |

Updated on:Sep 06, 2022 | 4:04 PM

Share

ಹರ್ಯಾಣದ ಖಾಸಗಿ ಬಸ್‌ಗಳ ವರ್ಕ್‌ಶಾಪ್‌ನಲ್ಲಿ ಅಗ್ನಿ ಅವಘಡ, 3 ಬಸ್‌ಗಳು ಬೆಂಕಿಗಾಹುತಿಯಾಗಿವೆ. ಮಾಹಿತಿ ಪಡೆದು ಭೀಮನಗರ ಅಗ್ನಿಶಾಮಕ ಠಾಣೆಯಿಂದ 2 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಿದ್ದೇವೆ. ನಾವು ಬೆಂಕಿಯನ್ನು ತ್ವರಿತವಾಗಿ ನಿಯಂತ್ರಿಸಿದ್ದೇವೆ, ಅದನ್ನು ಹರಡಲು ಬಿಡಲಿಲ್ಲ. ಹಿಂಬದಿಯ ಸ್ಲಂ ಪ್ರದೇಶಗಳು ಹಾಗೂ ಮುಂಭಾಗದಲ್ಲಿ ನಿಂತಿದ್ದ 3 ಬಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ದಿನೇಶ್ ಕುಮಾರ್ ಹೇಳಿದ್ದಾರೆ.

ಶೀತಲಾ ಮಾತಾ ದೇವಸ್ಥಾನದ ಬಳಿ ಬೆಳಗ್ಗೆ 11:30 ರ ಸುಮಾರಿಗೆ ಈ ಘಟನೆ ನಡೆದಿದೆ. ಗುರುಗ್ರಾಮದ ಶೀತಲಾ ಮಾತಾ ರಸ್ತೆಯಲ್ಲಿರುವ ನೀರಿನ ಟ್ಯಾಂಕ್‌ನ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಎಲ್ಲೆಡೆ ಭಯದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿನ ಗೋದಾಮಿನಲ್ಲಿದ್ದ ಪ್ಲಾಸ್ಟಿಕ್ ಟ್ಯಾಂಕ್ ಹಾಗೂ ಇತರೆ ವಸ್ತುಗಳಿಂದ ಬೆಂಕಿ ಹೆಚ್ಚಾಯಿತು. ಈ ಬೆಂಕಿಯ ಘಟನೆಯ ನಂತರ, ದೂರದವರೆಗೆ ಆಕಾಶದಲ್ಲಿ ಕಪ್ಪು ಹೊಗೆಯೊಂದು ಗೋಚರಿಸಿತು. ತಕ್ಷಣ ಅಗ್ನಿಶಾಮಕ ದಳಕ್ಕೆ ಬೆಂಕಿಯ ಬಗ್ಗೆ ಮಾಹಿತಿ ನೀಡಲಾಗಿದ್ದು, ಸಮೀಪದ ಅಗ್ನಿಶಾಮಕ ಠಾಣೆಗಳಿಂದ ಸುಮಾರು ಅರ್ಧ ಡಜನ್ ವಾಹನಗಳು ಬೆಂಕಿಯನ್ನು ನಿಯಂತ್ರಿಸಲು ಬಂದವು.

ಆದರೆ, ಇದಕ್ಕೂ ಮುನ್ನವೇ ಜೋರಾಗಿ ಗಾಳಿ ಬೀಸಿದ್ದರಿಂದ ಗೋದಾಮಿನ ಬಳಿಯಿರುವ ಖಾಸಗಿ ಬಸ್‌ಗಳ ವರ್ಕ್‌ಶಾಪ್‌ಗೆ ಬೆಂಕಿ ತಗುಲಿದ್ದು, ಅಲ್ಲೇ ನಿಂತಿದ್ದ ಖಾಸಗಿ ಬಸ್‌ಗಳಿಗೂ ಬೆಂಕಿ ಆವರಿಸಿದೆ. ಬಸ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಕಾರ್ಯಾಗಾರದಲ್ಲಿ ಕೆಲಸ ಮಾಡುವ ಸಿಬ್ಬಂದಿ ಬಸ್‌ಗಳನ್ನು ಸುಮಾರು 7 ಬಸ್‌ಗಳನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಈ ಹೊತ್ತಲ್ಲಿ 3 ಬಸ್‌ಗಳು ಬೆಂಕಿಗೆ ಆಹುತಿಯಾಗಿವೆ. ಈ ಘಟನೆ ಕುರಿತು ಅಗ್ನಿಶಾಮಕ ಅಧಿಕಾರಿ ದಿನೇಶ್ ಕುಮಾರ್ ಮಾತನಾಡಿ, ಬೆಂಕಿಯನ್ನು ಹೆಚ್ಚು ಹರಡಲು ಬಿಡದೆ ಬೆಂಕಿಯನ್ನು ಹತೋಟಿಗೆ ತಂದಿದ್ದೇವೆ.ಇಲ್ಲಿ ಹಿಂಬದಿಯ 2 ಸ್ಲಂ ಮತ್ತು ಮುಂಭಾಗದ 3 ಬಸ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತನಿಖೆಯ ನಂತರ, ಎಷ್ಟು ಹಾನಿಯಾಗಿದೆ ಎಂದು ಹೇಳಲು ಸಾಧ್ಯವಾಗುತ್ತದೆ ಎಂದಿದ್ದಾರೆ.

Published On - 3:14 pm, Tue, 6 September 22

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ