AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಹರ್ಯಾಣದ ಖಾಸಗಿ ಬಸ್‌ಗಳ ವರ್ಕ್‌ಶಾಪ್‌ನಲ್ಲಿ ಅಗ್ನಿ ಅವಘಡ, 3 ಬಸ್‌ಗಳು ಬೆಂಕಿಗೆ ಆಹುತಿ

ನಾವು ಬೆಂಕಿಯನ್ನು ತ್ವರಿತವಾಗಿ ನಿಯಂತ್ರಿಸಿದ್ದೇವೆ, ಅದನ್ನು ಹರಡಲು ಬಿಡಲಿಲ್ಲ. ಹಿಂಬದಿಯ ಸ್ಲಂ ಪ್ರದೇಶಗಳು ಹಾಗೂ ಮುಂಭಾಗದಲ್ಲಿ ನಿಂತಿದ್ದ 3 ಬಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ದಿನೇಶ್ ಕುಮಾರ್ ಹೇಳಿದ್ದಾರೆ.

Breaking News ಹರ್ಯಾಣದ ಖಾಸಗಿ ಬಸ್‌ಗಳ ವರ್ಕ್‌ಶಾಪ್‌ನಲ್ಲಿ ಅಗ್ನಿ ಅವಘಡ, 3 ಬಸ್‌ಗಳು ಬೆಂಕಿಗೆ ಆಹುತಿ
TV9 Web
| Edited By: |

Updated on:Sep 06, 2022 | 4:04 PM

Share

ಹರ್ಯಾಣದ ಖಾಸಗಿ ಬಸ್‌ಗಳ ವರ್ಕ್‌ಶಾಪ್‌ನಲ್ಲಿ ಅಗ್ನಿ ಅವಘಡ, 3 ಬಸ್‌ಗಳು ಬೆಂಕಿಗಾಹುತಿಯಾಗಿವೆ. ಮಾಹಿತಿ ಪಡೆದು ಭೀಮನಗರ ಅಗ್ನಿಶಾಮಕ ಠಾಣೆಯಿಂದ 2 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಿದ್ದೇವೆ. ನಾವು ಬೆಂಕಿಯನ್ನು ತ್ವರಿತವಾಗಿ ನಿಯಂತ್ರಿಸಿದ್ದೇವೆ, ಅದನ್ನು ಹರಡಲು ಬಿಡಲಿಲ್ಲ. ಹಿಂಬದಿಯ ಸ್ಲಂ ಪ್ರದೇಶಗಳು ಹಾಗೂ ಮುಂಭಾಗದಲ್ಲಿ ನಿಂತಿದ್ದ 3 ಬಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ದಿನೇಶ್ ಕುಮಾರ್ ಹೇಳಿದ್ದಾರೆ.

ಶೀತಲಾ ಮಾತಾ ದೇವಸ್ಥಾನದ ಬಳಿ ಬೆಳಗ್ಗೆ 11:30 ರ ಸುಮಾರಿಗೆ ಈ ಘಟನೆ ನಡೆದಿದೆ. ಗುರುಗ್ರಾಮದ ಶೀತಲಾ ಮಾತಾ ರಸ್ತೆಯಲ್ಲಿರುವ ನೀರಿನ ಟ್ಯಾಂಕ್‌ನ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಎಲ್ಲೆಡೆ ಭಯದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿನ ಗೋದಾಮಿನಲ್ಲಿದ್ದ ಪ್ಲಾಸ್ಟಿಕ್ ಟ್ಯಾಂಕ್ ಹಾಗೂ ಇತರೆ ವಸ್ತುಗಳಿಂದ ಬೆಂಕಿ ಹೆಚ್ಚಾಯಿತು. ಈ ಬೆಂಕಿಯ ಘಟನೆಯ ನಂತರ, ದೂರದವರೆಗೆ ಆಕಾಶದಲ್ಲಿ ಕಪ್ಪು ಹೊಗೆಯೊಂದು ಗೋಚರಿಸಿತು. ತಕ್ಷಣ ಅಗ್ನಿಶಾಮಕ ದಳಕ್ಕೆ ಬೆಂಕಿಯ ಬಗ್ಗೆ ಮಾಹಿತಿ ನೀಡಲಾಗಿದ್ದು, ಸಮೀಪದ ಅಗ್ನಿಶಾಮಕ ಠಾಣೆಗಳಿಂದ ಸುಮಾರು ಅರ್ಧ ಡಜನ್ ವಾಹನಗಳು ಬೆಂಕಿಯನ್ನು ನಿಯಂತ್ರಿಸಲು ಬಂದವು.

ಆದರೆ, ಇದಕ್ಕೂ ಮುನ್ನವೇ ಜೋರಾಗಿ ಗಾಳಿ ಬೀಸಿದ್ದರಿಂದ ಗೋದಾಮಿನ ಬಳಿಯಿರುವ ಖಾಸಗಿ ಬಸ್‌ಗಳ ವರ್ಕ್‌ಶಾಪ್‌ಗೆ ಬೆಂಕಿ ತಗುಲಿದ್ದು, ಅಲ್ಲೇ ನಿಂತಿದ್ದ ಖಾಸಗಿ ಬಸ್‌ಗಳಿಗೂ ಬೆಂಕಿ ಆವರಿಸಿದೆ. ಬಸ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಕಾರ್ಯಾಗಾರದಲ್ಲಿ ಕೆಲಸ ಮಾಡುವ ಸಿಬ್ಬಂದಿ ಬಸ್‌ಗಳನ್ನು ಸುಮಾರು 7 ಬಸ್‌ಗಳನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಈ ಹೊತ್ತಲ್ಲಿ 3 ಬಸ್‌ಗಳು ಬೆಂಕಿಗೆ ಆಹುತಿಯಾಗಿವೆ. ಈ ಘಟನೆ ಕುರಿತು ಅಗ್ನಿಶಾಮಕ ಅಧಿಕಾರಿ ದಿನೇಶ್ ಕುಮಾರ್ ಮಾತನಾಡಿ, ಬೆಂಕಿಯನ್ನು ಹೆಚ್ಚು ಹರಡಲು ಬಿಡದೆ ಬೆಂಕಿಯನ್ನು ಹತೋಟಿಗೆ ತಂದಿದ್ದೇವೆ.ಇಲ್ಲಿ ಹಿಂಬದಿಯ 2 ಸ್ಲಂ ಮತ್ತು ಮುಂಭಾಗದ 3 ಬಸ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತನಿಖೆಯ ನಂತರ, ಎಷ್ಟು ಹಾನಿಯಾಗಿದೆ ಎಂದು ಹೇಳಲು ಸಾಧ್ಯವಾಗುತ್ತದೆ ಎಂದಿದ್ದಾರೆ.

Published On - 3:14 pm, Tue, 6 September 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್